ಅಮಿತ್ ಶಾ ಓರ್ವ ಮಹಾನ್ ಸುಳ್ಳುಗಾರ: ಬರ ಪರಿಹಾರದ ಕುರಿತು ಗೃಹ ಸಚಿವರ ಹೇಳಿಕೆ ಖಂಡಿಸಿದ ಸಿಎಂ

Date:

Advertisements

ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬರ ಪರಿಹಾರದ ವಿಚಾರವನ್ನು ಪ್ರಸ್ತಾಪಿಸಿ, “ಕರ್ನಾಟಕ ಸರ್ಕಾರ ಬರ ಪರಿಹಾರಕ್ಕೆ ಮನವಿ ಸಲ್ಲಿಸಲು ಮೂರು ತಿಂಗಳು ತಡ ಮಾಡಿದ ಕಾರಣದಿಂದಾಗಿ ಕೇಂದ್ರ ಸರ್ಕಾರ ನಿಗದಿತ ಸಮಯಕ್ಕೆ ಪರಿಹಾರ ಬಿಡುಗಡೆ ಮಾಡಲಾಗಿಲ್ಲ” ಎಂದು ರಾಮನಗರದಲ್ಲಿ ಹೇಳಿಕೆ ನೀಡಿದ್ದರು.

ಈ ಹೇಳಿಕೆಯನ್ನು ಖಂಡಿಸಿರುವ ಸಿಎಂ ಸಿದ್ದರಾಮಯ್ಯ, “ಅಮಿತ್ ಶಾ ಓರ್ವ ಮಹಾನ್ ಸುಳ್ಳುಗಾರ. ಇಂಥಾ ಸುಳ್ಳನ್ನು ಹೇಳೋದೇ? ಎಂದು ಮೈಸೂರಿನಲ್ಲಿ ನಡೆದ ಸಭೆಯಲ್ಲಿ ಆಶ್ಚರ್ಯ ವ್ಯಕ್ತಪಡಿಸಿದರು.

“ಅಮಿತ್ ಶಾ ಅವರು ಸುಳ್ಳು ಹೇಳೋದು ನನಗೇನೂ ಆಶ್ಚರ್ಯ ಆಗಿಲ್ಲ, ಅವರ ಸುಳ್ಳುಗಳು ಹೊಸದೇನೂ ಅಲ್ಲ. ಆದರೆ ಇಂಥಾ ಸುಳ್ಳಾ ಹೇಳೋದೇ” ಎಂದು ಮೈಸೂರಿನಲ್ಲಿ ನಡೆದ ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಕೇಂದ್ರ ಸಚಿವರನ್ನು ಲೇವಡಿ ಮಾಡಿದರು.

Advertisements

“ರಾಜ್ಯದಲ್ಲಿ ಬರ ಘೋಷಣೆ ಆದ ಬಳಿಕ ನಾವು ಸೆಪ್ಟೆಂಬರ್ 23ರಂದೇ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೇವೆ. ಅಕ್ಟೋಬರ್‌ನಲ್ಲಿ ಕೇಂದ್ರ ತಂಡ ರಾಜ್ಯ ಪ್ರವಾಸ ಮಾಡಿ ಬರ ಕುರಿತಂತೆ ವರದಿ ನೀಡಿದೆ. ಆದರೂ ಅವತ್ತಿಂದ ಇವತ್ತಿನವರೆಗೂ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಬರ ಪರಿಹಾರದ ಒಂದೇ ಒಂದು ರೂಪಾಯಿಯನ್ನೂ ಕೊಡಲಿಲ್ಲ. ಈಗ ಬಂದು ಎಂಥಾ ಸುಳ್ಳು ಭಾಷಣ ಮಾಡಿದ್ದಾರೆ ನೋಡಿ” ಎಂದರು.

“ಮೋದಿ ಮತ್ತು ಅಮಿತ್ ಶಾ ಜೋಡಿ ಪ್ರವಾಹ ಬಂದಾಗ ಬರಲಿಲ್ಲ, ಬರಗಾಲ ಬಂದರೂ ಬರಲಿಲ್ಲ. ರಾಜ್ಯಕ್ಕೆ ಸಮಸ್ಯೆ ಆದಾಗಲೆಲ್ಲಾ ರಾಜ್ಯಕ್ಕೆ ತಲೆ ಹಾಕದವರು ಚುನಾವಣೆ ಬಂದಾಗ ಮಾತ್ರ ಓಡೋಡಿ‌ ಓಡೋಡಿ ಬಂದಿದ್ದಾರೆ” ಎಂದು ಸಿಎಂ ಲೇವಡಿ ಮಾಡಿದರು.

ಇದನ್ನು ಓದಿದ್ದೀರಾ? ಬರ ಪರಿಹಾರ: ಸುಳ್ಳು ಹೇಳಿದ ಶಾ ಅವರಿಗೆ ಸಾಕ್ಷಿ ಸಮೇತ ಕೃಷ್ಣಬೈರೇಗೌಡ ಪ್ರತಿಕ್ರಿಯೆ

“ಯಾವ ಮುಖ ಹೊತ್ತು ಮೋದಿ, ಅಮಿತ್ ಶಾ ರಾಜ್ಯದಲ್ಲಿ ಮೆರವಣಿಗೆ ಮಾಡ್ತಾರೆ? ರಾಜ್ಯದ ಜನರಿಗೆ ಇಷ್ಟು ದೊಡ್ಡ ಮಟ್ಟದ ದ್ರೋಹ ಎಸಗಿದ ಇವರನ್ನು ಕರೆಸಿ ಮೆರವಣಿಗೆ ಮಾಡ್ತಾರಲ್ಲಾ , ಬಿಜೆಪಿ-ಜೆಡಿಎಸ್ ನವರಿಗೆ ಮರ್ಯಾದೆ ಇಲ್ವಾ” ಎಂದು ಪ್ರಶ್ನಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X