ಆಂಧ್ರ ಪ್ರದೇಶ | ವಿಧಾನಸಭೆಯಿಂದ 8 ಶಾಸಕರು ಅನರ್ಹ

Date:

Advertisements

ಆಂಧ್ರಪ್ರದೇಶದ ಎಂಟು ಹಾಲಿ ಶಾಸಕರನ್ನು ವಿಧಾನಸಭಾ ಸ್ಪೀಕರ್ ತಮ್ಮಿನೇನಿ ಸೀತಾರಾಮ್ ಅವರು  ಅನರ್ಹಗೊಳಿಸಿದ್ದಾರೆ. ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಮತ್ತು ಪ್ರತಿಪಕ್ಷ ತೆಲುಗು ದೇಶಂ ಪಕ್ಷದ (ಟಿಡಿಪಿ) ತಲಾ ನಾಲ್ವರನ್ನು ಆಯಾ ಪಕ್ಷಗಳು ನೀಡಿರುವ ಪಕ್ಷಾಂತರದ ದೂರುಗಳ ಆಧಾರದ ಮೇಲೆ ಅಮಾನತು ಮಾಡಲಾಗಿದೆ.

ಟಿಡಿಪಿಯ ಮದ್ದಾಳು ಗಿರಿಧರ್ ರಾವ್, ಕರಣಂ ಬಲರಾಮ್, ವಲ್ಲಭನೇನಿ ವಂಶಿ ಮತ್ತು ವಾಸುಪಲ್ಲಿ ಗಣೇಶ್ ಹಾಗೂ ವೈಎಸ್‌ಆರ್‌ ಕಾಂಗ್ರೆಸ್‌ನ ಆನಂ ರಾಮನಾರಾಯಣ ರೆಡ್ಡಿ, ಮೇಕಪತಿ ಚಂದ್ರಶೇಖರ್ ರೆಡ್ಡಿ, ಕೆ ಶ್ರೀಧರ್ ರೆಡ್ಡಿ ಮತ್ತು ಉಂಡವಳ್ಳಿ ಶ್ರೀದೇವಿ ಅನರ್ಹಗೊಂಡಿದ್ದಾರೆ ಎಂದು ಸ್ಪೀಕರ್ ಕಚೇರಿಯ ಸುತ್ತೋಲೆ ತಿಳಿಸಿದೆ.

2024ರ ಫೆಬ್ರವರಿ 26ರಂದು ಶಾಸಕರನ್ನು ಅನರ್ಹಗೊಳಿಸಲಾಗಿದೆ. ಅವರೆಲ್ಲರನ್ನೂ ಭಾರತದ ಸಂವಿಧಾನದ X ಶೆಡ್ಯೂಲ್ ಅಡಿಯಲ್ಲಿ ಮತ್ತು ಆಂಧ್ರ ಪ್ರದೇಶ ಅಸೆಂಬ್ಲಿಯ ಸದಸ್ಯರ ಪಕ್ಷಾಂತರ ನಿಯಮಗಳು-1986ರ ಆಧಾರದ ಮೇಲೆ ಅನರ್ಹಗೊಳಿಸಲಾಗಿದೆ ಎಂದು ಸ್ಪೀಕರ್ ಕಚೇರಿ ಹೇಳಿದೆ.

Advertisements

ರಾಜಕೀಯ ವಿಶ್ಲೇಷಕರ ಪ್ರಕಾರ, ಶಾಸಕರ ಅನರ್ಹತೆಗೆ ಉಪಚುನಾವಣೆ ಅಗತ್ಯವಿಲ್ಲ. ಏಕೆಂದರೆ, ಕೆಲವೇ ವಾರಗಳಲ್ಲಿ ಆಂಧ್ರಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯುವ ನಿರೀಕ್ಷೆಯಿದೆ.

ಸ್ಪೀಕರ್ ಅವರು ಅನರ್ಹಗೊಳಿಸುವ ಮೊದಲು ಎಲ್ಲಾ ಎಂಟು ಸದಸ್ಯರಿಗೆ ತಮ್ಮ ಅಭಿಪ್ರಾಯವನ್ನು ತಿಳಿಸುವಂತೆ ಈ ಹಿಂದೆ ನೋಟಿಸ್ ನೀಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X