ನೀರಿನ ಬಿಕ್ಕಟ್ಟಿನ ಕುರಿತ ಚರ್ಚೆಗಾಗಿ ದೆಹಲಿ ಗವರ್ನರ್ ಸಮಯ ಕೋರಿದ ಅತಿಶಿ

Date:

Advertisements

ರಾಷ್ಟ್ರ ರಾಜಧಾನಿ ದೆಹಲಿ ಕುಡಿಯುವ ನೀರಿನ ಮೂಲಗಳಲ್ಲಿ ಒಂದಾದ ಮುನಕ್ ಕಾಲುವೆಗೆ ಹರಿಯಾಣ ‘ಅಸಮರ್ಪಕ’ವಾಗಿ ನೀರು ಹರಿಸುತ್ತಿದ್ದು, ದೆಹಲಿಯಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಈ ಬಗ್ಗೆ ಚರ್ಚಿಸಲು ತುರ್ತು ಸಭೆಗೆ ಸಮಯ ಕೋರಿ ದೆಹಲಿ ರಾಜ್ಯ ಜಲ ಸಚಿವೆ ಅತಿಶಿ ಅವರು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರಿಗೆ ಮನವಿ ಮಾಡಿದ್ದಾರೆ.

ನೀರಿನ ಸಮಸ್ಯೆ ಮತ್ತು ಗರ್ವರ್ನರ್‌ರಿಂದ ಸಮಯ ಕೋರಿರುವ ಬಗ್ಗೆ ಅತಿಶಿ ಟ್ವೀಟ್ ಮಾಡಿದ್ದಾರೆ. “ದೆಹಲಿಗೆ ನೀರಿನ ಪೂರೈಕೆಗಾಗಿ ಮುನಕ್ ಕಾಲುವೆಯಿಂದ ದಿನನಿತ್ಯ 1,050 ಕ್ಯೂಸೆಕ್ ನೀರನ್ನು ಪಡೆಯಬೇಕಾಗಿತ್ತು. ಆದರೆ, ಹರಿಣಾಮವು ಕಾಲುವೆಗೆ ಕೇವಲ 840 ಕ್ಯೂಸೆಕ್‌ ನೀರನ್ನು ಹರಿಸುತ್ತಿದೆ” ಎಂದು ಹೇಳಿದ್ದಾರೆ.

“ಹರಿಯಾಣ ಸರ್ಕಾರವು ಮುನಕ್ ಕಾಲುವೆಗೆ ಅಸಮರ್ಪಕವಾಗಿ ನೀರು ಹರಿಸುತ್ತಿರುವ ಬಗ್ಗೆ ತಿಳಿಸಲು ತುರ್ತು ಸಭೆಗೆ ಗವರ್ನರ್‌ ಅವರಲ್ಲಿ ಸಮಯ ಕೋರಿದ್ದೇನೆ” ಎಂದಿದ್ದಾರೆ.

Advertisements

“ಮುನಕ್ ಕಾಲುವೆಯಿಂದ ಸಿಎಲ್‌ಸಿ ಮತ್ತು ಡಿಎಸ್‌ಬಿ ಉಪಕಾಲುವೆಗಳ ಮೂಲಕ ದೆಹಲಿಗೆ 1050 ಕ್ಯೂಸೆಕ್ ನೀರು ಬರಬೇಕಿದೆ. ಆದರೆ, ಕೇವಲ 840 ಕ್ಯೂಸೆಕ್‌ ನೀರು ದೊರೆಯುತ್ತಿದೆ. 7 ನೀರು ಸಂಸ್ಕರಣಾ ಘಟಕಗಳು ಈ ನೀರನ್ನೇ ಅವಲಂಬಿಸಿವೆ. ನೀರಿನ ಪ್ರಮಾಣ ಹೆಚ್ಚಾಗದಿದ್ದರೆ ಒಂದೆರಡು ದಿನಗಳಲ್ಲೇ ದೆಹಲಿಯಾದ್ಯಂತ ನೀರಿನ ಪರಿಸ್ಥಿತಿ ಹದಗೆಡುತ್ತದೆ” ಎಂದು ಅವರು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

 

“ಏರುತ್ತಿರುವ ತಾಪಮಾನದ ನಡುವೆ, ದೆಹಲಿಯು ನೀರಿನ ಕೊರತೆ ಎದುರಿಸುತ್ತಿದೆ. ಗವರ್ನರ್‌ ಅವರು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿದ್ದಾರೆ. ಅವರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಪರಿಹರಿಸಲು ವಿನಂತಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X