ಬಹುಪತ್ನಿತ್ವ ನಿಷೇಧಕ್ಕೆ ತಜ್ಞರ ಸಮಿತಿ ರಚಿಸಲು ಮುಂದಾದ ಅಸ್ಸಾಂ ಸರ್ಕಾರ

Date:

Advertisements
  • ಮುಸ್ಲಿಂ ವೈಯಕ್ತಿಕ ಕಾನೂನು (ಶರಿಯತ್) ಕಾಯಿದೆ ಪರಿಶೀಲಿಸುವುದಾಗಿ ಹೇಳಿರುವ ಸಿಎಂ
  • ಐವರು ನ್ಯಾಯಾಧೀಶರ ಸಂವಿಧಾನ ಪೀಠ ಸ್ಥಾಪಿಸುವುದಾಗಿ ಹೇಳಿದ್ದ ಸುಪ್ರೀಂ ಕೋರ್ಟ್

ಬಹುಪತ್ನಿತ್ವ ನಿಷೇಧಕ್ಕೆ ಮುಂದಾಗಿರುವ ಅಸ್ಸಾಂನ ಬಿಜೆಪಿ ಸರ್ಕಾರ, ಕಾಯಿದೆ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆಯೇ ಎಂದು ಪರೀಶಿಲಿಸಲು ತಜ್ಞರ ಸಮಿತಿ ರಚಿಸಲು ಮುಂದಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, “ರಾಜ್ಯವು ಬಹುಪತ್ನಿತ್ವದ ಮೇಲೆ ನಿಷೇಧ ಹೇರಲು ಸಾಧ್ಯವಾದರೆ ತಮ್ಮ ಸರ್ಕಾರವು ಅಧ್ಯಯನ ನಡೆಸಲಿದೆ. ಇದಕ್ಕಾಗಿ ಕಾನೂನಿನ ಅಂಶಗಳನ್ನು ಅನ್ವೇಷಿಸಲು ತಜ್ಞರ ಸಮಿತಿ ರಚಿಸಲು ಸರ್ಕಾರ ನಿರ್ಧರಿಸಿದೆ” ಎಂದು ತಿಳಿಸಿದರು.

“ರಾಜ್ಯದಲ್ಲಿ ಬಹುಪತ್ನಿತ್ವವನ್ನು ನಿಷೇಧಿಸಲು ರಾಜ್ಯ ಶಾಸಕಾಂಗಕ್ಕೆ ಅಧಿಕಾರವಿದೆಯೇ ಎಂಬುದನ್ನು ಪರಿಶೀಲಿಸಲು ಅಸ್ಸಾಂ ಸರ್ಕಾರವು ತಜ್ಞರ ಸಮಿತಿಯನ್ನು ರಚಿಸಲು ನಿರ್ಧರಿಸಿದೆ. ಸಮಿತಿಯು ಸಂವಿಧಾನದ 25ನೇ ವಿಧಿಯೊಂದಿಗೆ ಮುಸ್ಲಿಂ ವೈಯಕ್ತಿಕ ಕಾನೂನು (ಶರಿಯತ್) ಕಾಯಿದೆ, 1937ರ ನಿಬಂಧನೆಗಳನ್ನು ಪರಿಶೀಲಿಸುತ್ತದೆ” ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Advertisements

“ಕಾನೂನು ತಜ್ಞರು ಸೇರಿದಂತೆ ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಮಿತಿಯು ವಿಸ್ತೃತ ಚರ್ಚೆಯಲ್ಲಿ ತೊಡಗಿದ್ದು, ಉತ್ತಮ ಯೋಜನೆಯೊಂದಿಗೆ ನಿರ್ಧಾರಕ್ಕೆ ಬರಲಿದೆ” ಎಂದು ಮುಖ್ಯಮಂತ್ರಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಲೆಕ್ಕ ಪರಿಶೋಧಕರು ಮತ್ತು ಕಂಪನಿ ಕಾರ್ಯದರ್ಶಿಗಳಿಗೂ ಕಾಡಲಿದೆ ಪಿಎಂಎಲ್‌ಎ ಗುಮ್ಮ

ಮುಸ್ಲಿಮರಲ್ಲಿ ಬಹುಪತ್ನಿತ್ವ ಮತ್ತು ‘ನಿಕಾಹ್ ಹಲಾಲಾ’ ಪದ್ಧತಿಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಅರ್ಜಿಗಳ ವಿಚಾರಣೆಗೆ ಐವರು ನ್ಯಾಯಾಧೀಶರ ಸಂವಿಧಾನ ಪೀಠ ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದ ಕೆಲವು ತಿಂಗಳುಗಳ ನಂತರ ಅಸ್ಸಾಂ ಸರ್ಕಾರ ಈ ನಿರ್ಧಾರಕ್ಕೆ  ಬಂದಿದೆ.

ಕಳೆದ ವರ್ಷ ಆಗಸ್ಟ್‌ 30ರಂದು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಹೇಮಂತ ಗುಪ್ತಾ, ಸೂರ್ಯಕಾಂತ್‌, ಎಂ ಎಂ ಸುಂದ್ರೇಶ್‌ ಮತ್ತು ಸುಧಾಂಶು ಧುಲಿಯಾ ಅವರನ್ನು ಒಳಗೊಂಡ ಪಂಚ ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಮಹಿಳಾ ಹಕ್ಕುಗಳ ಆಯೋಗ, ಅಲ್ಪಸಂಖ್ಯಾತರ ಹಕ್ಕುಗಳ ಆಯೋಗವನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಿ ದಾವೆ ಹೂಡಿದವರಿಂದ ಪ್ರತಿಕ್ರಿಯೆ ಕೇಳಿತ್ತು.

ಕೊನೆಗೆ, ನ್ಯಾಯಮೂರ್ತಿ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಗುಪ್ತಾ ಅವರು ಅನುಕ್ರಮವಾಗಿ ಕಳೆದ ವರ್ಷ ಸೆಪ್ಟೆಂಬರ್‌ 23 ಮತ್ತು ಅಕ್ಟೋಬರ್‌ 16ರಂದು ನಿವೃತ್ತರಾದರು. ಪಂಚ ಸದಸ್ಯಪೀಠದಲ್ಲಿ ಇಬ್ಬರು ಕಡಿಮೆ ಆದ ಕಾರಣ ಈಗ ಹೊಸ ಪಂಚ ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ರಚಿಸುವ ಸನ್ನಿವೇಶ ಉಂಟಾಯಿತು. ಹಿಂದಿನ ಪಂಚ ಸದಸ್ಯ ಪೀಠವು ಬಹುಪತ್ನಿತ್ವ ಮತ್ತು ನಿಕಾಹ್‌ ಹಲಾಲಾ ಕುರಿತ 8 ಅರ್ಜಿಗಳನ್ನು ವಿಚಾರಣೆಗೆ ಎತ್ತಿಕೊಂಡಿತ್ತು.

ಸುಪ್ರೀಂ ಕೋರ್ಟ್‌ 2018ರ ಜುಲೈ ತಿಂಗಳಲ್ಲಿ ಈ ಅರ್ಜಿ ವಿಚಾರಣೆಗೆ ಪರಿಗಣಿಸಿದ್ದು, ಅಂಥದ್ದೇ ದಾವೆಗಳ ವಿಚಾರಣೆ ನಡೆಸುತ್ತಿದ್ದ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X