ಅಕ್ಕಿ ನೀಡದ ಕೇಂದ್ರ | ಬಿಜೆಪಿ ರಾಜ್ಯ ನಾಯಕರು ಜನತೆಗೆ ಉತ್ತರಿಸಲಿ: ಸಚಿವ ಜಮೀರ್ ಅಹಮದ್

Date:

Advertisements

ಎಫ್‌ಸಿಐ ಗೋದಾಮಿನಲ್ಲಿ 8 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಇಟ್ಟುಕೊಂಡು ರಾಜ್ಯಕ್ಕೆ ಪೂರೈಕೆ ಮಾಡುವ ಬಗ್ಗೆ ಸಮ್ಮತಿ ಪತ್ರ ಕೊಟ್ಟು, ಅಕ್ಕಿ ನೀಡದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬಗ್ಗೆ ರಾಜ್ಯ ಬಿಜೆಪಿ ನಾಯಕರು ರಾಜ್ಯದ ಜನತೆಗೆ ಉತ್ತರಿಸಲಿ ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹಮದ್ ಖಾನ್ ಆಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಬಿಪಿಎಲ್ ಕುಟುಂಬಗಳಿಗೆ ತಲಾ 10 ಕೆ.ಜಿ ಅಕ್ಕಿ ಕೊಡುವ ಗ್ಯಾರಂಟಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಎಷ್ಟೇ ಅಸಹಕಾರ ತೋರಿದರೂ ನಾವು ನಮ್ಮ ಬದ್ಧತೆ ತೋರಿದ್ದೇವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಅಕ್ಕಿ ಪೂರೈಕೆ ಮಾಡದೆ ತೊಂದರೆ ನೀಡಿದರೂ ಬಿಪಿಎಲ್ ಕುಟುಂಬಗಳಿಗೆ ಅಕ್ಕಿ ಬದಲು ಕೆ.ಜಿಗೆ 34 ರೂ. ನಂತೆ ಹಣ ನೀಡಲು ಸಂಪುಟ ಸಭೆ ನಿರ್ಣಯ ಮಾಡಿದ್ದು, ಇದು ಕಾಂಗ್ರೆಸ್ ನ ಜನಪರ ನಿಲುವಿಗೆ ಸಾಕ್ಷಿ ಎಂದಿದ್ದಾರೆ.

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರ 10 ಕೆ.ಜಿ ಅಕ್ಕಿ ಕೊಡುವ ವಾಗ್ದಾನ ಪೂರೈಸಿಯೇ ತೀರುತ್ತದೆ. ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ. ಈಗಲಾದರೂ ಕೇಂದ್ರ ಬಿಜೆಪಿ ಸರ್ಕಾರ ಜನವಿರೋಧಿ ಧೋರಣೆ ಕೈ ಬಿಟ್ಟು ರಾಜ್ಯದ ಜನಪರ ಯೋಜನೆಗೆ ಸಹಕಾರ ನೀಡಲಿ ಎಂದು ಆಶಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅನ್ನಭಾಗ್ಯ ಯೋಜನೆ | 10 ಕೆ.ಜಿ ಅಕ್ಕಿಯ ಹಣವನ್ನು ಜನರ ಖಾತೆಗೆ ವರ್ಗಾಯಿಸಿ: ಬಿಜೆಪಿ

ಸಂಪುಟ ಸಭೆಯಲ್ಲಿ ರಾಜ್ಯದ ಬಡವರಿಗೆ 5 ಕೆ.ಜಿ ಉಚಿತ ಅಕ್ಕಿ ಮತ್ತು ಇನ್ನುಳಿದ 5 ಕೆ.ಜಿಗೆ ಅಕ್ಕಿ ಬದಲಾಗಿ ಕೆ.ಜಿಗೆ 34 ರೂ.ಗಳಂತೆ ಹಣ ಸಿಗಲಿದೆ. ಆದಷ್ಟು ಬೇಗ ಇನ್ನುಳಿದ 5 ಕೆ.ಜಿ ಅಕ್ಕಿ ಕೂಡ ಕೊಡುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X