ಆಂಧ್ರಪ್ರದೇಶ | ವಿಶ್ವದ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆ ಅನಾವರಣ; ಇಂದಿನಿಂದ ಸಾರ್ವಜನಿಕರಿಗೆ ಪ್ರವೇಶ

Date:

Advertisements

ಆಂಧ್ರಪ್ರದೇಶದ ವಿಜಯವಾಡದ ಸ್ವರಾಜ್ ಮೈದಾನದಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತಿ ಎತ್ತರದ ಡಾ. ಬಿ.ಆರ್​.ಅಂಬೇಡ್ಕರ್ ಪ್ರತಿಮೆಯನ್ನು ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಶುಕ್ರವಾರ ಸಂಜೆ ಅನಾವರಣಗೊಳಿಸಿದ್ದು, ಇಂದಿನಿಂದ(ಜ.20) ಸಾರ್ವಜನಿಕ ವೀಕ್ಷಣೆಗೆ ತೆರೆಯಲಾಗಿದೆ.

ಸಾಮಾಜಿಕ ನ್ಯಾಯದ ಪ್ರತಿಮೆ ಇದಾಗಿದ್ದು 125 ಅಡಿ ಎತ್ತರವಾಗಿದೆ. ಪ್ರತಿಮೆ ನಿರ್ಮಾಣದ ಯೋಜನೆಗೆ ಒಟ್ಟು 404.35 ಕೋಟಿ ರೂಪಾಯಿ ವೆಚ್ಚವಾಗಿದೆ. ಪ್ರತಿಮೆಯ ಸುತ್ತಮುತ್ತ 18.81 ಎಕರೆ ಭೂಮಿಯಲ್ಲಿ ಉದ್ಯಾನವನ ನಿರ್ಮಿಸಲಾಗಿದೆ. ಪ್ರತಿಮೆ ಅನಾವರಣದ ವೇಳೆ ಆಕರ್ಷಕ ಸಿಡಿಮದ್ದುಗಳನ್ನು ಸಿಡಿಸಲಾಯಿತು.

“ಇದು ದೇಶದ ಸಂವಿಧಾನ ಸಂಸ್ಥಾಪಕನ ಡಾ. ಬಿ.ಆರ್. ಅಂಬೇಡ್ಕರ್​ ಅವರ ಬೃಹತ್ ಪ್ರತಿಮೆ ಆಗಿದೆ. ಜಗತ್ತಿನಲ್ಲಿ ಅವರ ಇಷ್ಟು ಎತ್ತರ ಪ್ರತಿಮೆ ಇನ್ನೊಂದು ಇಲ್ಲ. ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯದ ಸಂಕೇತವಾಗಿ ಈ ಪ್ರತಿಮೆ ನಿಲ್ಲಲಿದೆ. ಈ ಪ್ರತಿಮೆಯು ಅತ್ಯಂತ ಎತ್ತರದ ಧಾರ್ಮಿಕೇತರ ಪ್ರತಿಮೆ ಮಾತ್ರವಲ್ಲದೆ ಭಾರತದಲ್ಲೇ ತಯಾರಾಗಿರುವ ಹೆಮ್ಮೆಯ ಪ್ರತಿಮೆಯಾಗಿದೆ” ಎಂದು ಆಂಧ್ರಪ್ರದೇಶದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

Advertisements

ನೆಲದಿಂದ 206 ಅಡಿ ಎತ್ತರದಲ್ಲಿರುವ ‘ಸಾಮಾಜಿಕ ನ್ಯಾಯದ ಪ್ರತಿಮೆ’ ಪ್ರತಿಮೆಯು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ‘ಏಕತೆಯ ಪ್ರತಿಮೆ’ ಅಗ್ರಸ್ಥಾನದಲ್ಲಿರುವ ವಿಶ್ವದ 50 ಅತಿ ಎತ್ತರದ ಪ್ರತಿಮೆಗಳ ಪಟ್ಟಿಯಲ್ಲಿರಲಿದೆ. 175 ಅಡಿ ಎತ್ತರದ ಎರಡನೇ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆ ನೆರೆಯ ತೆಲಂಗಾಣದಲ್ಲಿದೆ.

