ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅತಂತ್ರ ಸರ್ಕಾರ ಬೇಡ; ಅಮಿತ್ ಶಾ

Date:

Advertisements
  • ಬಿಜೆಪಿಗೆ ಪೂರ್ಣ ಬಹುಮತ ನೀಡಿ ಎಂದ ಕೇಂದ್ರ ಗೃಹ ಸಚಿವ
  • ರಾಜ್ಯದಲ್ಲೀಗ ಬದಲಾವಣೆಯ ಬಿರುಗಾಳಿ ಬೀಸಿದೆ ಎಂದ ಸಿಎಂ

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅತಂತ್ರ ಸ್ಥಿತಿಗೆ ಅವಕಾಶ ನೀಡಬೇಡಿ. ಪೂರ್ಣ ಬಹುಮತದ ಸರ್ಕಾರ ರಚನೆಗೆ ಜನ ಅವಕಾಶ ನೀಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೇಳಿಕೊಂಡರು.

ಬೆಂಗಳೂರಿನ ಕೊಮ್ಮಘಟ್ಟದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಹಕಾರ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಹಲವು ಯೋಜನೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಅಪೂರ್ಣ ಸರ್ಕಾರ ಬೇಡ. ಪೂರ್ಣ ಬಹುಮತದ ಸದೃಢ ಬಿಜೆಪಿ ಸರ್ಕಾರ ರಚನೆ ಆಗಬೇಕು. ಈ ಮೂಲಕ ಪ್ರಧಾನಿಗಳ ಕೈಬಲಪಡಿಸಬೇಕು ಎಂದು ಅಮಿತ್ ಶಾ ಹೇಳಿದರು.

Advertisements

ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ , ಕರ್ನಾಟಕದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಜನಪರ ಸರ್ಕಾರವನ್ನು ಮತ್ತೊಮ್ಮೆ ತರಲಾಗುವುದು ಎಂದರು.

ರೈತರಿಗೆ ಅನುಕೂಲ;
ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಹಕಾರಿ ಇಲಾಖೆಯಲ್ಲಿ ಸಮರೋಪಾದಿ ಅಭಿವೃದ್ದಿ ಕಾರ್ಯಗಳಾಗಿವೆ. ರೈತರಿಗೆ ಶೂನ್ಯ ಬಡ್ಡಿದರದಲ್ಲಿ ನೀಡುವ ಸಾಲವನ್ನು ಮೂರು ಲಕ್ಷದಿಂದ 5 ಲಕ್ಷ ರೂ.ಗಳವರೆಗೆ ಏರಿಸಲಾಗಿದೆ.

ರೈತರಿಗೆ ಇರರಿಂದ ಬಹಳ ದೊಡ್ಡ ಅನುಕೂಲವಾಗಲಿದೆ. ಯಶಸ್ವಿನಿ ಯೋಜನೆಯನ್ನು ಪುನರಾರಂಭಿಸಿ 300 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

ರೈತರಿಗೆ ಜೀವನಜ್ಯೋತಿ ಜೀವ ವಿಮಾ ಪ್ರಾರಂಭ ಮಾಡಿ ಸಹಜ ಸಾವಿಗೂ 2 ಲಕ್ಷ ರೂ.ಗಳನ್ನು ಕುಟುಂಬದವರಿಗೆ ನೀಡಲಾಗುವುದು.
ಇದಕ್ಕಾಗಿ 180 ಕೋಟಿ ರೂ.ಗಳನ್ನು ರೈತರ ಪರವಾಗಿ ತುಂಬಲಾಗುತ್ತಿದೆ. ಬೀಜಗೊಬ್ಬರಕ್ಕೆ 10 ಸಾವಿರ ರೂ. ನೀಡುವ ಭೂ ಸಿರಿ ಯೋಜನೆಯನ್ನು ರೂಪಿಸಲಾಗಿದೆ ಎಂದು ಸಿಎಂ ಹೇಳಿದರು.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X