ನಿಗಮ-ಮಂಡಳಿ ನೇಮಕ | ಸಿಎಂ-ಡಿಸಿಎಂ ನಡುವೆ ಮೂಡದ ಒಮ್ಮತ; ನ.28ಕ್ಕೆ ಮತ್ತೆ ಸುರ್ಜೇವಾಲ ಸಭೆ

Date:

Advertisements
  • ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ನಡುವೆ ಒಮ್ಮತ ಮೂಡಿಲ್ಲ
  • ಶಾರ್ಟ್ ಲಿಸ್ಟ್ ಸಮೇತ ತೆರಳಿರುವ ರಣದೀಪ್‌ ಸಿಂಗ್ ಸುರ್ಜೆವಾಲ 

ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲ ನೇತೃತ್ವದಲ್ಲಿ ಮಂಗಳವಾರ (ನ.22) ರಾತ್ರಿ ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ ವಿಚಾರವಾಗಿ ಸಭೆ ನಡೆದಿದ್ದು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ನಡುವೆ ಒಮ್ಮತ ಮೂಡಿಲ್ಲ ಎಂದು ತಿಳಿದುಬಂದಿದೆ.

ತಡರಾತ್ರಿವರೆಗೂ ನಡೆದ ಸಭೆ ಅಪೂರ್ಣಗೊಂಡಿದೆ. ನಿಗಮ ಮಂಡಳಿಗಳ ನೇಮಕ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಅವರು ತಮ್ಮ ಪರವಾಗಿರುವ ನಾಯಕರಿಗೆ ಕೊಡಿಸಲು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ರಣದೀಪ​ ಸುರ್ಜೆವಾಲ ಮತ್ತೊಮ್ಮೆ ಸಭೆ ನಡೆಸಲು ತೀರ್ಮಾನಿಸಿದ್ದಾರೆ.

ನವೆಂಬರ್​ 28ರಂದು ಮತ್ತೆ ರಾಜ್ಯಕ್ಕೆ ಸುರ್ಜೇವಾಲ ಆಗಮಿಸಲಿದ್ದಾರೆ. ಇನ್ನು ಮಂಗಳವಾರ ನಡೆದ ಸಭೆಯಲ್ಲಿ ಹಲವು ನಾಯಕರ ಹೆಸರು ಪ್ರಸ್ತಾಪವಾಗಿದ್ದು, ಶಾರ್ಟ್ ಲಿಸ್ಟ್ ಮಾಡಲಾಗಿದೆ. ಈ ಪಟ್ಟಿ ಸಮೇತ ತೆರಳಿರುವ ಸುರ್ಜೆವಾಲ ಎಐಸಿಸಿ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ನಂತರ ರಾಜ್ಯಕ್ಕೆ ಆಗಮಿಸಿ ಅಂತಿಮ ತೀರ್ಮಾನ ಮಾಡುವ ಸಾಧ್ಯತೆ ಇದೆ.

Advertisements

ಆದಷ್ಟು ಬೇಗ ನೇಮಕ: ಡಿಕೆಶಿ

ಸಭೆಯ ಬಳಿಕ ಡಿಕೆ ಶಿವಕುಮಾರ್‌ ಸುದ್ದಿಗಾರರ ಜೊತೆ ಮಾತನಾಡಿ, “ನಾವು ಲೋಕಸಭಾ ಚುನಾವಣೆಗೆ ಹೋಗಬೇಕು. ಹೀಗಾಗಿ ಸೂಕ್ತ ನಾಯಕರಿಗೆ ನಿಗಮ ಮಂಡಳಿ ಸ್ಥಾನ ಸಿಗಬೇಕಿದೆ. ನಮ್ಮ ನಾಯಕರ ನಡುವೆ ಚರ್ಚೆ ನಡೆದಿದ್ದು, ಆದಷ್ಟು ಬೇಗ ನೇಮಕವಾಗಲಿದೆ” ಎಂದು ತಿಳಿಸಿದರು.

ಡಾ. ಜಿ ಪರಮೇಶ್ವರ್‌ ಮುನಿಸಿಕೊಂಡಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ನಮ್ಮಲ್ಲಿ ಯಾವುದೇ ನಾಯಕರು ಮುನಿಸಿಕೊಂಡಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ. ನಾವೆಲ್ಲ ಒಗ್ಗಟ್ಟಾಗಿಯೇ ಇದ್ದೇವೆ” ಎಂದು ಹೇಳಿದರು.

ಸರ್ಕಾರದ ಅಧೀನದಲ್ಲಿ ಒಟ್ಟಾರೆ 85 ನಿಗಮಗಳಿದ್ದು, ಅಲ್ಲಿಗೆ ನೇಮಕ ಮಾಡುವ ಪೂರ್ಣ ಅಧಿಕಾರ ಸರ್ಕಾರಕ್ಕಿದೆ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಿರ್ದೇಶಕರನ್ನು ನೇಮಕ ಮಾಡಲಾಗುತ್ತದೆ. ಎಲ್ಲ ರಾಜಕೀಯ ಪಕ್ಷಗಳು ತಮ್ಮ ಅಧಿಕಾರದ ಸರದಿ ಬಂದಾಗ ನೇಮಕಗಳನ್ನು ಮಾಡುತ್ತವೆ.

ಸಂಭಾವ್ಯರ ಪಟ್ಟಿ ಹೀಗಿದೆ

ಶಿವಲಿಂಗೇಗೌಡ
ಬಿ.ಕೆ ಸಂಗಮೇಶ್
ಬಂಗಾರಪೇಟೆ ನಾರಾಯಣಸ್ವಾಮಿ
ಕೆ.ವೈ ನಂಜೇಗೌಡ
ಬಿ.ಆರ್ ಪಾಟೀಲ್
ಪಿ.ಎಂ ನರೇಂದ್ರ ಸ್ವಾಮಿ
ರಮೇಶ್ ಬಾಬು ಬಂಡಿಸಿದ್ದೇಗೌಡ
ಅನಿಲ್ ಚಿಕ್ಕಮಾದು
ಟಿ.ಡಿ ರಾಜೇಗೌಡ
ರಘುಮೂರ್ತಿ
ಭೀಮಣ್ಣ ನಾಯ್ಕ್
ಸತೀಶ್ ಸೈಲ್
ಪ್ರಸಾದ್ ಅಬ್ಬಯ್ಯ
ಜಿ.ಟಿ ಪಾಟೀಲ್
ಡಿ.ಆರ್ ಪಾಟೀಲ್
ಗಣೇಶ್ ಹುಕ್ಕೇರಿ
ಮಹಾಂತೇಶ್ ಕೌಜಲಗಿ
ಯಶವಂತ್ ರಾಯ್ ಗೌಡ ಪಾಟೀಲ್
ಬಿ.ಜಿ ಗೋವಿಂದಪ್ಪ
ರಾಘವೇಂದ್ರ ಹಿಟ್ನಾಳ್
ಬಸನಗೌಡ ತುರುವಿಹಾಳ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X