ಅಣ್ಣಾಮಲೈ ಮುಂದಿನ ಭವಿಷ್ಯವೇನು? ಇವೆ ಹಲವು ಊಹಾಪೋಹಗಳು!

Date:

Advertisements

ತಮಿಳುನಾಡಿನಲ್ಲಿ ಬಿಜೆಪಿ-ಎಐಡಿಎಂಕೆ ಮೈತ್ರಿಯ ಹಾದಿ ಮತ್ತು ಜಾತಿ ಸಮೀಕರಣವನ್ನು ‘ಸುಗಮಗೊಳಿಸಲು’ ಕೆ ಅಣ್ಣಾಮಲೈ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ಆ ಹುದ್ದೆಗೆ ನೈನಾರ್ ನಾಗೇಂದ್ರನ್‌ ಅವರನ್ನು ನೇಮಿಸಲಾಗಿದೆ. ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿದಿರುವ ಅಣ್ಣಾಮಲೈ ಅವರ ಭವಿಷ್ಯದ ಬಗ್ಗೆ ಹಲವು ಚರ್ಚೆಗಳು ನಡೆಯುತ್ತಿವೆ. ಅವರಿಗೆ ಪಕ್ಷದಲ್ಲಿ ‘ರಾಷ್ಟ್ರೀಯ ಸ್ಥಾನ’ ನೀಡುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ.

ಇತ್ತೀಚೆಗೆ ತಮಿಳುನಾಡಿಗೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಿರ್ಗಮಿತ ಅಧ್ಯಕ್ಷ ಅಣ್ಣಾಮಲೈ ಅವರನ್ನು ಶ್ಲಾಘಿಸಿದರು. “ಪಕ್ಷದ ರಾಷ್ಟ್ರೀಯ ಕಾರ್ಯನಿರ್ವಹಣೆಯಲ್ಲಿ ಅಣ್ಣಾಮಲೈ ಅವರ ಶ್ರಮ-ಕೌಶಲ್ಯಗಳನ್ನು ಬಿಜೆಪಿ ಬಳಸಿಕೊಳ್ಳಲಿದೆ” ಎಂದು ಅಮಿತ್ ಶಾ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಅಂತಹ ಪ್ರಬಲ ನೆಲೆಯನ್ನು ಹೊಂದಿರದ ಬಿಜೆಪಿ, ಕೆಲವು ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳುವಲ್ಲಿ ಅಣ್ಣಾಮಲೈ ಅವರ ಪಾತ್ರವಿದೆ ಎಂದು ಬಿಜೆಪಿಗರು ಹೇಳುತ್ತಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿಯ ಮತ ಪಾಲು ಕೇವಲ 3% ಇತ್ತು.ಅಣ್ಣಾಮಲೈ ನೇತೃತ್ವದಲ್ಲಿ 2024ರ ಚುನಾವಣೆಯಲ್ಲಿ ಅದು 11%ಗೆ ಏರಿಕೆಯಾಗಿದೆ. ಬಿಜೆಪಿಯ ಮತ ಹಂಚಿಕೆ ಹೆಚ್ಚಿಸುವಲ್ಲಿ ಅಣ್ಣಾಮಲೈ ಪಾತ್ರ ಮುಖ್ಯವಾದದ್ದು ಎಂದು ಪಕ್ಷವು ಭಾವಿಸಿದೆ.

Advertisements

ಈ ವರದಿ ಓದಿದ್ದೀರಾ?: ಭ್ರಷ್ಟಾಚಾರ ನಿಗ್ರಹಕ್ಕೆ ಸಾಂಸ್ಥಿಕ ಬದಲಾವಣೆಯೊಂದೇ ದಾರಿಯೇ?

ಐಪಿಎಸ್ ಅಧಿಕಾರಿ ಹುದ್ದೆಯನ್ನು ತೊರೆದು, ಬಿಜೆಪಿ ಸೇರಿ ರಾಜಕಾರಣ ಆರಂಭಿಸಿದ ಅಣ್ಣಾಮಲೈ ಅವರನ್ನು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಅಥವಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಬಹುದು. ಮಾತ್ರವಲ್ಲದೆ, ಮುಂದಿನ ದಿನಗಳಲ್ಲಿ ಸರ್ಕಾರದ ಭಾಗವಾಗಿಯೂ ನೇಮಿಸಿಕೊಳ್ಳಬಹುದು ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಆದಾಗ್ಯೂ, ಕೇಂದ್ರ ಸಚಿವ ಸಂಪುಟ ಪುನರ್ರಚನೆ ಮಾಡುವ ಬಗ್ಗೆ ಬಿಜೆಪಿಯಲ್ಲಿ ಸದ್ಯಕ್ಕೆ ಯಾವುದೇ ಯೋಜನೆಗಳಿಲ್ಲ. ಸದ್ಯ, ತಮಿಳುನಾಡಿನಿಂದ ಒಬ್ಬ ಸಚಿವ ಎಲ್ ಮುರುಗನ್ ಇದ್ದಾರೆ. ಹೀಗಾಗಿ, ಅಣ್ಣಾಮಲೈ ಅವರು ಹೆಚ್ಚು ದಿನ ಕಾಯಬೇಕಾಗಬಹುದು” ಎಂದು ಅವರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X