- ಸಿದ್ದರಾಮ್ಮಯ್ಯ ಮುಖ್ಯಮಂತ್ರಿ ಮಾಡಲು ಬೆಂಬಲ ಘೋಷಣೆ
- ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ, ಅಧಿಕಾರಕ್ಕೆ ತರುವ ಪ್ರಯತ್ನ
ಗುರಮಿಠಕಲ್ ವಿಧಾನಸಭಾ ಕ್ಷೇತ್ರದ ಕುರುಬ ಸಮುದಾಯದ ಕಾಂಗ್ರೆಸ್ ಅಭ್ಯರ್ಥಿ ಬಾಬು ರಾವ್ ಚಿಂಚನಸೂರ್ ಅವರನ್ನು ಸಂಪೂರ್ಣವಾಗಿ ಬೆಂಬಲಿಸುವುದಾಗಿ ಘೋಷಣೆ ಮಾಡಿದೆ.
ಯಾದಗಿರಿ ಜಿಲ್ಲೆ ಗುರಮಿಠಕಲ್ ವಿಧಾನಸಭಾ ಕ್ಷೇತ್ರದ ಗೋಂದಡಿಗಿ ಗ್ರಾಮದಲ್ಲಿ ಕುರುಬ ಸಮುದಾಯದ ಮುಖಂಡರು ಜನ ಜಾಗೃತ ಸಭೆ ಏರ್ಪಡಿಸಿದ್ದರು.
“ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಬೇಕೆಂದರೆ ಮೊದಲು ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಬೇಕು. ಇತರೆ ಪಕ್ಷಗಳಿಗೆ ಮತ್ತು ಕ್ಷೇತ್ರದ ಜನರಿಗೆ ಕುರುಬ ಸಮಾಜ ಕೂಡ ಕಾಂಗ್ರೆಸ್ ಜೊತೆಗೆ ಇದೆ ಅನ್ನೋದನ್ನ ತಿಳಿಸಬೇಕು. ಹೀಗಾಗಿ ಸಕ್ರಿಯ ರಾಜಕಾರಣದಲ್ಲಿ ಕಾಂಗ್ರೆಸ್ ನಲ್ಲಿ ನಮ್ಮ ಕುರುಬ ಸಮಾಜದ ನಾಯಕರು ಇರಬೇಕು” ಎಂದು ಮುಖಂಡರು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? : ಬ್ಯಾಟರಾಯನಪುರ ಕ್ಷೇತ್ರ | ಕಾಂಗ್ರೆಸ್ನ ಭರವಸೆ ನಾಯಕ ಕೃಷ್ಣ ಬೈರೇಗೌಡ ಗೆಲುವಿಗೆ ನೀರೆರೆದ ಬಿಜೆಪಿ ಬಂಡಾಯ
“ಇದನ್ನು ಬಿಟ್ಟು ಸಿದ್ದರಾಮಯ್ಯ ಮುಖ್ಯಮಂತ್ರಿ ಮಾಡಬೇಕು ಅಂದರೆ, ನಾವುಗಳು ಮನೆಯಲ್ಲಿ ಕೂಡದೆ ನಮ್ಮ ಸಮಾಜ ಜನರನ್ನು ಒಗ್ಗೂಡಿಸಬೇಕು. ನಾವು ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಗೆಲ್ಲಿಸಿದರೆ, ರಾಜ್ಯದಲ್ಲಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಿದಂತೆ. ಈ ಸಲ ಎಲ್ಲರೂ ಸೇರಿ ಕಾಂಗ್ರೆಸ್ ಪಕ್ಷ ಬಲಪಡಿಸಬೇಕು, ಬಾಬುರಾವ ಚಿಂಚನಸೂರ್ ಅವರನ್ನು ಗೆಲ್ಲಿಸಬೇಕು” ಎಂದು ಘೋಷಿಸಿದರು.