ಪ್ರತಿ ಟನ್‌ ಕಬ್ಬಿಗೆ ₹3,400 ಘೋಷಣೆ, ನಾಳೆಯಿಂದ ಕಬ್ಬು ಕಟಾವಿಗೆ ಸೂಚನೆ: ಸಚಿವ ಶಿವಾನಂದ ಪಾಟೀಲ

Date:

Advertisements

‘ರಾಜ್ಯದಲ್ಲಿ ಆರು ಲಕ್ಷ ಹೆಕ್ಟೇರ್ ಕಬ್ಬು ಕಟಾವಿಗೆ ಸಿದ್ದವಿದ್ದು, ಎಂಬತ್ತು ಕಾರ್ಖಾನೆಗಳು ಕಬ್ಬು ಅರೆಯಲಿವೆ. ಪ್ರತಿ ಟನ್‌ ಕಬ್ಬಿಗೆ ₹3,400 ಘೋಷಣೆ ಮಾಡಲಾಗಿದೆ. ಕಳೆದ ವರ್ಷ ₹3,150 ಇತ್ತು ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಪ್ರಸ್ತುತ ವರ್ಷ ಉತ್ತರ ಕರ್ನಾಟಕ ಭಾಗದಲ್ಲಿ ಕಬ್ಬು ಅರೆಯುವ ಹಂಗಾಮನ್ನು ಒಂದು ವಾರ ಮೊದಲು ಆರಂಭಿಸುವಂತೆ ಆದೇಶ ಹೊರಡಿಸಲಾಗಿದೆ” ಎಂದರು.

“ಈ ಮೊದಲು ನವೆಂಬರ್ 15ರಿಂದ ಕಬ್ಬು ಅರೆಯಲು ಆರಂಭಿಸುವಂತೆ ಆದೇಶಿಸಲಾಗಿತ್ತು. ರೈತರ ಒತ್ತಾಯ ಹಾಗೂ ಕಾರ್ಖಾನೆ ಮಾಲೀಕರ ಕೋರಿಕೆ ಮೇರೆಗೆ ನವೆಂಬರ್ 8ರಿಂದ ಆರಂಭಿಸಲು ತೀರ್ಮಾನಿಸಲಾಗಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಮೂರು ತಿಂಗಳ ಹಿಂದೆಯೇ ಆರಂಭಿಸಲಾಗಿದೆ” ಎಂದು ಹೇಳಿದರು.

Advertisements

ಹೆಸರು ಕಾಳು ಖರೀದಿ ಪ್ರಕ್ರಿಯೆ

“ಬೆಂಬಲ ಬೆಲೆಯಲ್ಲಿ ಹೆಸರು ಕಾಳು ಖರೀದಿ ಪ್ರಕ್ರಿಯೆ ಮುಗಿದಿತ್ತು. ಈಗ ಮತ್ತೆ ಅದನ್ನು ವಿಸ್ತರಿಸಿ, 32 ಸಾವಿರ ಮೆಟ್ರಿಕ್ ಟನ್‌ ಖರೀದಿವರೆಗೆ ಹೆಚ್ಚಳ ಮಾಡಲಾಗಿದೆ. ಅದರ ಜೊತೆಗೆ ಸೋಯಾಬಿನ್ ಖರೀದಿ ಸಹ ವಿಸ್ತರಿಸಲಾಗಿದೆ” ಎಂದರು.

“ದರ ಕುಸಿತವಾದಾಗಲೆಲ್ಲ ಬೆಳೆಗೆ ಬೆಂಬಲ ಬೆಲೆ ಘೋಷಿಸಿ ಎಪಿಎಂಸಿಯಲ್ಲಿ ಖರೀದಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ಸೋಯಾಬಿನ್, ಹೆಸರು, ಸೂರ್ಯಕಾಂತಿ ಮತ್ತು ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಿ, ಏಕಕಾಲದಲ್ಲಿ ಖರೀದಿಸಲಾಗಿದೆ. ಎಪಿಎಂಸಿ ಕಾಯ್ದೆ ಹಿಂಪಡೆದ ಕಾರಣ ರಾಜ್ಯದಲ್ಲಿನ 166 ಎಪಿಎಂಸಿ ₹200 ಕೋಟಿ ಲಾಭಗಳಿಸಿದೆ” ಎಂದು ವಿವರಿಸಿದರು.

‘ನೂತನ ಜವಳಿ ಕಾಯ್ದೆ ಜಾರಿಗೆ ತರಲು ಉದ್ದೇಶಿಸಲಾಗಿದ್ದು, ಇಲಾಖೆಯಲ್ಲಿನ ಸಿಬ್ಬಂದಿ ಕೊರತೆ ಸೇರಿದಂತೆ ಇತರ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ನೇಕಾರ ಸಮುದಾಯದ ಯುವಕರು ಬೇರೆ ಉದ್ಯೋಗದತ್ತ ಮುಖ ಮಾಡಿರುವುದರಿಂದ, ನೇಕಾರ ವೃತ್ತಿ ಕ್ಷೀಣಿಸುತ್ತಿದೆ. ಆದರೂ, ಅದಕ್ಕೆ ಉತ್ತೇಜನ ನೀಡಬೇಕೆನ್ನುವ ಕಾರಣಕ್ಕೆ ನೇಕಾರ ಸಮ್ಮಾನ್ ಯೋಜನೆ ಜಾರಿಗೆ ತಂದು, ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಉಚಿತ ವಿದ್ಯುತ್ ಸಹ ಪೂರೈಕೆ ಮಾಡಲಾಗುತ್ತಿದೆ’ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X