ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರ : ಉಲ್ಟಾ ಹೊಡೆದ ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ!

Date:

Advertisements

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ದ ಬಂಡಾಯ ಎದ್ದು ಸುದ್ದಿಗೀಡಾಗಿದ್ದ ಸಂಘಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು ಎಂದು ಸುದ್ದಿ ಹರಡಿತ್ತು.

ಈ ಬಗ್ಗೆ ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗ, ‘ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರ ಬಗ್ಗೆ ಪಕ್ಷದಲ್ಲಿ ಯಾವುದೇ ತೀರ್ಮಾನ ಆಗಿಲ್ಲ. ಇದೆಲ್ಲವೂ ಮಾಧ್ಯಮಗಳ ಸೃಷ್ಟಿ” ಎಂದಿದ್ದರು. ಆದರೆ, ಈ ವಿಚಾರದಲ್ಲಿ ಈಗ ಉಲ್ಟಾ ಹೊಡೆದಿದ್ದು, ‘ರಾಜ್ಯಾಧ್ಯಕ್ಷರ ತೀರ್ಮಾನವೇ ನಮಗೆ ಅಂತಿಮ’ ಎಂದು ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಮತ್ತೆ ಮಾತನಾಡಿರುವ ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, “ಪುತ್ತಿಲ ಅವರು ಬೆಂಗಳೂರಿನಲ್ಲೇ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರ ಜೊತೆ ಮಾತುಕತೆ ನಡೆದು ಸೇರ್ಪಡೆ ಮಾಡಲಾಗಿದೆ. ಇನ್ನು ಮತ್ತೆ ಮಂಗಳೂರಿನಲ್ಲಿ ಸೇರ್ಪಡೆಯಂಥ ಪ್ರಕ್ರಿಯೆಗಳು ಇಲ್ಲ” ಎಂದಿದ್ದಾರೆ.

Advertisements

putila

“ಕೆಲ ಕಾರ್ಯಕರ್ತರು ಹಾಗೂ ಕೆಲವರಲ್ಲಿ ಇಂಥಹ ಗೊಂದಲ ಇರುವುದು ಸಹಜ. ಆದರೆ ರಾಜ್ಯಾಧ್ಯಕ್ಷರೇ ನಮಗೆ ಸುಪ್ರೀಂ. ಅವರ ಸೂಚನೆಯಂತೆ ಪುತ್ತಿಲ ಇರುತ್ತಾರೆ. ಅರುಣ್ ಕುಮಾರ್ ಪುತ್ತಿಲ ಲೋಕಸಭೆಯ ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡುತ್ತಾರೆ. ಈ ವಿಚಾರದಲ್ಲಿ ಯಾವುದೇ ಗೊಂದಲ ಬೇಡ, ಪುತ್ತಿಲ ಕೂಡ ಒಪ್ಪಿದ್ದಾರೆ” ಎಂದು ಸತೀಶ್ ಕುಂಪಲ ತಿಳಿಸಿದ್ದಾರೆ.

“ಪುತ್ತಿಲ ಪರಿವಾರ ವಿಸರ್ಜನೆ ಮಾಡಿಕೊಂಡೇ ಬಿಜೆಪಿಯಲ್ಲೇ ಕೆಲಸ ಮಾಡುತ್ತಾರೆ. ಪುತ್ತೂರು ಬಿಜೆಪಿಯಲ್ಲಿ ಯಾವುದೇ ಅಸಮಾಧಾನ ಇಲ್ಲ. ಪುತ್ತಿಲ ಪಕ್ಷೇತರ ಸ್ಪರ್ಧೆ ವೇಳೆ ಹಲವು ಸಂಘರ್ಷ ಆಗಿದೆ. ಈ ವಿಚಾರದಲ್ಲಿ ಸರಿ ಪಡಿಸುವ ಕೆಲಸ ಆಗುತ್ತಿದೆ. ಬಹುತೇಕ ಸರಿಯಾಗಿದ್ದು, ಸಣ್ಣ ಸಣ್ಣ ಗೊಂದಲಗಳು‌ ಇರುವುದು ಸಹಜ. ಅದೆಲ್ಲವನ್ನೂ ಸರಿಪಡಿಸುತ್ತೇವೆ. ಆದರೆ ಪುತ್ತಿಲ ಬಿಜೆಪಿಗೆ‌ ಬರಬಾರದು ಅಂತ ಯಾರೂ ಹೇಳಿರಲಿಲ್ಲ” ಎಂದು ಕುಂಪಲ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಏಳನೇ ವೇತನ ಆಯೋಗ ವರದಿ ಸಲ್ಲಿಕೆ, ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು

“ಪಕ್ಷ ಸೇರುವ ಬಗ್ಗೆ ರಾಜ್ಯಾಧ್ಯಕ್ಷರ ಜೊತೆಗೆ ಮಾತನಾಡಿ ಸಹಮತ ವ್ಯಕ್ತಪಡಿಸಿ ಪುತ್ತಿಲ ಬಿಜೆಪಿಗೆ ಬಂದಿದ್ದಾರೆ. ಹೀಗಿರುವಾಗ ಮತ್ತೆ ಧ್ವಜ ಕೊಟ್ಟು ಸ್ವಾಗತ ಮಾಡಬೇಕು ಅಂತೇನಿಲ್ಲ. ರಾಜ್ಯಾಧ್ಯಕ್ಷರಿಗಿಂತ ನಾವು ದೊಡ್ಡವರಲ್ಲ, ಅವರು ಹೇಳಿದ ಮೇಲೆ ಮುಗೀತು. ಅರುಣ್ ಪುತ್ತಿಲ ಬಿಜೆಪಿ ಜೊತೆ ಕೆಲಸ ಮಾಡಲಿದ್ದಾರೆ” ಎಂದು ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.

“ಇದೆಲ್ಲವೂ ಮಾಧ್ಯಮಗಳ ಸೃಷ್ಟಿ” ಎಂದಿದ್ದ ಬಿಜೆಪಿ ಜಿಲ್ಲಾಧ್ಯಕ್ಷ

ಲೋಕಸಭಾ ಚುನಾವಣೆ ಕಾರ್ಯತಂತ್ರ ಬಗ್ಗೆ ಪುತ್ತೂರಿನಲ್ಲಿ ಕಾರ್ಯಕರ್ತರು ಮತ್ತು ಮುಖಂಡರುಗಳೊಂದಿಗೆ ಸಭೆ ನಡೆಸಿದ ಅವರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗ ಅರುಣ್ ಕುಮಾರ್ ಪುತ್ತಿಲ ಪಕ್ಷ ಸೇರ್ಪಡೆ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದ್ದರು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, “ಪುತ್ತಿಲ ಪರಿವಾರ ಮಂಗಳೂರಿನಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ವಿಚಾರ ಬಗ್ಗೆ ಪಕ್ಷದಲ್ಲಿ ಯಾವುದೇ ತೀರ್ಮಾನ ಆಗಿಲ್ಲ. ಇದೆಲ್ಲವೂ ಮಾಧ್ಯಮಗಳ ಸೃಷ್ಟಿ” ಎಂದು ಹೇಳಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X