ಸಂವಿಧಾನ ವಿರೋಧಿಗಳಿಂದ ಸಂಸತ್ತಿನಲ್ಲಿ ಸಂವಿಧಾನ ಪ್ರತಿ ಹಿಡಿದು ಪ್ರತಿಭಟನೆ: ಸಂಸದ ಬೊಮ್ಮಾಯಿ

Date:

Advertisements

ಸಂವಿಧಾನ ವಿರೋಧಿಗಳೇ ಸಂಸತ್ತಿನಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆ ಮಾಡುತ್ತಿರುವುದು ಅತ್ಯಂತ ವಿಪರ್ಯಾಸದ ಸಂಗತಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ಕಳೆದ ಹತ್ತು ವರ್ಷದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂಬ ಕಾಂಗ್ರೆಸ್ ಆರೋಪದ ಬಗ್ಗೆ ನವದೆಹಲಿಯಲ್ಲಿ ಸುದ್ದಿಗಾರರು ಪ್ರಶ್ನಿಸಿದಾಗ ಉತ್ತರಿಸಿದ ಅವರು, “ದೇಶದಲ್ಲಿ ಯಾವ ಹಕ್ಕು ಹರಣವಾಗಿದೆ. ವ್ಯಕ್ತಿ ಸ್ವಾತಂತ್ರ್ಯಹರಣವಾಗಿದೆಯಾ, ಪತ್ರಿಕಾ ಸ್ವಾತಂತ್ರ್ಯವಾಗಿದೆಯಾ, ಪ್ರತಿಭಟನೆ ಮಾಡುತ್ತಿದ್ದಾರೆ ಎಂದರೆ ಪ್ರಜಾಪಭುತ್ವ ಇದೆ ಎಂದರ್ಥ. ಇದೊಂದು ನೆಪ ಅವರಿಗೆ ಮತ್ತ ಬ್ಯಾಂಕ್‌ಗಳನ್ನು ಸೃಷ್ಟಿಸಲು ಆಧಾರ ರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದು ತಿರುಗೇಟು ನೀಡಿದರು.

“ಕಳೆದ ಐವತ್ತು ವರ್ಷದಲ್ಲಿ ಪಜಾಪಮತ್ವ ಬಹಳಷ್ಟು ಗಟ್ಟಿಯಾಗಿದೆ. ತುರ್ತು ಪರಿಸ್ಥಿತಿ ಹೇರಿ ಸಂವಿಧಾನ ತಿರುಚಿ ಪ್ರಜಾಪಭುತ್ವದ ಕಗ್ಗೊಲೆ ಮಾಡಿದ್ದ ಕಾಂಗ್ರೆಸ್ ಸಂಸತ್ತಿನಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆ ಮಾಡಿರುವುದು ವಿಪರ್ಯಾಸ” ಎಂದರು.

Advertisements

“ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಪಧಾನ ಮಂತ್ರಿ ಸ್ಥಾನ ಉಳಿಸಿಕೊಳ್ಳಲು ಬಹಳ ಘೋರವಾಗಿ ನಡೆದುಕೊಂಡರು. ಆಗ ಸರ್ಕಾರದ ವಿರುದ್ಧ ಯಾರೂ ಮಾತನಾಡುವಂತೆ ಮಾಡಿದರು. ಮಾನವ ಹಕ್ಕುಗಳು ಹಾಗೂ ರಾಜಕೀಯ ಸ್ವಾತಂತ್ರ್ಯ ಎರಡನ್ನೂ ಮೊಟಕುಗೊಳಿಸಲಾಗಿತ್ತು. ಮತ್ತು ಪತ್ರಿಕಾ ಸ್ವಾತಂತ್ರ್ಯ ಸಂಪೂರ್ಣ ತೆಗೆದು ಹಾಕಲಾಗಿತ್ತು. ಪತ್ರಿಕೆಗಳ ಮೇಲೆ ಸಂಪೂರ್ಣ ನಿಬಂರ್ಧ ಹೇರಲಾಗಿತ್ತು. ಏನಾದರೂ ಸುದ್ದಿ ಪ್ರಕಟಿಸಬೇಕೆಂದರೆ ಸರ್ಕಾರದ ಅನುಮತಿ ಪಡೆದು ಪ್ರಕಟಿಸಬೇಕಿತ್ತು” ಎಂದು ಹೇಳಿದರು.

“ಕಾಂಗ್ರೆಸ್‌ಗೆ ಸಂವಿಧಾನದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಇಡೀ ಸಂವಿಧಾನವನ್ನು ತಿರುಚಿ ಹಕ್ಕುಗಳನ್ನು ಮೊಟಕುಗೊಳಿಸಿದ್ದಂತಹ ಕಾಂಗ್ರೆಸ್ ಲೋಕಸಭೆಯಲ್ಲಿ ಸಂವಿಧಾನದ ಉಳಿವಿನ ಬಗ್ಗೆ ಮಾತನಾಡಿರುವುದು ಹಾಸ್ಯಾಸ್ಪದ. ಅದೂ ಕೂಡ ಮೊಟಕುಗೊಳಿಸಿರುವ ಸಂವಿಧಾನ, ಸಂಪೂರ್ಣವಾದ ಸಂವಿಧಾನವಿಲ್ಲ. ಅವರು ಐವತ್ತು ವರ್ಷದ ಹಿಂದೆ ಇದೇ ಸಂವಿಧಾನವನ್ನು ನಾವು ತಿರುಚಿದ್ದೆವು. ಪ್ರಜಾಪ್ರಭುತ್ವದ ಕೊಲೆ ಮಾಡಿದ್ದೇವು ಎಂದು ನೆನಪು ಮಾಡಿಕೊಳ್ಳಬೇಕು. ಎಲ್ಲ ಹಕ್ಕುಗಳ ಹರಣ ಮಾಡಿದ್ದೇವೆ ಎಂದು ನೆನಪು ಮಾಡಿಕೊಳ್ಳದಿರುವುದು ಕಾಂಗ್ರೆಸ್ಸಿನ ಭಂಡತನ” ಎಂದು ಟೀಕಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X