ಡಾ.ಅಂಬರೀಶ್ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Date:

  • ಸಿಎಂರಿಂದ ರೇಸ್ ಕೋರ್ಸ್ ರಸ್ತೆಯ ಅಂಬರೀಶ್ ನಾಮಫಲಕ ಅನಾವರಣ
  • ಅಂಬರೀಶ್ ಸ್ಮಾರಕವನ್ನೂ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಕರ್ನಾಟಕದ ರೆಬಲ್ ಸ್ಟಾರ್, ಎಲ್ಲರ ಮನಸ್ಸನ್ನು ಗೆದ್ದಅಂಬರೀಶ್ ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸೋವಾರ ಸಂಜೆ, ಮೌರ್ಯ ಸರ್ಕಲ್‌ನಿಂದ ಬಸವೇಶ್ವರ ವೃತ್ತದ ವರೆಗಿನ ರೇಸ್ ಕೋರ್ಸ್ ರಸ್ತೆಗೆ ರೆಬೆಲ್ ಸ್ಟಾರ್ ಡಾ.ಎಂ.ಹೆಚ್.ಅಂಬರೀಶ್ ರಸ್ತೆ ಎಂದು ನಾಮಕರಣ ಮಾಡಿ ಅದರ ನಾಮಫಲಕವನ್ನು ಸಿಎಂ ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಅವರು, ಅಂಬರೀಶ್ ಅವರ ನೆನಪಿಗಾಗಿ ಇವತ್ತು ರೇಸ್ ಕೋರ್ಸ್ ರಸ್ತೆಗೆ ಅವರ ಹೆಸರನ್ನೇ ನಾಮಕರಣ ಮಾಡಿ, ಅದರ ಫಲಕವನ್ನು ಉದ್ಘಾಟಿಸುತ್ತಿದ್ದೇನೆ. ಇದು ಅವರು ಹೆಚ್ಚು ಓಡಾಡಿದ ಸ್ಥಳ. ಎಲ್ಲ ಅಭಿಮಾನಿಗಳ ಒತ್ತಾಸೆ ಮೇರೆಗೆ ಇವತ್ತು ಇವರ ಹೆಸರನ್ನು ಇಟ್ಟಿದ್ದೇವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಂಬರೀಶ್ ಅವರು ನನ್ನ ಮಿತ್ರರು. ಅವರ ಜೀವನ ತೆರೆದ ಪುಸ್ತಕ. ಹಲವಾರು ಬಾರಿ ಬೇಟಿಯಾಗಬೇಕು ಅಂದಾಗ ಅಲ್ಲೇ ರೇಸ್ ಕೋರ್ಸ್ ನಲ್ಲಿ ಇರುತ್ತೇನೆ ಬಾರಯ್ಯ ಎನ್ನುತ್ತಿದ್ದರು. ಅವರ ಹೆಸರನ್ನು ಬಿಟ್ಟು ಬೇರೆ ಯಾವ ಹೆಸರು ಈ ರಸ್ತೆಗೆ ಸೂಕ್ತವಲ್ಲ ಎಂದು ಬೊಮ್ಮಾಯಿ ಹೇಳಿದರು.

ಈ ಸುದ್ದಿ ಓದಿದ್ದೀರಾ? :ಇಂದು ಬೊಮ್ಮಾಯಿ, ಅಂದು ಯಡಿಯೂರಪ್ಪ; ಆತಂಕ ಮೂಡಿಸಿದ ಹೆಲಿಕಾಪ್ಟರ್…

ರೀಲ್ ಆ್ಯಂಡ್ ರಿಯಲ್ ಲೈಫ್ ಎರಡು ಒಂದೆಯಾಗಿದ್ದು, ನೇರ ವ್ಯಕ್ತಿತ್ವ ಅವರದ್ದಾಗಿತ್ತು.ಕ್ರೀಡೆಯಲ್ಲೂ ಪ್ರತಿಭೆಯನ್ನು ಹೊಂದಿದ್ದ ಅವರು, ಸಾರ್ವಜನಿಕ ಜೀವನಕ್ಕೆ ಬಂದಮೇಲೆ ವಸತಿ ಸಚಿವರಾಗಿ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ.

ಕಾವೇರಿ ವಿಚಾರ ಬಂದಾಗ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟವರು. ಅಧಿಕಾರ ಅವರನ್ನು ಹುಡುಕಿಕೊಂಡು ಬರುತ್ತಿತ್ತು ಎಂದ ಬೊಮ್ಮಾಯಿ ಹೇಳಿದರು. ಬಳಿಕ ಕಂಠೀರವ ಸ್ಟುಡಿಯೋ ಆವರಣದಲ್ಲಿನ ಅಂಬರೀಶ್ ಅವರ ಸ್ಮಾರಕವನ್ನೂ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಅಂಬರೀಶ್ ಪತ್ನಿ, ಸಂಸದೆ ಸುಮಲತಾ, ಪುತ್ರ ಅಭಿಷೇಕ್ ಅಂಬರೀಶ್, ನಟ ರಾಘವೇಂದ್ರ ರಾಜ್ ಕುಮಾರ್, ಫಿಲಂ ಚೇಂಬರ್ ಅಧ್ಯಕ್ಷ ಭಾ.ಮ ಹರೀಶ್ , ರಾಕ್ ಲೈನ್ ವೆಂಕಟೇಶ್, ಚಿನ್ನೆಗೌಡರು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂ. ದಕ್ಷಿಣ ಲೋಕಸಭಾ ಕ್ಷೇತ್ರ | 16 ಕಡೆ ಶೋಧ ಕಾರ್ಯ: 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರು ದಕ್ಷಿಣ...

ಬೆಂಗಳೂರು | ಅಗ್ನಿ ಅವಘಡ: ₹5 ಕೋಟಿ ಮೌಲ್ಯದ ಬಟ್ಟೆ, 40 ಬೈಕ್ ಭಸ್ಮ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದ ಮಣಿಪಾಲ್​ ಕಂಟ್ರಿ ರೋಡ್​​ನಲ್ಲಿರುವ ಟಿಂಬರ್​ ಯಾರ್ಡ್​ನಲ್ಲಿ...

ಪ್ರಧಾನಿ ಧರ್ಮ ರಾಜಕಾರಣ ಮಾಡುವ ಬಗ್ಗೆ ಎಂದಿಗೂ ಯೋಚಿಸಿಲ್ಲ ಎಂದ ರಾಜನಾಥ್ ಸಿಂಗ್!

ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಅವರು...

ಗಡ್ಕರಿ ಚುನಾವಣಾ ಅಭಿಯಾನಕ್ಕೆ ವಿದ್ಯಾರ್ಥಿಗಳ ಬಳಕೆ; ಶಾಲೆಯ ವಿರುದ್ಧ ಕ್ರಮಕ್ಕೆ ಇಸಿ ಆದೇಶ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಚುನಾವಣಾ ಪ್ರಚಾರದಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡ...