ಆಂತರಿಕ ಸಂಘರ್ಷ: ಆಶ್ರಯಕ್ಕಾಗಿ ಭಾರತದೊಳಗೆ ಕಾಲಿಟ್ಟ 600ಕ್ಕೂ ಹೆಚ್ಚು ಮಯನ್ಮಾರ್‌ ಸೈನಿಕರು!

Date:

Advertisements

ಮಯನ್ಮಾರ್‌ನಲ್ಲಿ ಬಂಡುಕೋರ ಪಡೆಗಳು ಮತ್ತು ಜುಂಟಾ ಆಡಳಿತದ ನಡುವೆ ಆಂತರಿಕ ಸಂಘರ್ಷ ನಡೆಯುತ್ತಿದೆ. ಇದರ ನಡುವೆಯೇ ಸುಮಾರು 600ಕ್ಕೂ ಹೆಚ್ಚು ಮಯನ್ಮಾರ್‌ ಸೈನಿಕರು ಭಾರತಕ್ಕೆ ಕಾಲಿಟ್ಟು, ಆಶ್ರಯ ಕೋರಿರುವುದಾಗಿ ವರದಿಯಾಗಿದೆ.

ಮಯನ್ಮಾರ್‌ನೊಂದಿಗೆ ಗಡಿ ಹಂಚಿಕೊಂಡಿರುವ ಭಾರತದ ರಾಜ್ಯವಾಗಿರುವ ಮಿಝೋರಾಂನ ಕೆಲವು ಪ್ರದೇಶಗಳ ಮೂಲಕ ಸೈನಿಕರು ಪ್ರವೇಶಿಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

ಭಾರತ-ಮಯನ್ಮಾರ್‌-ಬಾಂಗ್ಲಾದೇಶದ ಗಡಿ ಭಾಗದ ಜಂಕ್ಷನ್‌ ಎಂದು ಗುರುತಿಸಲಾಗಿರುವ ಮಿಜೋರಾಂನ ಬಂಡುಕ್ಬಂಗಾ ಗ್ರಾಮದೊಳಗೆ ಬುಧವಾರ ಮಧ್ಯಾಹ್ನ ಕನಿಷ್ಠ 276 ಮಯನ್ಮಾರ್‌ ಸೇನೆಯ ಸಿಬ್ಬಂದಿಗಳು ಭಾರತದ ಭೂಪ್ರದೇಶದೊಳಗೆ ಪ್ರವೇಶಿಸುತ್ತಿರುವ ದೃಶ್ಯವು ಹರಿದಾಡಿದೆ.

Advertisements

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಮಿಝೋರಾಂ ಸರ್ಕಾರವು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದು, ಈ ಬಗ್ಗೆ ಶೀಘ್ರವೇ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಎಚ್ಚರಿಸಿದೆ. ನೆರೆಯ ರಾಷ್ಟ್ರದ ಸೈನಿಕರನ್ನು ಹಿಂದಕ್ಕೆ ಕಳುಹಿಸುವ ಬಗ್ಗೆ ತ್ವರಿತವಾಗಿ ಖಚಿತಪಡಿಸಿ ಎಂದು ಒತ್ತಾಯಿಸಿದೆ.

ಮಯನ್ಮಾರ್‌ನಲ್ಲಿ ತೀವ್ರ ಘರ್ಷಣೆಯ ನಡುವೆ ಸುಮಾರು 600 ಮ್ಯಾನ್ಮಾರ್ ಸೇನೆಯ ಸೈನಿಕರು ಭಾರತವನ್ನು ದಾಟಿದ್ದಾರೆ. ಪಶ್ಚಿಮ ಮಯನ್ಮಾರ್‌ ರಾಜ್ಯದ ರಾಖೈನ್‌ನಲ್ಲಿ ಜನಾಂಗೀಯ ಸಶಸ್ತ್ರ ಗುಂಪು ಅರಕನ್ ಆರ್ಮಿ (ಎಎ) ಉಗ್ರಗಾಮಿಗಳು ತಮ್ಮ ಶಿಬಿರಗಳನ್ನು ವಶಪಡಿಸಿಕೊಂಡ ನಂತರ ಸೈನಿಕರು ಭಾರತದೊಳಗೆ ಬಂದಿದ್ದು, ಸೈನಿಕರು ಅಸ್ಸಾಂ ರೈಫಲ್ಸ್ ಶಿಬಿರದಲ್ಲಿ ಆಶ್ರಯ ಪಡೆದಿದ್ದಾರೆ ಎಂದು ವರದಿಯಾಗಿದೆ.

ಈ ಬೆಳವಣಿಗೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತುರ್ತು ಮಾತುಕತೆ ನಡೆಸುವಂತೆ ಮಿಝೋರಾಂ ಮುಖ್ಯಮಂತ್ರಿ ಲಾಲ್ದುಹೋಮ ಆಗ್ರಹಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಿಝೋರಾಂ ಮುಖ್ಯಮಂತ್ರಿ ಲಾಲ್ದುಹೋಮ, “ಜನರು ಆಶ್ರಯಕ್ಕಾಗಿ ಮಯನ್ಮಾರ್‌ನಿಂದ ನಮ್ಮ ದೇಶಕ್ಕೆ ಪಲಾಯನ ಮಾಡುತ್ತಿದ್ದಾರೆ. ನಾವು ಅವರಿಗೆ ಮಾನವೀಯ ಆಧಾರದ ಮೇಲೆ ಸಹಾಯ ಮಾಡುತ್ತಿದ್ದೇವೆ. ಮಯನ್ಮಾರ್ ಸೈನಿಕರು ಕೂಡ ಬರುತ್ತಲೇ ಇದ್ದು, ಆಶ್ರಯ ಪಡೆಯುತ್ತಿದ್ದಾರೆ. ಸುಮಾರು 450 ಸೇನಾ ಸಿಬ್ಬಂದಿಯನ್ನು ವಾಪಸ್ ಕಳುಹಿಸಲಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X