ದೆಹಲಿಗೆ ಬರುವಂತೆ ಈಶ್ವರಪ್ಪಗೆ ಅಮಿತ್ ಶಾ ಬುಲಾವ್

Date:

Advertisements

ಶಿವಮೊಗ್ಗದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆಂದು ಘೋಷಿಸಿ, ಪ್ರಚಾರ ಆರಂಭಿಸಿರುವ ಈಶ್ವರಪ್ಪಗೆ ಅಮಿತ್ ಶಾ ಕರೆ ಮಾಡಿದ್ದು, ದೆಹಲಿಗೆ ಬರುವಂತೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕದಲ್ಲೇ ಇರುವ ಅಮಿತ್ ಶಾ ಫೋನ್ ಕರೆಯ ಮೂಲಕ ಈಶ್ವರಪ್ಪ ಜೊತೆ ಮಾತನಾಡಿದ್ದಾರೆ. ಬುಧವಾರ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಸ್ವತಃ ಈಶ್ವರಪ್ಪ ಅವರೇ ತಮ್ಮ ಆಪ್ತರಿಗೆ ಮಾಹಿತಿ ನೀಡಿದ್ದಾರೆ.

ಬುಧವಾರ ದೆಹಲಿಗೆ ಹೋಗುವುದಾಗಿ ಹೇಳಿರುವ ಈಶ್ವರಪ್ಪ, ತಮ್ಮ ಸ್ಪರ್ಧೆಯ ನಿಲುವಿಗೂ ಬದ್ಧರಾಗಿರುವುದಾಗಿ ಹೇಳಿಕೊಂಡಿದ್ದಾರೆ.

Advertisements

ಹಾವೇರಿಯಲ್ಲಿ ತಮ್ಮ ಮಗನಿಗೆ ಬಿಜೆಪಿ ಟಿಕೆಟ್ ನೀಡುವಂತೆ ಈಶ್ವರಪ್ಪ ಬೇಡಿಕೆ ಇಟ್ಟಿದ್ದರು. ಆದರೆ, ಬಿಜೆಪಿ ಟಿಕೆಟ್‌ ನೀಡಿಲ್ಲ. ತಮ್ಮ ಮಗನಿಗೆ ಟಿಕೆಟ್ ನೀಡದೇ ಇರುವುದಕ್ಕೆ ಯಡಿಯೂರಪ್ಪ ಕಾರಣ ಎಂದು ಆರೋಪಿಸಿರುವ ಈಶ್ವರಪ್ಪ, ಶಿವಮೊಗ್ಗದಲ್ಲಿ ಯಡಿಯೂರಪ್ಪ ಪುತ್ರ, ಸಂಸದ ರಾಘವೇಂದ್ರ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

“ಪ್ರಧಾನಿ ಮೋದಿ ಹೇಳಿದರೂ ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದ ಹಿಂದೆ ಸರಿಯುವುದಿಲ್ಲ. ನನ್ನ ಸ್ಪರ್ಧೆ ಕುರಿತು ಪ್ರಧಾನಿ ಮೋದಿ ಕಾಲಿಗೆ ಬಿದ್ದು ಮನವರಿಕೆ ಮಾಡುತ್ತೇನೆ” ಎಂದು ಕೂಡ ಈಶ್ವರಪ್ಪ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಜೆಡಿಎಸ್‌ನಿಂದ ತುಂಗೆಗೆ ಬಾಗಿನ ಅರ್ಪಣೆ

ಶಿವಮೊಗ್ಗ, ನಗರ ಮಧ್ಯದಲ್ಲಿ ಹರಿಯುತ್ತಿರುವ ತುಂಗಾನದಿ ಪ್ರತಿವರ್ಷದಂತೆ ಈ ಬಾರಿಯೂ ತುಂಬಿ...

ಸೊರಬ | 30 ಅಡಿ ಬಾವಿಗೆ ಬಿದ್ದ ಆಕಳು ರಕ್ಷಣೆ

ಸೊರಬ, ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ಬಾವಿಗೆ ಬಿದ್ದ ಆಕಳನ್ನು ಅಗ್ನಿಶಾಮಕದಳದ ಸಿಬ್ಬಂದಿ...

ಶಿವಮೊಗ್ಗ | ಹಳೆ ದ್ವೇಷ : ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

ಶಿವಮೊಗ್ಗ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನಿಗೆ ಇನ್ನೊಬ್ಬ ಚಾಕುವಿನಿಂದ ಇರಿದು...

ಶಿವಮೊಗ್ಗ | ಉನ್ನತ ಶಿಕ್ಷಣ ಪಡೆಯಲು ಇಂಗ್ಲಿಷ್ ಕಲಿಕೆ ಸಹಕಾರಿ : ಬಿಇಒ ರಮೇಶ್

ಶಿವಮೊಗ್ಗ, ಹೊಳೆಹೊನ್ನುರು, ಪಟ್ಟಣ ಸಮೀಪದ ಕೂಡ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಭದ್ರಾಪುರ...

Download Eedina App Android / iOS

X