ಮೂರನೇ ಮಗುವಿಗೆ ಜನ್ಮ ನೀಡಿದರೆ 50,000 ರೂ., ಗಂಡು ಮಗು ಜನಿಸಿದರೆ ಹಸು ನೀಡುತ್ತೇವೆ: ಆಂಧ್ರಪ್ರದೇಶ ಸಂಸದ ಘೋಷಣೆ

Date:

Advertisements

ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಹೆಚ್ಚಿನ ಮಕ್ಕಳನ್ನು ಹೊಂದಲು ಪ್ರೋತ್ಸಾಹ ಧನ ನೀಡಬೇಕೆಂದು ಹೇಳಿದ ಬೆನ್ನಲ್ಲೇ ವಿಜಯನಗರದ ಸಂಸದ ಕಾಲಿಸೆಟ್ಟಿ ಅಪ್ಪಲ ನಾಯ್ಡು ಹೆಚ್ಚು ಮಕ್ಕಳು ಹೆರುವವರಿಗೆ ಪ್ರೋತ್ಸಾಹಧನ ಘೋಷಿಸಿದ್ದಾರೆ. ಮೂರನೇ ಮಗುವಿಗೆ ಜನ್ಮ ನೀಡಿದರೆ 50,000 ರೂಪಾಯಿ ನೀಡಲಾಗುವುದು, ಗಂಡು ಮಗು ಜನಿಸಿದರೆ ಹಸು ನೀಡುತ್ತೇವೆ ಎಂದು ಘೋಷಿಸಿದ್ದಾರೆ. ಈ ಮೂಲಕ ಲಿಂಗ ತಾರತಮ್ಯದ ಹೇಳಿಕೆ ನೀಡಿದ್ದಾರೆ. ಹೆಣ್ಣು ಮಗು ಜನಿಸಿದರೆ ಯಾಕೆ ಹಸು ನೀಡುವುದಿಲ್ಲ ಎಂಬ ಪ್ರಶ್ನೆ ಈಗ ಎದ್ದಿದೆ.

ಹಾಗೆಯೇ ಲೋಕಸಭಾ ಸದಸ್ಯರು ತಮ್ಮ ಸಂಬಳದಿಂದ ನಗದು ಪ್ರೋತ್ಸಾಹ ಧನವನ್ನು ನೀಡುವುದಾಗಿ ಹೇಳಿದ್ದಾರೆ. ಅಪ್ಪಾ ನಾಯ್ಡು ಅವರ ಘೋಷಣೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಟಿಡಿಪಿ ನಾಯಕರು ಮತ್ತು ಕಾರ್ಯಕರ್ತರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಈ ಘೋಷಣೆಯನ್ನು ರೀಟ್ವೀಟ್ ಮಾಡುತ್ತಿದ್ದಾರೆ. ಈ ನಡುವೆ ಮುಖ್ಯಮಂತ್ರಿ ನಾಯ್ಡು ಈ ಘೋಷಣೆ ಮಾಡಿದ ಸಂಸದರನ್ನು ಶ್ಲಾಘಿಸಿದ್ದಾರೆ.

ಇದನ್ನು ಓದಿದ್ದೀರಾ? ಆಶಾ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ, ವೇತನ ಸಹಿತ ಹೆರಿಗೆ ರಜೆ ಜಾರಿಗೊಳಿಸಿದ ಆಂಧ್ರಪ್ರದೇಶ

Advertisements

ವಿಜಯನಗರದ ರಾಜೀವ್ ಸ್ಪೋರ್ಟ್ಸ್ ಕಾಂಪೌಂಡ್‌ನಲ್ಲಿ ಶನಿವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಆಯೋಜಿಸಲಾದ ಸಭೆಯಲ್ಲಿ ಸಂಸದರು ಈ ಘೋಷಣೆ ಮಾಡಿದ್ದಾರೆ.

ಮಾರ್ಚ್‌ನಲ್ಲಿ ದೆಹಲಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ, ದಕ್ಷಿಣ ಭಾರತದಲ್ಲಿ ವೃದ್ಧಾಪ್ಯ ಜನಸಂಖ್ಯೆ ಹೆಚ್ಚಳ ಸವಾಲಾಗಿದೆ. ಆದರೆ ಉತ್ತರ ಪ್ರದೇಶ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಯುವಕರ ಸಂಖ್ಯೆ ಅಧಿಕವಾಗಿದೆ ಎಂದು ಹೇಳಿದರು. ಹಾಗೆಯೇ ಜನಸಂಖ್ಯಾ ನಿಯಂತ್ರಣಕ್ಕಿಂತ ದೀರ್ಘಾವಧಿಯ ಜನಸಂಖ್ಯಾ ನಿರ್ವಹಣೆ ಮಾಡುವುದು ಅಗತ್ಯವಾಗಿದೆ ಎಂದು ಒತ್ತಿ ಹೇಳಿದರು.

ಇದನ್ನು ಓದಿದ್ದೀರಾ? ಆಂಧ್ರಪ್ರದೇಶ | ವಿದ್ಯುತ್ ಅವಘಡ; ನಾಲ್ವರು ಮೃತ್ಯು

“ನಾನು ಕುಟುಂಬ ಯೋಜನೆಯನ್ನು ಪ್ರತಿಪಾದಿಸುತ್ತಿದ್ದೆ. ಈಗ ನಾನು ನನ್ನ ಅಭಿಪ್ರಾಯಗಳನ್ನು ಬದಲಾಯಿಸುತ್ತಿದ್ದೇನೆ. ಈಗ ಜನಸಂಖ್ಯೆಯನ್ನು ಉತ್ತೇಜಿಸುತ್ತಿದ್ದೇನೆ. ಭವಿಷ್ಯಕ್ಕಾಗಿ ನಾವು ಜನಸಂಖ್ಯಾ ಲಾಭಾಂಶವನ್ನು ನಿರ್ವಹಿಸಬಹುದಾದರೆ, ಭಾರತ ಮತ್ತು ಭಾರತೀಯರು ಉತ್ತಮ ಸ್ಥಾನದಲ್ಲಿರುತ್ತಾರೆ. ಜಾಗತಿಕ ಸಮುದಾಯಗಳು ಜಾಗತಿಕ ಸೇವೆಗಳಿಗಾಗಿ ಭಾರತೀಯರಾದ ನಮ್ಮನ್ನು ಅವಲಂಬಿಸಿವೆ” ಎಂದು ಹೇಳಿದರು.

ಇನ್ನು ಚಂದ್ರಬಾಬು ನಾಯ್ಡು ಶನಿವಾರ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ಮಕ್ಕಳ ಸಂಖ್ಯೆಯನ್ನು ಲೆಕ್ಕಿಸದೆ ಹೆರಿಗೆಯ ಸಮಯದಲ್ಲಿ ಮಾತೃತ್ವ ರಜೆ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಪ್ರಕಾಶಂ ಜಿಲ್ಲೆಯ ಮಾರ್ಕಾಪುರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಈ ಘೋಷಣೆಗಳನ್ನು ಮಾಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X