ಗೋಬಿ, ಪಾನಿಪುರಿ, ಕಬಾಬ್‌ ಸೇರಿ ಎಲ್ಲ ಖಾದ್ಯಗಳಲ್ಲಿ ಕೃತಕ ಬಣ್ಣ ನಿಷೇಧ: ಸಚಿವ ಗುಂಡೂರಾವ್

Date:

Advertisements

ಗೋಬಿ ಮಂಚೂರಿ, ಪಾನಿಪುರಿ, ಕಬಾಬ್‌ ಸೇರಿ ಎಲ್ಲ ರೀತಿಯ ಖಾದ್ಯಗಳಲ್ಲಿ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಹೇಳಿದರು.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಬೀದಿ ಬದಿಯ ತಳ್ಳು ಗಾಡಿ ವ್ಯಾಪಾರಿಗಳಿಂದ ಹಿಡಿದು ಪಂಚ ತಾರಾ ಹೋಟೆಲ್‌ವರೆಗೂ ಆದೇಶ ಅನ್ವಯವಾಗುತ್ತದೆ. ಒಂದು ವೇಳೆ ಕಾನೂನು ಉಲ್ಲಂಘಿಸಿ ಆಹಾರ ಪದಾರ್ಥಗಳನ್ನು ತಯಾರಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ದಂಡ ಮತ್ತು ಜೈಲು ವಾಸವನ್ನೂ ಅನುಭವಿಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

“ಬಣ್ಣ ಬಳಸಿ ಮಾಡಿದ ಕಾಟನ್‌ ಕ್ಯಾಂಡಿಗಳನ್ನು ನಿಷೇಧಿಸಲಾಗುವುದು. ಬಣ್ಣ ರಹಿತ ಕಾಟನ್‌ ಕ್ಯಾಂಡಿ ತಯಾರಿಕೆಗೆ ನಿರ್ಬಂಧ ಇರುವುದಿಲ್ಲ. ಕಾಟನ್‌ ಕ್ಯಾಂಡಿಗೆ ದಟ್ಟ ಮತ್ತು ಆಕರ್ಷಕ ಬಣ್ಣ ಬರಲು ರೋಡಮೈನ್‌–ಬಿಯನ್ನು ಬಳಸಲಾಗುತ್ತದೆ. ಇದನ್ನು ಆಹಾರದಲ್ಲಿ ಬಳಸುವುದಕ್ಕೆ ನಿಷೇಧವಿದೆ. ಇದು ಕ್ಯಾನ್ಸರ್‌ಗೆ ಕಾರಣವಾಗುವ ಅಂಶವನ್ನು ಹೊಂದಿದೆ” ಎಂದರು.

Advertisements

ಆಹಾರಗಳ ಮೇಲೆ ನಿಷೇಧ ಇಲ್ಲ

“ಗೋಬಿ ಮಂಚೂರಿ ಸೇರಿ ಯಾವುದೇ ಆಹಾರಗಳ ಮೇಲೆ ನಿಷೇಧ ವಿಧಿಸುವುದಿಲ್ಲ. ಆದರೆ ಇವುಗಳಿಗೆ ಬಳಸುವ ಕೃತಕ ಬಣ್ಣ ಮತ್ತು ರುಚಿಯನ್ನು ವರ್ಧಿಸಲು ಬಳಸುವ ರಾಸಾಯನಿಕಗಳನ್ನು ಬಳಸುವುದನ್ನು ನಿರ್ಬಂಧಿಸಲಾಗುವುದು. ಇವೆಲ್ಲ ಆಹಾರ ಪದಾರ್ಥಗಳಿಂದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಸಾರ್ವಜನಿಕರೂ ಈ ಬಗ್ಗೆ ಎಚ್ಚರಿಕೆ ವಹಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಯಕರ್ತರನ್ನು ಕಡೆಗಣಿಸಿದ ಬಿಜೆಪಿ ‘ಗೋ ಬ್ಯಾಕ್’ ಘೋಷಣೆಗೆ ಬೆಚ್ಚಿತೇ?

ಆರೋಗ್ಯ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ನಿಯಮಿತವಾಗಿ ಎಲ್ಲ ರೀತಿಯ ಹೋಟೆಲ್‌ಗಳು, ಬೀದಿ ಬದಿ ತಳ್ಳುಗಾಡಿಗಳಲ್ಲಿನ ಆಹಾರ ಪದಾರ್ಥಗಳನ್ನು ಪರೀಕ್ಷೆ ನಡೆಸುತ್ತದೆ. ಈ ಕಾರ್ಯಕ್ಕಾಗಿ ಹೆಚ್ಚಿನ ಸಿಬ್ಬಂದಿ ನೇಮಿಸಿಕೊಳ್ಳಲಾಗುವುದು. ಇದಕ್ಕಾಗಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ” ಎಂದು ವಿವರಿಸಿದರು.

ರೋಡಮೈನ್‌–ಬಿ ಗೆ ಅಪಾಯಕಾರಿ

“ಕಾಟನ್‌ ಕ್ಯಾಂಡಿಯಲ್ಲಿ ಬಳಸುವ ರೋಡಮೈನ್‌–ಬಿ ಅತ್ಯಂತ ಅಪಾಯಕಾರಿ. ದಟ್ಟ ಗುಲಾಬಿ ಅಥವಾ ಇತರ ಬಣ್ಣ ನೀಡುವುದಕ್ಕಾಗಿ ಇದನ್ನು ಬಳಸುತ್ತಾರೆ. ಇದು ಕ್ಯಾನ್ಸರ್‌ಗೆ ಕಾರಣವಾಗುವುದರ ಜತೆಗೆ ಮಿದುಳು, ಮೂತ್ರಪಿಂಡ, ಹೃದಯಕ್ಕೂ ಹಾನಿ ಮಾಡಬಲ್ಲದು. ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣಕ್ಕಾಗಿ ಬಳಸುವ ಟಾರ್‌ ಟ್ರಾಸೈನ್‌, ಸನ್‌ಸೆಟ್‌ ಯೆಲ್ಲೊ ಮತ್ತು ಕಾರ್ಮೊಸಿನ್‌ ಕೂಡ ಆರೋಗ್ಯಕ್ಕೆ ಅಪಾಯಕಾರಿ” ಎಂದು ಹೇಳಿದರು.

ಕೃತಕ ಬಣ್ಣ ಬಳಸಿದರೆ ಶಿಕ್ಷೆ ಏನು?

“ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ–2006 ರ ನಿಯಮ 59 ರಡಿ 7 ವರ್ಷಗಳಿಂದ ಜೀವಾವಧಿ ಜೈಲು ಶಿಕ್ಷೆ ಮತ್ತು ₹10 ಲಕ್ಷ ದಂಡ ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಬಹುದು” ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X