ನಾಳೆಯಿಂದ ‘ಗೃಹಲಕ್ಷ್ಮಿ’ ಯೋಜನೆಯ ಅರ್ಜಿ ಸಲ್ಲಿಕೆಗೆ ಅವಕಾಶ: ಲಕ್ಷ್ಮಿ ಹೆಬ್ಬಾಳ್ಕರ್

Date:

Advertisements
  • ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ನಾಳೆ ಚಾಲನೆ
  • ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರಲ್ಲ

ನಾಳೆಯಿಂದ (ಜೂ.16) ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಬಿಪಿಎಲ್ ಕಾರ್ಡ್, ಅಂತ್ಯೋದಯ ಕಾರ್ಡ್ ನವರಿಗೂ ಈ ಯೋಜನೆ ಲಾಭ ಸಿಗುತ್ತದೆ. ನಾಳೆಯಿಂದ ಅರ್ಜಿ ಸಲ್ಲಿಸಬಹುದು” ಎಂದರು.

“ಕೆಲವು ತಾಂತ್ರಿಕ ಕಾರಣಗಳಿಂದ ಅರ್ಜಿ ಸಲ್ಲಿಸುವುದು ಸ್ವಲ್ಪ ವಿಳಂಬವಾಗಿದೆ. ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್‌ಗಳಲ್ಲಿ ಅರ್ಜಿ ಸಲ್ಲಿಸಬಹುದು. 1902 ಹೆಲ್ಪ್ ಲೈನ್ ಮೂಲಕ ಏನಾದರೂ ಗೊಂದಲಗಳಿದ್ದರೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು” ಎಂದು ವಿವರಿಸಿದರು.

Advertisements

“ಶುಕ್ರವಾರ ಮಧ್ಯಾಹ್ನ 1.30ಕ್ಕೆ ‘ಗೃಹಲಕ್ಷ್ಮಿ’ ಯೋಜನೆಯ ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ಸಾಂಕೇತಿಕವಾಗಿ ಶಕ್ತಿಭವನದಲ್ಲಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಚಾಲನೆ ಚಾಲನೆ ನೀಡಲಿದ್ದಾರೆ. ನಮ್ಮ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಒಂದಾಗಿದ್ದು, ಇದರ ಉಸ್ತುವಾರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಡೆಯುತ್ತದೆ” ಎಂದರು.

ಟ್ಯಾಕ್ಸ್ ಪೇಯರ್ಸ್ ಆಗಿದ್ರೆ ಅರ್ಜಿ ರಿಜೆಕ್ಟ್

“ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕುವ ಪತಿ ಟ್ಯಾಕ್ಸ್ ಪೇಯರ್ಸ್ ಆಗಿದ್ರೆ ಅರ್ಜಿ ರಿಜೆಕ್ಟ್ ಆಗಲಿದೆ. ಇ- ಗವರ್ನೆನ್ಸ್ ಮೂಲಕ ಅರ್ಜಿ ಹಾಕುವ ವ್ಯವಸ್ಥೆ ಮಾಡಿದ್ದೇವೆ. ಅರ್ಜಿದಾರರ ಪತಿ ಟ್ಯಾಕ್ಸ್ ಪೇಯರ್ಸ್ ಆಗಿದ್ರೆ ಅರ್ಜಿ ಸ್ವೀಕಾರ ಆಗುವುದಿಲ್ಲ. ಹೀಗಾಗಿ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ” ಎಂದು ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದ್ದಾರೆ.

ಗಮನಿಸಬೇಕಾದ ಪ್ರಮುಖ ಅಂಶಗಳು

  • ಅರ್ಜಿದಾರರು 16-06-2023 ರಿಂದ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ. (https://sevasindhugs.karnataka.gov.in/gruhalakshmi)
  • ಅರ್ಜಿ ಸಲ್ಲಿಕೆಗೆ SMS ಮೂಲಕ ಹಾಗೂ ಸೇವಾಸಿಂಧು ಪೋರ್ಟಲ್ ಮೂಲಕ Auto generated ಸ್ವೀಕೃತಿಗಳನ್ನು ಪಡೆಯಬಹುದಾಗಿದೆ.
    ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್‌ ಖಾತೆ ವಿವರಗಳು ಅಗತ್ಯವಾಗಿರುತ್ತದೆ.
  • ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅವಲಂಬಿತರಾಗದೆ ಅರ್ಜಿಯನ್ನು ಸ್ವತಃ ಮೇಲೆ ತಿಳಿಸಿದ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿರುತ್ತದೆ.
    ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ.
  • ಮಂಜೂರಾತಿಯ ನಂತರ ನೇರ ನಗದು ವರ್ಗಾವಣೆ ಮಾಡಲಾಗುವುದು.
  • ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ, ಸಂಪೂರ್ಣ ಉಚಿತವಾಗಿರುತ್ತದೆ.
  • ಯೋಜನೆಯ ಕುರಿತಂತೆ ಸಂದೇಹ/ ಕುಂದುಕೊರತೆಗಳಿದ್ದಲ್ಲಿ ಸಹಾಯವಾಣಿ – 1902 ಗೆ ಸಂಪರ್ಕಿಸಬಹುದಾಗಿದೆ.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X