ವರುಣಾದಿಂದ ಸ್ಪರ್ಧೆ ಹೈ ಕಮಾಂಡ್ ನಿರ್ಧರಿಸುತ್ತದೆ: ಬಿ ವೈ ವಿಜಯೇಂದ್ರ

Date:

  • ವರುಣಾದಿಂದ ಸ್ಪರ್ಧಿಸಲು ಅವಕಾಶ ಕೇಳಿದ್ದೇನೆ ಎಂದ ಸಿದ್ದರಾಮಯ್ಯ
  • ಮಹತ್ವ ಪಡೆದುಕೊಂಡ ವಿಜಯೇಂದ್ರ ಚುನಾವಣಾ ಸ್ಪರ್ಧೆಯ ವಿಚಾರ

ನಾನು ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದರ ಬಗ್ಗೆ ನಮ್ಮ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಶುಕ್ರವಾರ ತಮ್ಮ ನಿವಾಸದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗಿನ ಉಪಾಹಾರ ಕೂಟದ ಬಳಿಕ ವಿಜಯೇಂದ್ರ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಅಮಿತ್ ಶಾ ಹಾಗೂ ಯಡಿಯೂರಪ್ಪ ವರುಣಾ ಕ್ಷೇತ್ರದಲ್ಲಿನ ಸ್ಪರ್ಧೆ ವಿಚಾರದ ಬಗ್ಗೆ ಮಾತುಕತೆ ನಡೆಸಿದರು. ಹಾಗೆಯೇ ಪಕ್ಷ ಪ್ರಮುಖರೊಂದಿಗೆ ವಿಧಾನಸಭೆ ಚುನಾವಣೆ ಕಾರ್ಯತಂತ್ರ, ಕ್ಷೇತ್ರಗಳಲ್ಲಿನ ಹಾಲಿ ಪರಿಸ್ಥಿತಿ ಹಾಗೂ ಅಭ್ಯರ್ಥಿಗಳ ಆಯ್ಕೆ ಬಗೆಗೂ ಗಂಭೀರ ಚರ್ಚೆ ನಡೆದಿರುವುದಾಗಿ ತಿಳಿಸಿದರು.

ಶಿಕಾರಿಪುರದ ಜನ ನನ್ನ ಬಗ್ಗೆ ಒಲವು ತೋರಿಸಿದ ಕಾರಣ ಆ ಕ್ಷೇತ್ರದಲ್ಲಿ ನಾನು ಪ್ರಚಾರ ಮಾಡುತ್ತಿದ್ದೇನೆ. ನನ್ನ ಸ್ಪರ್ಧೆ ಎಲ್ಲಿಂದ ಎಂಬುವುದನ್ನು ನಾನೇ ನಿರ್ಧರಿಸಲು ಆಗುವುದಿಲ್ಲ. ನಮ್ಮ ಪಕ್ಷದ ಹೈಕಮಾಂಡ್ ಅದನ್ನು ನಿರ್ಧರಿಸುತ್ತದೆ ಎಂದು ವಿಜಯೇಂದ್ರ ಇದೇ ವೇಳೆ ತಿಳಿಸಿದರು.

ಅಮಿತ್ ಶಾ ತಮ್ಮ ಬೆನ್ನು ತಟ್ಟಿದ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಬೆನ್ನು ತಟ್ಟಿದ ಸದ್ದು ಯಾರು ಯಾರಿಗೆ ಹೇಗೆ ಕೇಳಿಸಿದೆಯೋ ಗೊತ್ತಿಲ್ಲ. ಆದರೆ ಅಮಿತ್ ಶಾ, ಸಂಘಟನೆ ಹೇಗೆ ನಡೆಯುತ್ತಿದೆ, ಮೋರ್ಚಾ ಸಮಾವೇಶಗಳನ್ನು ಎಷ್ಟು ಮಾಡಿದ್ದೀಯಾ ನೀನು, ಖುದ್ದಾಗಿ ಎಷ್ಟು ಜಿಲ್ಲೆಗಳಿಗೆ ಪ್ರವಾಸ ಹೋಗಿದ್ದೀಯಾ ಎಂದು ಕೇಳುತ್ತಾ ಬೆನ್ನು ತಟ್ಟಿದರು ಎಂದು ಸ್ಪಷ್ಟನೆ ನೀಡಿದರು.

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಕ್ಷೇತ್ರ ಬದಲಾವಣೆ ವಿಚಾರದಲ್ಲಿ ಇಂದು ಹೊಸ ಇಂಗಿತ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ವರುಣಾದಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಹೈ ಕಮಾಂಡ್‌ಗೆ ಕೇಳಿದ್ದೇನೆ ಎಂದಿರುವ ವಿಚಾರವೀಗ ರಾಜಕೀಯ ಲೆಕ್ಕಾಚಾರವನ್ನೇ ಬದಲು ಮಾಡಿದೆ.

ಹೀಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರ ವಿಜಯೇಂದ್ರ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸ್ಪರ್ಧಾಕ್ಷೇತ್ರಗಳ ಭವಿಷ್ಯ ನಿರ್ಧರಿಸಲಿವೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಹಾಧರಣಿ’ಗೆ ಸಿಎಂ ಸಿದ್ದರಾಮಯ್ಯ ಸ್ಪಂದನೆ: ಡಿ.19ರಂದು ಮಹತ್ವದ ಸಭೆ

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕಳೆದ ಮೂರು ದಿನಗಳಿಂದ ಸಂಯುಕ್ತ ಹೋರಾಟ ಸಮಿತಿಯ...

ದೇಶದಲ್ಲಿ ‘ಬ್ರ್ಯಾಂಡ್‌ ಬೆಂಗಳೂರು’ ನಂಬರ್ ಒನ್ ಆಗಿಸಬೇಕಿದೆ: ಸಿದ್ದರಾಮಯ್ಯ

'ದೇಶ ಸುಸ್ಥಿರವಾಗಿ ಬೆಳೆಯಬೇಕಾದರೆ ನಗರ-ಗ್ರಾಮೀಣ ಸುಸ್ಥಿರ ಬೆಳವಣಿಗೆ ಕಾಣಬೇಕು' 'ರಾಜ್ಯದ...

‘ಫ್ರೀಡಂ ಪಾರ್ಕ್’ನಿಂದ ನಮಗೆ ‘ಫ್ರೀಡಂ’ ಕೊಡಿ: ಸಿಎಂ ಸಿದ್ದರಾಮಯ್ಯಗೆ ‘ಮಹಾಧರಣಿ’ ಆಗ್ರಹ

ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ಪ್ರತಿಯೊಂದು ಪ್ರತಿಭಟನೆಗಳು ಕೇವಲ 'ಫ್ರೀಡಂ ಪಾರ್ಕ್‌'ಗೆ ಸೀಮಿತವಾಗಿದ್ದು,...

ಬೆಂಗಳೂರು | 20 ದಿನದ ಹಸುಗೂಸು ಮಾರಾಟ; ಸಿಸಿಬಿ ಪೊಲೀಸರ ಕಾರ್ಯಾಚರಣೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಹಸುಗೂಸು ಮಾರಾಟ ದಂಧೆ ಮತ್ತೆ ಬೆಳಕಿಗೆ...