ಅಣ್ಣಾಮಲೈ ಚಾಟಿ ಏಟು ಪ್ರಕರಣ | ಸ್ತ್ರೀ ಕುಲದ ರಕ್ಷಣೆಗಾಗಿ ವಿನೂತನ ಪ್ರತಿಭಟನೆ: ಬಿ ವೈ ವಿಜಯೇಂದ್ರ

Date:

Advertisements

ತಮಿಳುನಾಡು ಅಣ್ಣಾ ವಿಶ್ವವಿದ್ಯಾಲಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ವತಃ ಚಾಟಿ ಬೀಸಿಕೊಂಡು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕೆಲವರು ಅಣ್ಣಾಮಲೈ ನಡೆಯನ್ನು ಬೆಂಬಲಿಸಿದರೆ ಮತ್ತೆ ಕೆಲವರು ಇದೊಂದು ಅತಿರೇಕದ ನಡೆ ಎಂದು ಟೀಕಿಸಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಅಣ್ಣಾಮಲೈ ಬೆಂಬಲಕ್ಕೆ ಧಾವಿಸಿದ್ದು, “ಇದು ದೈವಶ್ರದ್ಧೆ, ಆಚಾರ ವಿಚಾರಗಳು ನಂಬಿಕೆಯನ್ನು ಆಧರಿಸಿದೆ.”ಸಂತ್ರಸ್ತ ವಿದ್ಯಾರ್ಥಿನಿಯ ಪರವಾಗಿ ಧ್ವನಿ ಎತ್ತಿರುವ ಅಣ್ಣಾಮಲೈ ಅವರ ಬೆಂಬಲಕ್ಕೆ ನಾವೆಲ್ಲಾ ಗಟ್ಟಿಯಾಗಿ ನಿಂತಿದ್ದೇವೆ” ಎಂದು ಟ್ವೀಟ್‌ ಮಾಡಿದ್ದಾರೆ.

“ದೈವಶ್ರದ್ಧೆ, ಆಚಾರ ವಿಚಾರಗಳು ನಂಬಿಕೆಯನ್ನು ಆಧರಿಸಿದ್ದು, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ ಅವರು ತಮ್ಮ ನಂಬಿಕೆಯನ್ನು ಆಧರಿಸಿ ದೈವ ಶ್ರದ್ಧೆಯನ್ನು ಪ್ರದರ್ಶಿಸುವ ಮೂಲಕ ತಮಿಳುನಾಡಿನ ಅಣ್ಣಾ ಯೂನಿವರ್ಸಿಟಿಯಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಘಟನೆಯ ವಿರುದ್ಧ ಹೋರಾಟಕ್ಕಿಳಿದು ‘ದಾಷ್ಟ್ಯತನದಿಂದ ವರ್ತಿಸುತ್ತಿರುವ’ ಡಿಎಂಕೆ ಸರ್ಕಾರವು ಆರೋಪಿತ ದುಷ್ಕರ್ಮಿಗಳ ವಿರುದ್ಧ ಕಾನೂನಿನ ಚಾಟಿ ಬೀಸದ ಧೋರಣೆಯನ್ನು ಪ್ರತಿಭಟನಾ ಸೂಚಕವಾಗಿ ದೈವಶ್ರದ್ಧೆಯ ಚಾಟಿ ಏಟು ಬಾರಿಸಿಕೊಂಡು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ” ಎಂದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಳೆದುಹೋದ ವರ್ಚಸ್ಸು ಮತ್ತು ಗೇಲಿಯ ಸರಕಾದ ‘ಹೈಡ್ರಾಮಾ’

“ಈ ಪ್ರತಿಭಟನೆಯನ್ನು ಕೆಲವು ವಿಕೃತಿಗಳು ವಿಡಂಬನೆ ಮಾಡುತ್ತಿವೆ, ಸ್ತ್ರೀ ಕುಲದ ರಕ್ಷಣೆಗಾಗಿ, ಸಂತ್ರಸ್ತ ವಿದ್ಯಾರ್ಥಿನಿಗೆ ನ್ಯಾಯ ದೊರಕಿಸಿಕೊಡಲು ವಿನೂತನ ರೀತಿಯಲ್ಲಿ ಪ್ರತಿಭಟಿಸಿದ ಕ್ರಮವನ್ನು ನಾವೆಲ್ಲರೂ ಬೆಂಬಲಿಸಬೇಕಿದೆ. ಈ ಸಂಬಂಧ ವಿಕೃತಿ ಮೆರೆಯುವವರ ಹೇಳಿಕೆ ಹಾಗೂ ವರ್ತನೆಯನ್ನು ಖಂಡಿಸಬೇಕಿದೆ” ಎಂದು ಹೇಳಿದ್ದಾರೆ.

“ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೆ ಪಾದರಕ್ಷೆಗಳನ್ನು ತೊಡುವುದಿಲ್ಲ ಎಂದು ಭೀಷ್ಮ ಪ್ರತಿಜ್ಞೆ ತೊಟ್ಟಿರುವ ಕೆ.ಅಣ್ಣಾಮಲೈ ಅವರ ಶಪಥದ ಹೋರಾಟ ಗೆಲುವಿನ ಗುರಿ ಮುಟ್ಟಲಿ ಎಂದು ಹಾರೈಸೋಣ. ತಮಿಳುನಾಡಿನ ಮಹಿಳಾ ಪೀಡಕ ಡಿಎಂಕೆ ಸರ್ಕಾರದ ವಿರುದ್ಧ ಆರಂಭವಾಗಿರುವ ದಿಟ್ಟ ಹೋರಾಟ ಬಿಜೆಪಿಯ ಬದ್ಧತೆ ಏನೆಂಬುದನ್ನು ಸಾಕ್ಷೀಕರಿಸಿದೆ.” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ರಾಜ್ಯಾಧ್ಯಕ್ಷರು,,, ತಮ್ಮ ಮೈತ್ರಿ ಪಕ್ಷದ ಸಂಸದರೊಬ್ಬರು ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣಗಳು ವರದಿಯಾಗಿ ಪೆನ್ ಡ್ರೈವ್ ಸಹ ಓಡಾಡಿದವು,,ಆಗ ತಾವು ರಾಜ್ಯದಲ್ಲಿ ಮಹಿಳೆಯರ ಉಳಿವಿಗಾಗಿ ಇಂಥಾ ಯಾವುದೇ ವಿನೂತನ ಪ್ರಯೋಗ ಮಾಡಲೇ ಯಿಲ್ಲ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X