ಹಿಂದಿ ಹೇರಿಕೆ | ಭಾಷಾ ಯುದ್ಧಕ್ಕೆ ತಮಿಳುನಾಡು ಸಿದ್ಧ: ಉದಯನಿಧಿ ಸ್ಟ್ಯಾಲಿನ್ ಘೋಷಣೆ

Date:

Advertisements

ಕೇಂದ್ರದ ತ್ರಿಭಾಷಾ ನೀತಿ ಮತ್ತು ಹಿಂದಿ ಹೇರಿಕೆ ವಿಚಾರದಲ್ಲಿ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಬಿಜೆಪಿ ನಡುವೆ ವಾಕ್ಸಮರ ಏರ್ಪಟ್ಟಿದೆ. “ಭಾಷಾ ಯುದ್ಧಕ್ಕೆ ತಮಿಳುನಾಡು ಸಿದ್ಧ” ಎಂದು ಉದಯನಿಧಿ ಸ್ಟ್ಯಾಲಿನ್ ಘೋಷಿಸಿದ್ದಾರೆ. ಹಾಗೆಯೇ “ಹಿಂದಿಯನ್ನು ಒಪ್ಪಿಕೊಳ್ಳುವ ರಾಜ್ಯಗಳು ತಮ್ಮ ಮಾತೃಭಾಷೆಯನ್ನು ಕಳೆದುಕೊಳ್ಳಲಿದೆ” ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಇತ್ತೀಚೆಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸದಿದ್ದರೆ ಸಮಗ್ರ ಶಿಕ್ಷ ಮಿಷನ್‌ಗೆ 2,400 ರೂಪಾಯಿ ನಿಧಿಯನ್ನು ನೀಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು. ಕೇಂದ್ರ ಸಚಿವರ ಈ ಬೆದರಿಕೆಗೂ ತಮಿಳುನಾಡು ನಾಯಕರು ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿದ್ದೀರಾ? ದಾವಣಗೆರೆ | ʼಹಿಂದಿ ಹೇರಿಕೆʼ ಎಂಬುದು ಕೇವಲ ರಾಜಕೀಯ ದೊಂಬರಾಟವೇ?; ಕನ್ನಡಪರ ಹೋರಾಟಗಾರರ ಆಕ್ರೋಶ

Advertisements

“ನಾವು ನಮ್ಮ ಹಣವನ್ನು ಕೇಳುತ್ತಿದ್ದೇವೆ. ನಮಗೆ ನೀಡಬೇಕಾದ ಬಾಕಿ ಹಣವನ್ನು ಕೇಳುತ್ತಿದ್ದೇವೆ. ಅದು ನಮ್ಮ ಹಕ್ಕಿನ ಹಣ. ಧರ್ಮೇಂದ್ರ ಪ್ರಧಾನ್ ಅವರು ತ್ರಿಭಾಷಾ ನೀತಿಯನ್ನು ಒಪ್ಪಿಕೊಂಡರೆ ಮಾತ್ರ ನಿಧಿ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಆದರೆ ನಾವು ನಿಮ್ಮ ತಂದೆಯ ಹಣವನ್ನು ಕೇಳುತ್ತಿಲ್ಲ. ನಾವು ಭಿಕ್ಷೆ ಬೇಡುತ್ತಿಲ್ಲ” ಎಂದು ತಿರುಗೇಟು ನೀಡಿದ್ದಾರೆ.

ತಮಿಳುನಾಡಿನಲ್ಲಿ ದ್ವಿಭಾಷಾ ನೀತಿಯ ಜಾರಿಯಲ್ಲಿದೆ. ಶಿಕ್ಷಕರು ತಮಿಳು ಮತ್ತು ಇಂಗ್ಲೀಷ್ ಭಾಷೆಯನ್ನು ವಿದ್ಯಾರ್ಥಿಗಳಿಗೆ ಕಲಿಸುತ್ತಾರೆ. ಹಾಗೆಯೇ 1930 ಮತ್ತು 1960ರಲ್ಲಿ ತಮಿಳುನಾಡು ಹಿಂದಿ ವಿರೋಧಿ ಆಂದೋಳನಕ್ಕೆ ಸಾಕ್ಷಿಯಾಗಿದೆ. ಇಂದಿಗೂ ಸ್ಥಳೀಯ ಭಾಷೆಗಳು ನಾಶವಾಗುತ್ತಿರುವ ನಡುವೆ ತಮಿಳುನಾಡು ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯನ್ನು ತೀವ್ರವಾಗಿ ಖಂಡಿಸುತ್ತಾ ಬಂದಿದೆ.

ಇನ್ನು ತಮಿಳುನಾಡು ಮಾತ್ರವಲ್ಲ. ಹಲವು ದಕ್ಷಿಣ ಭಾರತದ ರಾಜ್ಯಗಳು ಹಿಂದಿ ಹೇರಿಕೆಯನ್ನು ವಿರೋಧಿಸಿದೆ. ಕರ್ನಾಟಕ, ಕೇರಳ, ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ, ಹಿಂದಿ ಹೇರಿಕೆಯನ್ನು ತೀವ್ರವಾಗಿ ವಿರೋಧಿಸಲಾಗುತ್ತಿದೆ. ಈ ನಡುವೆ ಈವರೆಗೆ ರಾಜ್ಯಕ್ಕೆ ನೀಡಬೇಕಾದ ನಿಧಿಯನ್ನು ಬಾಕಿಯಿರಿಸಿರುವ ಕೇಂದ್ರ ಸರ್ಕಾರ ಈ ಅವೈಜ್ಞಾನಿಕ ಶಿಕ್ಷಣ ನೀತಿ ಜಾರಿ ಮಾಡಿದರಷ್ಟೇ ನಿಧಿ ಬಿಡುಗಡೆ ಮಾಡಲಾಗುವುದು ಎಂಬ ‘ಬ್ಲ್ಯಾಕ್‌ಮೇಲ್’ ಮಾಡುತ್ತಿರುವುದು ಖಂಡನೀಯ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X