73 ಕೈಗಾರಿಕಾ ಯೋಜನೆಗಳಿಗೆ ಅಸ್ತು, 14,497 ಉದ್ಯೋಗ ಸೃಷ್ಟಿ: ಎಂ ಬಿ ಪಾಟೀಲ

Date:

Advertisements

ರಾಜ್ಯದಲ್ಲಿ ₹3,935 ಕೋಟಿಗೂ ಹೆಚ್ಚಿನ ಹೂಡಿಕೆಯಾಗಲಿರುವ ಒಟ್ಟು 73 ಯೋಜನಾ ಪ್ರಸ್ತಾವನೆಗಳಿಗೆ ಶುಕ್ರವಾರ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದರಿಂದ 14,497 ಉದ್ಯೋಗಾವಕಾಶ ಸೃಷ್ಟಿಯಾಗಲಿವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ತಮ್ಮ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯ ಬಳಿಕ ಮಾತನಾಡಿದ ಅವರು, “ಅನುಮೋದನೆ ನೀಡಿರುವ ಯೋಜನೆಗಳ ಪೈಕಿ 10 ಯೋಜನೆಗಳಲ್ಲಿ ತಲಾ 50 ಕೋಟಿ ರೂ.ಗೂ ಹೆಚ್ಚು ಹೂಡಿಕೆ ಆಗಲಿದೆ. ಈ ಯೋಜನೆಗಳಲ್ಲಿ ಇಟಿಎಲ್ ಸೆಕ್ಯೂರ್ ಸ್ಪೇಸ್, ದಶ್ ಪಿ.ವಿ.ಟೆಕ್ನಾಲಜೀಸ್, ಮೈಲಾರ್ ಇನ್ಫ್ರಾ, ಸ್ಯಾಂಗೋ ಆಟೋಮೋಟೀವ್ ಪಾರ್ಟ್ಸ್, ವೇನಾಸ್ ಲ್ಯಾಬ್ಸ್, ಸಿಂಬಯೋ ಜನರಿಕ್ಸ್ ಇಂಡಿಯಾ, ಎಂಎಎಫ್ ಕ್ಲಾತಿಂಗ್, ಎಸ್ಎಎ ಪ್ರಾಕ್ಟ್ಸ್, ನಿಫ್ಕೋ ಸೌತ್ ಇಂಡಿಯಾ ಮ್ಯಾನುಫ್ಯಾಕ್ಚರಿಂಗ್ ಮತ್ತು ರೆನ್ಸ್ ಬಯೋಟೆಕ್ ಕಂಪನಿಗಳು ಸೇರಿವೆ” ಎಂದರು.

“ಈ ಕಂಪನಿಗಳು ದೇವನಹಳ್ಳಿ, ಸಿರಾ ಕೈಗಾರಿಕಾ ಪ್ರದೇಶ, ಹೂವಿನಹಡಗಲಿ, ರಾಮನಗರ, ಕಡೇಚೂರು, ಚಾಮರಾಜನಗರ, ಗೌರಿಬಿದನೂರು ಮತ್ತು ತುಮಕೂರಿನ ವಸಂತ ನರಸಾಪುರಗಳಲ್ಲಿ ಹೂಡಿಕೆ ಮಾಡಲಿದ್ದು, ಒಟ್ಟು 9,200 ಉದ್ಯೋಗಗಳನ್ನು ಸೃಷ್ಟಿಸಲಿವೆ. ಮೇಲ್ಕಂಡ ಉದ್ದಿಮೆಗಳು ಕನಿಷ್ಠ 96 ಕೋಟಿ ರೂ.ಗಳಿಂದ ಹಿಡಿದು ಗರಿಷ್ಠ 490.50 ಕೋಟಿ ರೂ.ವರೆಗೂ ಬಂಡವಾಳ ತೊಡಗಿಸಲಿವೆ” ಎಂದು ಅವರು ಮಾಹಿತಿ ನೀಡಿದ್ದಾರೆ.

Advertisements

“ಇದಲ್ಲದೆ, ಕನಿಷ್ಠ 15 ಕೋಟಿ ರೂ.ಗಳಿಂದ ಹಿಡಿದು ಗರಿಷ್ಠ 50 ಕೋಟಿ ರೂ.ವರೆಗೂ ಹೂಡಿಕೆ ಮಾಡುವ ಪ್ರಸ್ತಾವನೆ ಸಲ್ಲಿಸಿದ್ದ 59 ಹೊಸ ಯೋಜನೆಗಳಿಗೂ ಒಪ್ಪಿಗೆ ನೀಡಲಾಗಿದೆ. ಇದರಿಂದ 5,297 ಮಂದಿಗೆ ಉದ್ಯೋಗ ಸಿಗಲಿದೆ. ಜೊತೆಗೆ, ಹೆಚ್ಚುವರಿ ಬಂಡವಾಳ ಹೂಡಿಕೆಯ 5 ಯೋಜನೆಗಳಿಗೂ ಅನುಮೋದನೆ ಕೊಟ್ಟಿದ್ದು, ಇದರಿಂದ 87.67 ಕೋಟಿ ರೂ. ಬಂಡವಾಳ ರಾಜ್ಯಕ್ಕೆ ಹರಿದು ಬರಲಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನ್ನಪೂರ್ಣಿ ‘ನಿಷೇಧ’- ಧರ್ಮಗಳ ನಡುವೆ ಬೆಂಕಿ ಇಟ್ಟು ಬೇಳೆ ಬೇಯಿಸುವ ಕೃತ್ಯ

“ರಾಜ್ಯ ಸರ್ಕಾರವು ಉದ್ಯಮ ಸ್ನೇಹಿಯಾಗಿದ್ದು, ಹೂಡಿಕೆದಾರರಿಗೆ ಸುಗಮ ಒಪ್ಪಿಗೆ ಸಿಗುವಂತೆ ನಿಜವಾದ ಅರ್ಥದಲ್ಲಿ ಏಕಗವಾಕ್ಷಿ ಪದ್ಧತಿಯನ್ನು ಜಾರಿಗೆ ತಂದಿದೆ. ಹೂಡಿಕೆದಾರರನ್ನು ಉತ್ತೇಜಿಸವಂತಹ ಹಲವು ಅಂಶಗಳನ್ನು 2020-25ರ ಕೈಗಾರಿಕಾ ನೀತಿಯಲ್ಲಿ ಅಳವಡಿಸಿಕೊಂಡಿದ್ದು, ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಆದ್ಯತೆ ಕೊಡಲಾಗಿದೆ. ಇದರಲ್ಲಿ ಪ್ರಾದೇಶಿಕ ಅಸಮಾನತೆ ನಿವಾರಣೆಗೂ ಗಮನ ಹರಿಸಲಾಗಿದ್ದು, ರಾಜ್ಯದ ಎಲ್ಲ ಭಾಗಗಳಲ್ಲೂ ಹೂಡಿಕೆ ಆಗುವಂತೆ ನೋಡಿಕೊಳ್ಳಲಾಗುತ್ತಿದೆ” ಎಂದು ಪಾಟೀಲ ವಿವರಿಸಿದ್ದಾರೆ.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ವ್ಯವಸ್ಥಾಪಕ ನಿರ್ದೇಶಕ ಡಾ.ಮಹೇಶ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X