ರಾಮಮಂದಿರ ಗರ್ಭಗುಡಿಗೆ ರಾಷ್ಟ್ರಪತಿಗಿಲ್ಲ ಅವಕಾಶ: ಬುಡಕಟ್ಟು ಸಮುದಾಯದ ಹಿನ್ನೆಲೆ ಸಮಸ್ಯೆಯೇ? ನೆಟ್ಟಿಗರ ಪ್ರಶ್ನೆ

Date:

Advertisements

2024ರ ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ರಾಮಮಂದಿರ ಉದ್ಘಾಟನೆ ನಡೆಯಲಿದೆ. ಉದ್ಘಾಟನೆಯ ದಿನ ಬಾಲ ರಾಮ(ರಾಮಲಲ್ಲಾ)ನನ್ನು ಪೂಜೆ, ಮಂತ್ರ, ವಿಧಿವಿಧಾನಗಳ ಮೂಲಕ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರಾಣ ಪ್ರತಿಷ್ಠಾಪನೆ ನೆರವೇರಲಿದೆ.

ಈ ಕುರಿತಂತೆ ಹೊಸ ಸುದ್ದಿಯೊಂದು ಹೊರಬಿದ್ದಿದ್ದು, ಉದ್ಘಾಟನೆ ದಿನದಂದು ಗರ್ಭಗುಡಿಯೊಳಗೆ ಕೇವಲ ಐದು ಮಂದಿಗೆ ಮಾತ್ರ ಪ್ರವೇಶ ಇರಲಿದೆ ಎಂದು ವರದಿಯಾಗಿದೆ.

ರಾಮಮಂದಿರದಲ್ಲಿ ನಡೆಯುವ ರಾಮಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಐವರು ಭಾಗವಹಿಸಲಿದ್ದಾರೆ. ಆ ದಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಮ್ ಲಲ್ಲಾನ ವಿಗ್ರಹದ ಕಣ್ಣಿಗೆ ಕಟ್ಟಿರುವ ಪಟ್ಟಿಯನ್ನು ತೆಗೆಯುವ ಸಮಯದಲ್ಲಿ ಗರ್ಭಗುಡಿಯಲ್ಲಿ ಮೋದಿ ಜೊತೆ ನಾಲ್ಕು ಮಂದಿ ಗಣ್ಯರು ಉಪಸ್ಥಿತರಿರುತ್ತಾರೆ ಎಂದು ವರದಿಗಳು ಬಿತ್ತರವಾಗುತ್ತಿದೆ.

Advertisements

ಪ್ರಧಾನಿ ಜೊತೆಗೆ ಉತ್ತರ ಪ್ರದೇಶದ ಗವರ್ನರ್ ಆನಂದಿ ಬೆನ್ ಪಟೇಲ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ರಾಮಮಂದಿರದ ಮುಖ್ಯ ಅರ್ಚಕ ಸತ್ಯೇಂದ್ರ ಅವರು ಮಾತ್ರ ಉಪಸ್ಥಿತರಿರುತ್ತಾರೆ ಎಂದು ವರದಿಯಾಗಿದೆ. ಅಲ್ಲದೇ, ಈ ಸಂದರ್ಭದಲ್ಲಿ ಗರ್ಭಗುಡಿಯನ್ನು ಪರದೆಯಿಂದ ಮುಚ್ಚಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಪರ್ಯಾಸ ಏನೆಂದರೆ, ದೇಶದ ಮೊದಲ ಪೌರ ಎಂಬ ಗೌರವ ಹೊಂದಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪಟ್ಟಿಯಿಂದ ಬಿಟ್ಟಿರುವುದು ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಇದು ಈಗ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೂ ಕೂಡ ಕಾರಣವಾಗಿದೆ.

2023ರ ಮೇ 28ರಂದು ಉದ್ಘಾಟನೆಗೊಂಡಿದ್ದ ಸಂಸತ್ತಿನ ನೂತನ ಕಟ್ಟಡ ‘ಸೆಂಟ್ರಲ್ ವಿಸ್ಟಾ’ದ ಉದ್ಘಾಟನೆಯಿಂದಲೂ ಕೂಡ ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಹೊರಗಿಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿದ್ದ ವಿಪಕ್ಷಗಳು, ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ.

ರಾಮಮಂದಿರದ ಗರ್ಭಗುಡಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರವೇಶಕ್ಕೆ ಅವಕಾಶ ಇಲ್ಲದಿರುವುದರಿಂದ ಈಗ ಅದೇ ರೀತಿಯಲ್ಲಿ ಮತ್ತೊಂದು ವಿವಾದ ಸೃಷ್ಟಿಯಾಗಿದೆ.

ಈ ಬಗ್ಗೆ ಪ್ರಶ್ನಿಸಿರುವ ನೆಟ್ಟಿಗರು, “ಮತ್ತೆ ಅವರು ಅಧ್ಯಕ್ಷೆ ದ್ರೌಪದಿ ಮುರ್ಮು ಅವರನ್ನು ಹೊರಗಿಡಲಾಗಿದೆ. ಆಕೆ ಬುಡಕಟ್ಟು ಸಮುದಾಯದಿಂದ ಬಂದವರು ಎಂಬ ಕಾರಣಕ್ಕೆ ಈ ರೀತಿ ನಡೆದುಕೊಳ್ಳಲಾಗುತ್ತಿದೆಯೇ?” ಎಂದು ಪ್ರಶ್ನಿಸತೊಡಗಿದ್ದಾರೆ.

ಈ ನಡುವೆ ಕೆಲವರು, “ಜ.22ರಂದು ಗರ್ಭಗುಡಿಯೊಳಗೆ ಪ್ರವೇಶಿಸುವ ಐವರಲ್ಲಿ ಆರ್‍‌ಎಸ್‌ಎಸ್‌ನ ಮುಖ್ಯಸ್ಥ ಮೋಹನ್ ಭಾಗವತ್ ಅವರು ಕೂಡ ಇರಲಿದ್ದಾರೆ ಎಂಬ ಸುದ್ದಿ ಓದಿದೆ. ಒಂದು ವೇಳೆ ಅದು ನಿಜವೇ ಆಗಿದ್ದರೆ, ರಾಷ್ಟ್ರಪತಿಗಿಂತಲೂ ದೊಡ್ಡ ಹುದ್ದೆಯಲ್ಲಿ ಅವರಿದ್ದಾರೆಯೇ? ಮಹಿಳೆ ಎಂಬ ಕಾರಣಕ್ಕೋ ಅಥವಾ ಬುಡಕಟ್ಟು ಸಮುದಾಯದಿಂದ ಬಂದರು ಎಂಬ ಕಾರಣಕ್ಕೋ? ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಉತ್ತರಿಸಲಿ” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X