ಟ್ರಸ್ಟ್ ಆಸ್ಪತ್ರೆಗಾಗಿ ಭೂಮಿ ಸ್ವಾಧೀನ: ವಿಜಯೇಂದ್ರ ವಿರುದ್ಧ ಆಯನೂರು ಆರೋಪ

Date:

Advertisements

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಭೂಮಿ ಸ್ವಾಧೀನದ ಆರೋಪವನ್ನು ಮಾಡಿದ್ದಾರೆ. ಮಂಗಳವಾರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ದಾಖಲೆಗಳನ್ನು ಕೂಡಾ ಬಿಡುಗಡೆ ಮಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಆಯನೂರು ಮಂಜುನಾಥ್ ಅವರು, “ವಿಜಯೇಂದ್ರ ನಿರ್ದೇಶಕರಾಗಿರುವ ಟ್ರಸ್ಟ್‌ನ ಆಸ್ಪತ್ರೆಗಾಗಿ ಸಂಸದ ಬಿ.ವೈ. ರಾಘವೇಂದ್ರ ಅವರ ಪತ್ನಿಯ ಸಹೋದರನ ಹೆಸರಿನ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ” ಎಂದು ವಿಜಯೇಂದ್ರ ವಿರುದ್ಧ ಆರೋಪಿಸಿದ್ದಾರೆ.

“ಶಿವಮೊಗ್ಗ ತಾಲೂಕಿನ ಸಾಗರದ ಹರಿಗೆ ಗ್ರಾಮದ ಬಳಿ ಇರುವ ಕೈಗಾರಿಕಾ ಪ್ರದೇಶದಿಂದ ಸುಮಾರು ಮೂರು ಕಿ. ಮೀ. ದೂರದಲ್ಲಿ ವಿಜಯೇಂದ್ರ ಅವರು ನಿರ್ದೇಶಕರಾಗಿರುವ ಟ್ರಸ್ಟ್‌ನ ಆಸ್ಪತ್ರೆ ನಿರ್ಮಾಣಕ್ಕಾಗಿ 5.34 ಎಕರೆ ಭೂಮಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವಿಜಯೇಂದ್ರ ಅವರಿಗೆ ಸ್ವಾಧೀನಪಡಿಸಿಕೊಟ್ಟಿದೆ” ಎಂದು ಆಯನೂರು ದೂರಿದ್ದಾರೆ.

Advertisements

ಇದನ್ನು ಓದಿದ್ದೀರಾ? ಮಂಡ್ಯ | ಭೂಸ್ವಾಧೀನವಾಗಿರುವ ಭೂಮಿ ಹಸ್ತಾಂತರಿಸದೇ ವಂಚನೆ; ಭೂರಹಿತರ ಆರೋಪ

“ಈ ಭೂಮಿ ಬಿ.ವೈ. ರಾಘವೇಂದ್ರ ಅವರ ಪತ್ನಿಯ ಸಹೋದರ ಸಂಗಮೇಶ ಪರಪ್ಪ ಗದಗ ಅವರ ಹೆಸರಿನಲ್ಲಿತ್ತು. ಆದರೆ ಅದನ್ನು ಈಗ ಬಿ.ವೈ. ವಿಜಯೇಂದ್ರ ಅವರ ಹೆಸರಿಗೆ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

ಮುಡಾ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಅವರ ಸಹೋದರ ಜಮೀನು ನೀಡಿರುವುದು ಹಗರಣ ಎಂದಾದರೆ ಹರಿಗೆಯಲ್ಲಿ ಕೆಐಎಡಿಬಿಯಿಂದ ಭೂಮಿ ಸ್ವಾಧೀನವೂ ಹಗರಣ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಕೆಐಎಡಿಬಿ ಸ್ವಾಧೀನಪಡಿಸಿಕೊಂಡ ಭೂಮಿಯ ಪಕ್ಕದಲ್ಲೇ ಯಡಿಯೂರಪ್ಪ ಕುಟುಂಬ ಭೂಮಿಯನ್ನು ಖರೀದಿಸಿದೆ. ಅದೇ ರೀತಿ ಸಂಗಮೇಶ ಪರಪ್ಪ ಅವರ ಭೂಮಿಯನ್ನು ಖರೀದಿಸಬಹುದಿತ್ತು. ಆದರೆ ತಮ್ಮ ಕುಟುಂಬದವರ ಭೂಮಿಯನ್ನು ಕೆಐಎಡಿಬಿ ಮೂಲಕ ತಾವೇ ಸ್ವಾಧೀನಪಡಿಸಿಕೊಂಡಿರುವುದು ದೇಶದಲ್ಲಿ ಇದೇ ಮೊದಲು” ಎಂದು ಆಯನೂರು ಲೇವಡಿ ಮಾಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X