ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯ ಹದಗೆಟ್ಟಿದೆ ಎಂದು ಎಎಪಿ ಹೇಳಿರುವುದಾಗಿ ವರದಿಯಾಗಿದೆ.
ಅರವಿಂದ್ ಕೇಜ್ರಿವಾಲ್ ಅವರಲ್ಲಿ ಮಧುಮೇಹ ಪ್ರಮಾಣ ಏರುಪೇರಾಗುತ್ತಿದ್ದು, ಆರೋಗ್ಯವು ಹದಗೆಡುತ್ತಿದೆ. ಕೇಜ್ರಿವಾಲ್ ದೇಹದಲ್ಲಿ ಸಕ್ಕರೆ ಪ್ರಮಾಣ 46 ಎಂಜಿಗೆ ತಲುಪಿದೆ. ವೈದ್ಯರ ಪ್ರಕಾರ ಸಕ್ಕರೆ ಪ್ರಮಾಣದಲ್ಲಿ ಈ ಮಟ್ಟಿನ ಇಳಿಕೆ ‘ಅತ್ಯಂತ ಅಪಾಯಕಾರಿ’ ಎಂದು ಎಎಪಿ ಹೇಳಿದೆ.
ಇದಕ್ಕೂ ಮುನ್ನ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ್ದು, “ನಾನು ಇಡಿ ಕಸ್ಟಡಿಯಲ್ಲಿರುವ ನನ್ನ ಪತಿಯನ್ನು ಭೇಟಿಯಾದೆ. ಅವರ ಸಕ್ಕರೆ ಪ್ರಮಾಣ ಏರಿಳಿತವಾಗುತ್ತಿದೆ. ಅವರ ಆರೋಗ್ಯಕ್ಕಾಗಿ ಎಲ್ಲರೂ ಪ್ರಾರ್ಥಿಸಿ” ಎಂದು ಮನವಿ ಮಾಡಿದ್ದರು.
ಇದನ್ನು ಓದಿದ್ದೀರಾ? ಅರವಿಂದ್ ಕೇಜ್ರಿವಾಲ್ ಮನೆಯಲ್ಲಿ ಇಡಿಗೆ ಸಿಕ್ಕಿದು ಬರೀ 70,000 ರೂಪಾಯಿ: ಎಎಪಿ
“ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಯಲ್ಲಿ ಹಗರಣ ನಡೆದಿದೆ ಎಂದು ತನಿಖೆಯ ಸಲುವಾಗಿ ಜಾರಿ ನಿರ್ದೇಶನಾಲಯ ಮಾ.21ರಂದು ತಮ್ಮ ಕಸ್ಟಡಿಗೆ ತೆಗೆದುಕೊಂಡಿದೆ. ಇ.ಡಿ ದಾಳಿ ನಡೆಸಿದಾಗ ದೆಹಲಿ ಸಿವಿಲ್ ಲೈನ್ಸ್ ಪ್ರದೇಶದ ಮನೆಯಲ್ಲಿ ಜಾರಿ ನಿರ್ದೇಶನಾಲಯಕ್ಕೆ ಕೇವಲ 73 ಸಾವಿರ ರೂ. ಮಾತ್ರ ಹಣ ದೊರಕಿದೆ” ಎಂದು ತಿಳಿಸಿದರು.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮನಿಲಾಂಡರಿಂಗ್ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿದೆ. ಮಾರ್ಚ್ 28ರವರೆಗೆ ಕೇಜ್ರಿವಾಲ್ ಇಡಿ ಕಸ್ಟಡಿಯಲ್ಲಿ ಇರಲಿದ್ದಾರೆ. ಇನ್ನು ಅರವಿಂದ್ ಕೇಜ್ರಿವಾಲ್ ತನ್ನ ಬಂಧನವನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದಾರೆ.