ನಟ ಪವನ್‌ ಕಲ್ಯಾಣ್‌ಗೆ ಚಪ್ಪಲಿಗಳನ್ನು ತೋರಿಸಿ ಎಚ್ಚರಿಕೆ ನೀಡಿದ ವೈಎಸ್‌ಆರ್‌ಸಿಪಿ ಶಾಸಕ

Date:

Advertisements

ಜನಸೇನಾ ಪಕ್ಷದ ಸಂಸ್ಥಾಪಕ ಹಾಗೂ ಟಾಲಿವುಡ್‌ ನಟ ಪವನ್ ಕಲ್ಯಾಣ್ ಅವರಿಗೆ ವೈಎಸ್‌ಆರ್‌ಸಿಪಿ ಶಾಸಕರೊಬ್ಬರು ತಮ್ಮ ಎರಡೂ ಚಪ್ಪಲಿಗಳನ್ನು ತೋರಿಸಿ ಎಚ್ಚರಿಕೆ ಸಂದೇಶ ನೀಡಿದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

ಪತ್ರಿಕಾಗೋಷ್ಠಿಯ ನೇರ ಪ್ರಸಾರದಲ್ಲಿ ಮಾತನಾಡಿದ ಮಾಜಿ ಸಚಿವ ಮತ್ತು ವೈಎಸ್‌ಆರ್‌ಸಿಪಿ ಶಾಸಕ ಪರ್ನಿ ನಾನಿ, “ನೀನು ಎಲ್ಲ ಸಮಯದಲ್ಲೂ ಚಪ್ಪಲಿಯನ್ನು ತೋರಿಸುತ್ತೀಯಲ್ಲ ನೀನೇನು ದೊಡ್ಡ ಗಂಡಸಾ? ನಾನು ಎರಡು ಚಪ್ಪಲಿಗಳನ್ನು ತೋರಿಸುತ್ತೇನೆ. ನಿನಗಿಂತ ದೊಡ್ಡವನು ನಾನು. ನನ್ನ ಬಳಿಯೂ ಎರಡು ಚಪ್ಪಲಿಗಳಿವೆ ಹುಷಾರ್! ಎರಡು ಕೂಡ ಹರಿದಿವೆ ಎಂದು ಚಪ್ಪಲಿಗಳನ್ನು ಪ್ರದರ್ಶಿಸಿ ಪವನ್ ಕಲ್ಯಾಣ್ ಅವರಿಗೆ ಎಚ್ಚರಿಕೆ ಸಂದೇಶ ನೀಡಿದರು.

ಈ ಸುದ್ದಿ ಓದಿದ್ದೀರಾ? ‘ಬಿಜೆಪಿಗೆ ಮತ ಹಾಕದಿದ್ದರೆ ರಾಜ್ಯಕ್ಕೆ ಮೋದಿ ಆಶೀರ್ವಾದ ಸಿಗುವುದಿಲ್ಲ’ ಎಂಬ ಅರ್ಥ ಇದೇನಾ? ಅಕ್ಕಿ ಕಡಿತಕ್ಕೆ ಕಾಂಗ್ರೆಸ್ ಆಕ್ರೋಶ

Advertisements

ಈ ಮೊದಲು ನಟ ಪವನ್ ಕಲ್ಯಾಣ್ ಕಾಕಿನಾಡದ ಕಥಿಪುಡಿಯ ಸಾರ್ವಜನಿಕ ಸಮಾರಂಭದಲ್ಲಿ ದ್ವೇಷದ ಭಾಷಣ ಮಾಡಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಮತ್ತು ಅವರ ಸರ್ಕಾರವನ್ನು ಟೀಕಿಸಿದ್ದರು. ಇದಕ್ಕೆ ಪರ್ನಿ ನಾನಿ ಅವರು ತಿರುಗೇಟು ನೀಡಿದ್ದು, ಪವನ್ ಅವರ ಇಬ್ಬಗೆಯ ಮಾತು ತುಂಬಾ ಅಪಾಯಕಾರಿ. ತಮ್ಮ ನಯವಾದ ಮಾತುಗಳಿಂದ ಅಮಾಯಕರನ್ನು ವಂಚಿಸುತ್ತಿದ್ದಾರೆ. ಪವನ್ ಕಲ್ಯಾಣ್ ಅವರು ಹಿಂದಿನ ಟಿಡಿಪಿ ಸರ್ಕಾರದ ಭಾಗವಾಗಿದ್ದರು ಮತ್ತು ಭ್ರಷ್ಟಾಚಾರದಲ್ಲಿ ತೊಡಗಿದ್ದರು ಎಂದು ಆರೋಪಿಸಿದ್ದಾರೆ.

“ಚಂದ್ರಬಾಬು ನಾಯ್ಡು ಮತ್ತು ಟಿಡಿಪಿಗಾಗಿ ಪವನ್ ಅವರು ಮತಯಾಚಿಸುತ್ತಿದ್ದಾರೆ. ಪವನ್ ಅವರ ಜನಸೇನಾ ಪಕ್ಷ ಮುಂದಿನ ಚುನಾವಣೆಯಲ್ಲಿ ಕೇವಲ 15 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಲಿದ್ದು, ಜನಸೇನಾ ಸರ್ಕಾರ ರಚಿಸುವ ಪ್ರಶ್ನೆ ಎಲ್ಲಿದೆ ಎಂದರು. ವೈಎಸ್‌ಆರ್‌ಸಿಪಿ ಸರ್ಕಾರವು ಮುಂದಿನ ಅವಧಿಯಲ್ಲೂ ಎಲ್ಲ ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಲಿದೆ” ಎಂದು ನಾನಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X