ನಿಗಮ, ಮಂಡಳಿಗಳಿಗೆ 36 ಶಾಸಕರು, 39 ಕಾರ್ಯಕರ್ತರ ನೇಮಕ: ಡಿಸಿಎಂ ಡಿ.ಕೆ. ಶಿವಕುಮಾರ್

Date:

Advertisements

“ನಿಗಮ, ಮಂಡಳಿಗಳ ನೇಮಕ ಪಟ್ಟಿಯಲ್ಲಿ 36 ಶಾಸಕರು, 39 ಕಾರ್ಯಕರ್ತರಿಗೆ ಸ್ಥಾನ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳು, ನಿಗಮ ಮಂಡಳಿ ನೇಮಕದ ಬಗ್ಗೆ ಗುರುವಾರ ಕೇಳಿದಾಗ ಶಿವಕುಮಾರ್ ಈ ಮಾಹಿತಿ ಹಂಚಿಕೊಂಡಿದ್ದಾರೆ.

“ಯಾವುದೇ ಕ್ಷಣದಲ್ಲಿ ನಿಗಮ, ಮಂಡಳಿಗಳ ನೇಮಕ ಪಟ್ಟಿ ಬಿಡುಗಡೆ ಆಗಲಿದೆ. ನಮ್ಮ ನಾಯಕರು ಹಾಗೂ ಕಾರ್ಯಕರ್ತರು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದು, ಅವರ ಹಕ್ಕಿನಂತೆ ಈ ಅಧಿಕಾರ ನೀಡಲಾಗುತ್ತಿದೆ” ಎಂದು ತಿಳಿಸಿದರು.

Advertisements

“ಲೋಕಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯನ್ನು ನಾಳೆ ಸಂಜೆ 4.30ಕ್ಕೆ ಕ್ವೀನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದಲ್ಲಿ ನಡೆಸಲಾಗುವುದು. ಮೊದಲಿಗೆ ಮಧ್ಯಾಹ್ನ ಸಭೆ ಮಾಡಲು ಆಲೋಚನೆ ಮಾಡಿದ್ದೆವು. ಪ್ರಧಾನ ಮಂತ್ರಿಗಳು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಭೆಯನ್ನು ಸಂಜೆ ನಡೆಸುತ್ತಿದ್ದೇವೆ” ಎಂದು ತಿಳಿಸಿದರು.

ನಾಳೆ ಅಭ್ಯರ್ಥಿಗಳ ಆಯ್ಕೆ ಅಂತಿಮ ಆಗುತ್ತದೆಯೇ ಎಂದು ಕೇಳಿದಾಗ, “ನಾಳೆ ಮೊದಲ ಸುತ್ತಿನ ಚರ್ಚೆ ನಡೆಯಲಿದೆ. ಈ ಸಭೆಗೆ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರನ್ನು ಆಹ್ವಾನಿಸಲಾಗಿದ್ದು, ಉಳಿದಂತೆ ಈ ಹಿಂದೆ ಚುನಾವಣಾ ಸಮಿತಿಯಲ್ಲಿದ್ದವರೇ ಇದ್ದಾರೆ. ಸಚಿವರು ಎಲ್ಲಾ ಕ್ಷೇತ್ರಗಳಿಗೆ ಹೋಗಿ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಈ ಬಗ್ಗೆ ಚರ್ಚೆ ನಡೆಯಲಿದೆ” ಎಂದು ತಿಳಿಸಿದರು.

ಕೆಲ ಸಚಿವರು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ಪಕ್ಷ ಸೂಚಿಸಿದರೆ ನಾನು ನಿಲ್ಲಬೇಕು, ಅವರೂ ನಿಲ್ಲಬೇಕು” ಎಂದು ತಿಳಿಸಿದರು.

25ಕ್ಕೂ ಹೆಚ್ಚು ಸೀಟು ಗೆಲ್ಲುವ ವಿಶ್ವಾಸ

ಜೆಡಿಎಸ್ ಎನ್‌ಡಿಎ ಜತೆ ಮೈತ್ರಿಗೆ ಮುಂದಾಗಿರುವ ಬಗ್ಗೆ ಕೇಳಿದಾಗ, “ಅದು ಅವರ ಇಚ್ಛೆ. ನಾವು ಕೂಡ ಹಿಂದೆ ಅವರ ಜತೆಗೂಡಿದಾಗ ಹೆಚ್ಚಿನ ಕ್ಷೇತ್ರ ಗೆಲ್ಲುವ ನಿರೀಕ್ಷೆ ಹೊಂದಿದ್ದೆವು. ಆದರೆ ಅಂತಿಮವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಲಾ ಒಂದೊಂದು ಕ್ಷೇತ್ರ ಮಾತ್ರ ಗೆಲ್ಲಲು ಸಾಧ್ಯವಾಯಿತು. ಈ ಬಾರಿ ಏನಾಗುತ್ತದೆ ಎಂದು ಕಾದು ನೋಡೋಣ. ನಾವು 25 ಕ್ಕೂ ಹೆಚ್ಚು ಸೀಟು ಗೆಲ್ಲುವ ವಿಶ್ವಾಸವಿದೆ” ಎಂದು ತಿಳಿಸಿದರು.

ರಾಮ ಮಂದಿರ ವಿಚಾರದಲ್ಲಿ ಕಾಂಗ್ರೆಸ್ ನಿಲುವು ಪಕ್ಷಕ್ಕೆ ಹಿನ್ನಡೆ ತರಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರ ಹೆಸರಿನಲ್ಲೇ ರಾಮನಿದ್ದಾನೆ. ನನ್ನ ಹೆಸರಲ್ಲಿ ಶಿವ ಇದ್ದಾನೆ. ಧರ್ಮ ನಮ್ಮ ವೈಯಕ್ತಿಕ ವಿಚಾರ. ನಾನು ಎಲ್ಲ ಧರ್ಮ, ಸಮುದಾಯಗಳ ಮೇಲೆ ನಂಬಿಕೆ ಇಟ್ಟಿದ್ದು, ನಮ್ಮ ಧರ್ಮದ ಆಚರಣೆ ಬಗ್ಗೆಯೂ ನಂಬಿಕೆ ಇದೆ. ರಾಮ ಮಂದಿರ ವಿಚಾರದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಆಗುವುದಿಲ್ಲ. ಒಂದು ವಿಚಾರ ಸ್ಪಷ್ಟಪಡಿಸುತ್ತೇನೆ, ರಾಜಕೀಯದಲ್ಲಿ ಧರ್ಮ ಇರಬೇಕೇ ವಿನಃ ಧರ್ಮದಲ್ಲಿ ರಾಜಕೀಯ ಇರಬಾರದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X