ಅಮುಲ್ ವಿಚಾರದಲ್ಲಿ ಕಾಂಗ್ರೆಸ್​ ರಾಜಕೀಯ ಮಾಡುತ್ತಿದೆ ಎಂದ ಸಿಎಂ ಬೊಮ್ಮಾಯಿ

Date:

  • ನಂದಿನಿ‌ ಹಾಲನ್ನು ರಾಜ್ಯಕ್ಕೆ ಸೀಮಿತ ಮಾಡದಂತೆ ಸುಧಾಕರ್ ಮನವಿ
  • ಅಮುಲ್ ವಿಚಾರದಲ್ಲಿ ಕಾಂಗ್ರೆಸ್​ ರಾಜಕೀಯ ಮಾಡುತ್ತಿದೆ ಎಂದ ಸಿಎಂ

ರಾಜ್ಯದಲ್ಲಿ ಅಮುಲ್ ಮಾರಾಟದ ಹಿಂದಿನ ಹುನ್ನಾರಕ್ಕೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ನಂದಿನಿ ರಾಷ್ಟ್ರ ಮಟ್ಟದ ಬ್ರ್ಯಾಂಡ್‌. ಮುಂದಿನ ದಿನಗಳಲ್ಲಿ ದೇಶದ ನಂಬರ್ 1 ಸ್ಥಾನಕ್ಕೆ ಏಳಿಗೆ ಹೊಂದಲಿದೆ” ಎಂದಿದ್ದಾರೆ.

- Advertisement -

ಗುಜರಾತ್ ಮೂಲದ ಅಮುಲ್ ಕಂಪನಿ ರಾಜ್ಯದಲ್ಲಿ ತನ್ನ ವ್ಯಾಪಾರ ವಿಸ್ತರಿಸಿದೆ. ಅನುಮಾನಗಳಿಗೆ ಪುಷ್ಟಿ ನೀಡುವಂತೆ ರಾಜ್ಯದಲ್ಲಿ ಕೆಲ ದಿನಗಳಿಂದ ನಂದಿನಿ ಹಾಲು ಉತ್ಪನ್ನಗಳ ಅಭಾವ ಕಾಡುತ್ತಿದೆ. ಅಮುಲ್ ತಿರಸ್ಕರಿಸುವಂತೆ ಅಭಿಯಾನಗಳೂ ಆರಂಭವಾಗಿವೆ. ಈ ನಡುವೆ ಬಸವರಾಜ ಬೊಮ್ಮಾಯಿ ಅವರು ‘ಆತಂಕಪಡುವ ಅಗತ್ಯವಿಲ್ಲ’ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಅಮುಲ್ ವಿಚಾರದಲ್ಲಿ ಕಾಂಗ್ರೆಸ್​ ರಾಜಕೀಯ ಮಾಡುತ್ತಿದೆ. ಅಮುಲ್ ಬ್ರ್ಯಾಂಡ್​ ವಿಚಾರವಾಗಿ ಯಾರೂ ಆತಂಕಪಡಬೇಕಿಲ್ಲ. ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ವೃದ್ಧಿಗೆ​ ಮತ್ತಷ್ಟು ಕ್ರಮಕೈಗೊಳ್ಳುತ್ತೇವೆ” ಎಂದು ಭರವಸೆಯ ಮಾತಗಳನ್ನಾಡಿದ್ದಾರೆ.

ಅಮುಲ್ ಕಂಪನಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಚಿವ ಸುಧಾಕರ್, “ಬಿಜೆಪಿ ಸರ್ಕಾರ ಹಾಲಿಗೆ ಪ್ರೋತ್ಸಾಹ ಧನ ನೀಡಿದೆ. ಕೆಎಂಎಫ್ ಆದಾಯದಲ್ಲಿ ಹಾಲು ಉತ್ಪಾದಕರಿಗೆ‌ ಕೊಡುವ ವ್ಯವಸ್ಥೆ ಮಾಡಲಾಗಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು: ಎಚ್‌ ಡಿ ಕುಮಾರಸ್ವಾಮಿ

“ನಂದಿನಿ‌ ಹಾಲನ್ನು ಕೇವಲ ರಾಜ್ಯಕ್ಕೆ ಸೀಮಿತ ಮಾಡಬೇಡಿ. ಈಗಾಗಲೇ ಸೇನೆಗೆ, ತಿರುಪತಿ ತಿರುಮಲ,‌ ಮಹಾರಾಷ್ಟ್ರಕ್ಕೆ ನಮ್ಮ ಹಾಲು ಪೂರೈಕೆಯಾಗುತ್ತಿದೆ” ಎಂದು ಹೇಳಿದ್ದಾರೆ.

“ಇತರೆ ಬ್ರ್ಯಾಂಡ್​ನ ಹಾಲುಗಳನ್ನು ರಾಜ್ಯದಲ್ಲಿ ಹಿಂದಿನಿಂದಲೂ ಮಾರಾಟ ಮಾಡಲಾಗುತ್ತಿದೆ. ಅಮುಲ್ ಅಂದ್ರೆ ಬಿಜೆಪಿ, ನಂದಿನಿ ಅಂದ್ರೆ ಕಾಂಗ್ರೆಸ್ಸಾ” ಎಂದು ಪ್ರಶ್ನಿಸಿದ್ದಾರೆ.

ಅಮುಲ್‌ ಕಂಪನಿಯ ಜಾಹೀರಾತೊಂದು ಹಾಲು ಉತ್ಪಾದಕರಲ್ಲಿ ಆತಂಕ ಹುಟ್ಟಿಸಿದೆ. ಸಾಲದೆಂಬಂತೆ ರಾಜ್ಯದಲ್ಲಿ ದಿಢೀರನೇ ನಂದಿನಿ ಕಂಪನಿಯ ಉತ್ಪನ್ನಗಳ ಅಭಾವ ಕಾಡಲಾರಂಭಿಸಿದೆ.

ಇದಕ್ಕೆ ಪುಷ್ಟಿ ನೀಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ, ಅಮುಲ್ – ನಂದಿನಿ ವಿಲೀನದ ಬಗ್ಗೆ ಈ ಹಿಂದೆ ಮಾತನಾಡಿದ್ದರು.

ನಂದಿನಿ ಕಂಪನಿ ರಾಜ್ಯದ ಅನೇಕರ ನಾಡಿಮೀಡಿತ ಅದನ್ನು ನುಂಗಲು ಅಮುಲ್ ಕಂಪನಿ ತನ್ನ ಬೇರನ್ನು ರಾಜ್ಯದಲ್ಲಿ ಬಿಡುತ್ತಿದೆ ಎನ್ನುವುದು ಅನೇಕರ ಅಭಿಪ್ರಾಯ.

ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ದೊಡ್ಡ ಬ್ಯಾಂಕ್ ಗಳೊಂದಿಗೆ ವಿಲೀನ ಮಾಡಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ ಎಂದು ಸಿದ್ದರಾಮಯ್ಯ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...