ನೋಟಿನ ರಾಶಿಯಲ್ಲಿ ಮಲಗಿದ ಅಸ್ಸಾಂ ಬಿಜೆಪಿ ಮಿತ್ರ ಪಕ್ಷದ ಮುಖಂಡ; ಫೋಟೋ ವೈರಲ್

Date:

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಫೋಟೋವೊಂದು ಅಸ್ಸಾಂ ರಾಜಕೀಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಆ ಫೋಟೋದಲ್ಲಿ ಅಸ್ಸಾಂನ ಬಿಜೆಪಿಯ ಮಿತ್ರ ಪಕ್ಷ ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ (ಯುಪಿಪಿಎಲ್) ಮುಖಂಡರೊಬ್ಬರು 500 ರೂಪಾಯಿ ನೋಟುಗಳ ರಾಶಿ ನಡುವೆ ಮಲಗಿರುವುದು ಕಂಡುಬಂದಿದೆ.

ಪೋಟೋದಲ್ಲಿರುವವರು ಯುಪಿಪಿಎಲ್‌ ಮುಖಂಡ ಬೆಂಜಮಿನ್ ಬಸುಮತರಿ ಎಂದು ಗುರುತಿಸಲಾಗಿದೆ. ಅವರು ಉದಲಗುರಿ ಜಿಲ್ಲೆಯ ಭೈರಿಗುರಿ ಗ್ರಾಮದ ಕೌನ್ಸಿಲ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಲೋಕಸಭೆ ಚುನಾವಣೆಯ ಪ್ರಚಾರ ನಡೆಯುತ್ತಿರುವ ಈ ಸಂದರ್ಭದಲ್ಲಿ ಅವರ ಫೋಟೋ ವೈರಲ್ ಆಗಿದೆ.

“ಸರ್ಕಾರವು ಭ್ರಷ್ಟಾಚಾರದಿಂದ ದೂರವಿರಲು ಬದ್ಧವಾಗಿದೆ. ಯಾವುದೇ ಭ್ರಷ್ಟ ಕೃತ್ಯದಲ್ಲಿ ಪಕ್ಷ ತೊಡಗುವುದಿಲ್ಲ. ಬೆಂಜಮಿನ್ ಬಸುಮತರಿ ಚಿತ್ರವು ವೈರಲ್ ಆಗಿದೆ. ಬಸುಮತರಿ ನಮ್ಮ ಪಕ್ಷದೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ ಎಂದು ನಾವು ಸ್ಪಷ್ಟಪಡಿಸಲು ಬಯಸುತ್ತೇವೆ. ಅವರನ್ನು ಜನವರಿ 10ರಂದೇ ವಜಾಗೊಳಿಸಲಾಗಿದೆ” ಎಂದು ಯುಪಿಪಿಎಲ್ ನಾಯಕ, ಬೋಡೋಲ್ಯಾಂಡ್ ಟೆರಿಟೋರಿಯಲ್ ಕೌನ್ಸಿಲ್ (ಬಿಟಿಸಿ) ಮುಖ್ಯ ಕಾರ್ಯನಿರ್ವಾಹಕ ಸದಸ್ಯ ಪ್ರಮೋದ್ ಬೋರೊ ಸ್ಪಷ್ಟೀಕರಣ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ?  ‘ಸಿಎಎ ಅಸಂವಿಧಾನಿಕ’ ಎಂದ ನ್ಯಾಯಮೂರ್ತಿ ಚಂದ್ರಚೂಡ್‌ರ ಪುತ್ರ; ವೀಡಿಯೋ ವೈರಲ್

ವೈರಲ್ ಆಗಿರುವ ಚಿತ್ರದಲ್ಲಿ ಬಸುಮತರಿ ಅರೆನಗ್ನರಾಗಿದ್ದು, ಐನ್ನೂರು ರೂಪಾಯಿಯ ನೋಟುಗಳ ರಾಶಿ ಇರುವ ಹಾಸಿಗೆಯ ಮೇಲೆ ಮಲಗಿದ್ದಾರೆ. ಅವರ ಮೇಲೂ ನೋಟುಗಳು ಹರಡಿರುವುದನ್ನು ನಾವು ಚಿತ್ರದಲ್ಲಿ ಕಾಣಬಹುದು. ಈ ಚಿತ್ರ ವೈರಲ್ ಆಗುತ್ತಿದ್ದಂತೆ ಯುಪಿಪಿಎಲ್ ಮತ್ತು ಬಿಜೆಪಿ ಎರಡು ಪಕ್ಷಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಲಾಗುತ್ತಿದೆ.

ಇನ್ನು ವಿಪಕ್ಷ ನಾಯಕರುಗಳು ಈ ವಿಚಾರದಲ್ಲಿ ಸಮಗ್ರ ವಿಚಾರಣೆಗೆ ಆಗ್ರಹಿಸಿದ್ದಾರೆ. “ವಿಪಕ್ಷ ನಾಯಕರ ಮೇಲೆ ಕ್ರಮ ಕೈಗೊಂಡಂತೆ ಈ ನಾಯಕನ ವಿರುದ್ಧ ಇಡಿ, ಇಸಿ, ಐಟಿ ಕ್ರಮ ಕೈಗೊಳ್ಳಲಾಗುತ್ತದೆಯೇ” ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2ನೇ ಹಂತದ ಲೋಕಸಭಾ ಚುನಾವಣೆ: ಶೇ.61 ಮತದಾನ

ದೇಶಾದ್ಯಂತ 13 ರಾಜ್ಯ ಹಾಗೂ ಒಂದು ಕೆಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಿಗೆ...

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಕಲ್ಲು ತೂರಾಟ, ಗಲಾಟೆ ನಡುವೆ ಬಹುತೇಕ ಕಡೆ ರಾಜ್ಯದಲ್ಲಿ ಶಾಂತಿಯುತ ಮತದಾನ

ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ...

ನಾಮಪತ್ರ ತಿರಸ್ಕೃತಗೊಂಡ ಸೂರತ್ ಅಭ್ಯರ್ಥಿ ನೀಲೇಶ್ ಕಾಂಗ್ರೆಸ್‌ನಿಂದ ಅಮಾನತು

ಸೂರತ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡು ಬಿಜೆಪಿಯ ಮುಖೇಶ್...