81 ಅಡಿ ಎತ್ತರದ ಪೀಠದ ಮೇಲೆ 125 ಅಡಿಗಳ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದರ ಒಟ್ಟು ಎತ್ತರ 206 ಅಡಿ. 18.81 ಎಕರೆಯಲ್ಲಿ ಸ್ಮಾರಕ ವನ ಸ್ಥಾಪಿಸಲಾಗಿದೆ. 9 ಎಕರೆ ಸಂಪೂರ್ಣ ಹಸಿರಿನಿಂದ ತುಂಬಿದೆ.

ಆಂಫಿಥಿಯೇಟರ್ ಮತ್ತು ವಸ್ತುಸಂಗ್ರಹಾಲಯವನ್ನು ಕೂಡ ಸ್ಥಾಪಿಸಲಾಗಿದೆ. ಗ್ರಂಥಾಲಯದ ಜತೆಗೆ ಅನುಭವ ಕೇಂದ್ರವನ್ನೂ ಇಲ್ಲಿ ಸ್ಥಾಪಿಸಲಾಗಿದೆ. ಕಂಚಿನ ಪ್ರತಿಮೆಯನ್ನು ದೆಹಲಿಯಲ್ಲಿ ಮಾಡಲಾಗಿತ್ತು. ಅದನ್ನು ಭಾಗಗಳಾಗಿ ವಿಜಯವಾಡಕ್ಕೆ ಸ್ಥಳಾಂತರಿಸಿ ನಿಯಮಿತ ರೀತಿಯಲ್ಲಿ ಸ್ಮೃತಿವನದಲ್ಲಿ ಸ್ಥಾಪಿಸಿ ಸುಂದರವಾಗಿ ಅಲಂಕರಿಸಲಾಗಿದೆ.

ನೆಲ ಮಹಡಿಯಲ್ಲಿ ನಾಲ್ಕು ಸಭಾಂಗಣಗಳಿದ್ದು, ಪ್ರತಿಯೊಂದೂ ನಾಲ್ಕು ಸಾವಿರ ಚದರ ಅಡಿ ವಿಸ್ತೀರ್ಣವನ್ನು ಹೊಂದಿದೆ. ಅವುಗಳಲ್ಲಿ ಒಂದು ಸಿನಿಮಾ ಹಾಲ್ ಮತ್ತು ಉಳಿದ ಮೂರು ಹಾಲ್‌ಗಳಲ್ಲಿ ಅಂಬೇಡ್ಕರ್ ಅವರ ಇತಿಹಾಸವನ್ನು ಹೇಳುವ ಡಿಜಿಟಲ್ ಮ್ಯೂಸಿಯಂ ಅನ್ನು ಸ್ಥಾಪಿಸಲಾಗಿದೆ. 2000 ಆಸನ ಸಾಮರ್ಥ್ಯದ ಸಮ್ಮೇಳನ ಸಭಾಂಗಣ, ಉಪಾಹಾರ ಗೃಹ ಹಾಗೂ ಮಕ್ಕಳಿಗೆಂದೇ ಮೀಸಲಾಗಿರುವ ಆಟದ ಆವರಣವನ್ನೂ ಒಳಗೊಂಡಿದೆ.

ಈ ಯೋಜನೆಯನ್ನು ನೊಯ್ದಾ ಮೂಲದ ಡಿಸೈನ್ ಅಸೋಸಿಯೇಟ್ಸ್ ಸಂಸ್ಥೆಯು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿದೆ.

ಜನವರಿ 20ರಂದು ಪ್ರತಿಮೆ ಪ್ರತಿಷ್ಠಾಪನೆಗೊಂಡಿರುವ ಸ್ವರಾಜ್ ಮೈದಾನದ ದ್ವಾರಗಳು ತೆರೆಯಲಿದ್ದು, ಆ ಮೂಲಕ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ನಿರ್ಮಿಸಲಾಗಿರುವ 125 ಅಡಿ ಎತ್ತರದ ಪ್ರತಿಮೆಯ ವೀಕ್ಷಣೆಯು ಸಾರ್ವಜನಿಕರಿಗೆ ಅಧಿಕೃತವಾಗಿ ತೆರೆದುಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X