ಸಿಎಂ ಮನೆ ಮುತ್ತಿಗೆಗೆ ಯತ್ನ | ಬಿಎಸ್‌ವೈ, ವಿಜಯೇಂದ್ರ, ಅಶೋಕ್‌ ಸೇರಿ ಕಾರ್ಯಕರ್ತರ ಸೆರೆ

Date:

Advertisements

ಲೋಕಸಭೆಯಲ್ಲಿ ವಕ್ಪ್‌ ಐತಿಹಾಸಿಕ ಮಸೂದೆಗೆ ಅಂಗೀಕಾರ ಲಭಿಸಿದೆ. ಕಾಂಗ್ರೆಸ್ ಪಕ್ಷ ವಕ್ಫ್ ಕಾಯಿದೆಗೆ ತಿದ್ದುಪಡಿಯನ್ನು ರಾಜ್ಯ, ದೇಶದಲ್ಲಿ ವಿರೋಧಿಸುವುದು ದುರಂತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಗುರುವಾರ ಬಿಜೆಪಿಯ ಅಹೋರಾತ್ರಿ ಧರಣಿ ಮುಂದುವರೆಯಿತು. ಈ ವೇಳೆ ವಿಜಯೇಂದ್ರ ಮಾತನಾಡಿದರು.

“ಕರ್ನಾಟಕದಲ್ಲಿ ಸಾವಿರಾರು ಕೋಟಿ ಮೌಲ್ಯದ ಜಮೀನುಗಳನ್ನು ವಕ್ಫ್ ಬೋರ್ಡ್ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರು, ರಾಜಕಾರಣಿಗಳು ಲೂಟಿ ಮಾಡಿದ್ದಾರೆ. ಇಂಥ ಕಾಂಗ್ರೆಸ್ ಮುಖಂಡರು ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸುತ್ತಿದ್ದಾರೆ. ಹಲವಾರು ದಶಕಗಳಿಂದ ವಕ್ಫ್ ಕಾಯಿದೆ ಬಗ್ಗೆ ದೇಶ- ರಾಜ್ಯದಲ್ಲಿ ಚರ್ಚೆ ನಡೆಯುತ್ತಿತ್ತು. ನಮ್ಮ ರಾಜ್ಯದಲ್ಲಿ ಸಾವಿರ ವರ್ಷಗಳ ಇತಿಹಾಸ ಇರುವ ದೇವಾಲಯಗಳು, ಧಾರ್ಮಿಕ ಸಂಸ್ಥೆಗಳ ಜಮೀನನ್ನು, ರಾಜ್ಯದ ಲಕ್ಷ ಲಕ್ಷ ರೈತರ ಜಮೀನನ್ನು ಕೂಡ ವಕ್ಫ್ ಬೋರ್ಡ್ ಹೆಸರು ಹೇಳಿಕೊಂಡು ಕಿತ್ತುಕೊಳ್ಳುವ ಕೆಲಸ ನಡೆದಿತ್ತು” ಎಂದು ಆರೋಪಿಸಿದರು.

Advertisements

ಬೆಲೆ ಏರಿಕೆಯನ್ನು ಖಂಡಿಸಿ ಧರಣಿ ಸ್ಥಳದಿಂದ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಲು ಕರೆ ನೀಡಿದರು. ಸಿಎಂ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಬೈರತಿ ಬಸವರಾಜ್, ಪ್ರಮುಖರಾದ ಸಿ.ಟಿ.ರವಿ, ಎಸ್.ಆರ್.ವಿಶ್ವನಾಥ್ ಸೇರಿದಂತೆ ನೂರಾರು ಕಾರ್ಯಕರ್ತರನ್ನು ಪೊಲೀಸರು ದಾರಿ ಮಧ್ಯೆ ವಶಕ್ಕೆ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X