- ಮಾಧ್ಯಮ ಸ್ವಾತಂತ್ರ್ಯಕ್ಕೆ ಅನುವು ಮಾಡಿಕೊಡಲು ಕಾಂಗ್ರೆಸ್ ಮುಖಂಡರ ಮನವಿ
- ಮಾಧ್ಯಮ ಸ್ವಾತಂತ್ರ್ಯ ಹರಣ ಮಾಡಿದ್ದ ಬಿಜೆಪಿ ಕ್ರಮ ಖಂಡಿಸಿದ ನಟರಾಜ್ ಗೌಡ
ಬಿಜೆಪಿ ಸರ್ಕಾರದ ಅವಧಿಯಲ್ಲಾಗಿದ್ದ ಮಾಧ್ಯಮ ನಿಯಂತ್ರಣವನ್ನು ಸಡಿಲಗೊಳಿಸಿ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುವಂತಹ ವಾತಾವರಣವನ್ನು ರೂಪಿಸಿಕೊಡುವಂತೆ ಕಾಂಗ್ರೆಸ್ ಮುಖಂಡ ನಟರಾಜ್ ಗೌಡ ಒತ್ತಾಯಿಸಿದ್ದಾರೆ.
ಟ್ವೀಟ್ ಮೂಲಕ ತಮ್ಮ ಒತ್ತಾಯವನ್ನು ಸರ್ಕಾರದೆದುರು ಮಂಡಿಸಿರುವ ಅವರು ನಮ್ಮ ಸರ್ಕಾರದ ಅವಧಿಯಲ್ಲಿ ಸರ್ಕಾರದ ಸಕಲ ಮಾಹಿತಿಗಳು ಜನರಿಗೆ ಪಾರದರ್ಶಕವಾಗಿ ತಲುಪುವಂತಾಗಲಿ ಎಂದು ಆಶಿಸಿದ್ದಾರೆ. ಅವರ ಟ್ವೀಟ್ ಈ ಕೆಳಗಿನಂತಿದೆ.
ಮಾಧ್ಯಮಗಳ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸ, ಮಾಧ್ಯಮಗಳ ಮೂಲಕ ಮಾಹಿತಿಯನ್ನು ಪಡೆಯುವ ಜನಸಾಮಾನ್ಯರ ಹಕ್ಕನ್ನು ಹತ್ತಿಕ್ಕುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿತ್ತು.
ಕಲಾಪಗಳನ್ನು ಚಿತ್ರಿಸುವ ನೇರ ಪ್ರಸಾರ ಮಾಡುವುದನ್ನು ನಿರ್ಬಂಧಿಸಲಾಗಿತ್ತು. ಸರ್ಕಾರವು ಈ ನಿರ್ಬಂಧವನ್ನು ತಕ್ಷಣವೇ ಹಿಂಪಡೆದು ಮಾಧ್ಯಮಗಳ ಸ್ವಾತಂತ್ರ್ಯವನ್ನು ಪುನರ್ ಸ್ಥಾಪಿಸಬೇಕಾಗಿ ಮನವಿ ಮಾಡುತ್ತೇನೆಂದು ಅವರು ಹೇಳಿಕೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ?:ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಯುವತಿ ಸಾವು: ಬಸವರಾಜ ಬೊಮ್ಮಾಯಿ
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸದನದೊಳಗೆ ಶಾಸಕರ ಮೊಬೈಲ್ ಬಳಕೆ ಹಾಗೂ ಅಶ್ಲೀಲ ವೀಡಿಯೋ ವೀಕ್ಷಿಸಿದ ವಿಚಾರ ಸದನಕ್ಕೆ ಕಪ್ಪು ಚುಕ್ಕಿ ತಂದ ಬಳಿಕ ಸದನದ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಾಧ್ಯಮಗಳ ಚಿತ್ರೀಕರಣಕ್ಕೆ ಸಭಾಧ್ಯಕ್ಷರು ನಿಷೇಧ ಹೇರಿದ್ದರು.
ಈ ವಿಚಾರದಲ್ಲಿ ಪರ ವಿರೋಧವೂ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ನಟರಾಜ್ ಗೌಡ ಸರ್ಕಾರಕ್ಕೆ ಈ ಮನವಿ ಮಾಡಿ ಮಾಧ್ಯಮ ಸ್ವಾತಂತ್ರ್ಯವನ್ನು ಮರು ಸ್ಥಾಪಿಸುವಂತೆ ಮನವಿ ಮಾಡಿದ್ದಾರೆ.