ಲೋಕಸಭೆಯಲ್ಲಿ ಭದ್ರತಾಲೋಪ | ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೆಸರಲ್ಲಿ ಪಾಸ್ ಪಡೆದಿದ್ದ ಅಪರಿಚಿತರು

Date:

Advertisements

ಲೋಕಸಭೆಯಲ್ಲಿ ಇಂದು ಬುಧವಾರ ಭಾರೀ ಭದ್ರತಾ ಲೋಪದ ಘಟನೆ ನಡೆದಿದ್ದು, ಸಂಸತ್ತಿನ ಮೇಲೆ ದಾಳಿಯ 22ನೇ ವಾರ್ಷಿಕೋತ್ಸವದಂದು ಇಬ್ಬರು ಒಳನುಸುಳಿ ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಸದನದ ಸುತ್ತಲೂ ಓಡಾಡಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.

‘ಅಶ್ರುವಾಯು(ಟಿಯರ್ ಗ್ಯಾಸ್ ರೀತಿಯ) ಡಬ್ಬಿಗಳನ್ನು ಹೊತ್ತು ನುಸುಳಿದ್ದರು’ ಎಂದು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ. ಕೂಡಲೇ ಸದನವನ್ನು ಮುಂದೂಡಲಾಗಿದೆ.

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಮಾತನಾಡಿ, “ಇಬ್ಬರು ವ್ಯಕ್ತಿಗಳು ಸಾರ್ವಜನಿಕ ಗ್ಯಾಲರಿಯಿಂದ ಲೋಕಸಭೆಯ ಕೊಠಡಿಗೆ ಜಿಗಿದಿದ್ದಾರೆ. ಎರಡನೇ ವ್ಯಕ್ತಿಯು ಸಾರ್ವಜನಿಕ ಗ್ಯಾಲರಿಯಲ್ಲಿ ನೇತಾಡುತ್ತಿದ್ದನು. ಒಂದು ರೀತಿಯ ‘ಅನಿಲ’ ಸಿಂಪಡಿಸುತ್ತಿದ್ದನು, ಅದು ಕಣ್ಣಿನ ಕಿರಿಕಿರಿಗೆ ಕಾರಣವಾಯಿತು” ಎಂದು ಹೇಳಿದ್ದಾರೆ.

Advertisements

ಇಬ್ಬರು ವ್ಯಕ್ತಿಗಳು ಟಿಯರ್ ಗ್ಯಾಸ್ ರೀತಿಯ ವಸ್ತುಗಳನ್ನು ಹೊಡೆದ ಪರಿಣಾಮ ಹೊಗೆ ತುಂಬಿರುವುದಾಗಿ ವರದಿಯಾಗಿದೆ.

ನಾಲ್ವರ ಬಂಧನ

22 ವರ್ಷದ ಉತ್ತರ ಪ್ರದೇಶದ ಲಕ್ನೋ ನಿವಾಸಿ ಸಾಗರ್ ಶರ್ಮಾ ಹಾಗೂ ನೀಲಂ ಕೌರ್ ಎಂಬಾಕೆಯನ್ನು ಬಂಧಿಸಲಾಗಿದೆ. ಇಬ್ಬರು ಲೋಕಸಭೆಯ ಒಳಗೆ ನುಗ್ಗಿದರೆ, ಇನ್ನಿಬ್ಬರು ಲೋಕಸಭೆಯ ಹೊರಗೆ, ‘ನಹೀ ಚಲೇಗಿ ನಹೀ ಚಲೇಗಿ, ತಾನಾಶಾಹಿ ನಹೀ ಚಲೇಗಿ’ ಎಂದು ಘೋಷಣೆ ಕೂಗುತ್ತಿದ್ದರು. ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ನೀಡಿರುವ ಉತ್ತರ ಪ್ರದೇಶದ ಅಮ್ರೋಹ ಸಂಸದ ದಾನಿಶ್ ಅಲಿ, “ದಾಳಿ ನಡೆಸಿದ ಯುವಕರ ಪೈಕಿ ಓರ್ವ ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೆಸರಲ್ಲಿ ಪಾಸ್ ಪಡೆದಿದ್ದರು” ಎಂದು ಮಾಹಿತಿ ನೀಡಿದ್ದಾರೆ.

WhatsApp Image 2023 12 13 at 14.38.38

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X