ಅತ್ತಿಬೆಲೆ ಪಟಾಕಿ ದುರಂತ | ಉನ್ನತ ಮಟ್ಟದ ತನಿಖೆಗೆ ಆದೇಶಿಸಲು ಕುಮಾರಸ್ವಾಮಿ ಆಗ್ರಹ

Date:

Advertisements

ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿದ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ಸಾವಿಗೆ ಸಂತಾಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಹೆಚ್‌ ಡಿ ಕುಮಾರಸ್ವಾಮಿ, ಘಟನೆ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆಯ ಕುರಿತು ಭಾನುವಾರ ಟ್ವೀಟ್ ಮಾಡಿರುವ ಅವರು, ‘ಬೆಂಕಿ ಅವಘಡದಲ್ಲಿ 14 ಜನರು ಸಾವಿಗೀಡಾಗಿರುವ ಘಟನೆ ಬಗ್ಗೆ ತಿಳಿದು ನನಗೆ ತೀವ್ರ ದಿಗ್ಭ್ರಮೆ ಉಂಟಾಗಿದೆ. ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಬಲಿಯಾಗಿರುವ ಘಟನೆ ನನ್ನ ಮನವನ್ನು ಕಲಕಿದೆ’ ಎಂದು ತಿಳಿಸಿದ್ದಾರೆ.

ಜೀವ ಕಳೆದುಕೊಂಡ ಎಲ್ಲಾ ನತದೃಷ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕುಟುಂಬಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

Advertisements

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಂಭವಿಸಿರುವ ಈ ಘಟನೆ ಅನೇಕ ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ಸುರಕ್ಷತೆ ಬಗ್ಗೆ ಮುನ್ನೆಚ್ಚರಿಕೆ ವಹಿಸದೆ ಇದ್ದಿದ್ದೇ ದುರಂತಕ್ಕೆ ಕಾರಣ ಎಂಬುದರಲ್ಲಿ ಎರಡು ಮಾತಿಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು. ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬದುಕು ಕಳೆದುಕೊಂಡ ಕುಟುಂಬಗಳಿಗೆ ರಾಜ್ಯ ಸರ್ಕಾರ ಆಸರೆಯಾಗಿ ನಿಲ್ಲಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X