ಯಾದಗಿರಿ | ಬಾಬುರಾವ್ ಚಿಂಚನಸೂರಗೆ ಬೆಂಬಲ ಘೋಷಿಸಿದ ಕುರುಬ ಸಮುದಾಯ

Date:

  • ಸಿದ್ದರಾಮ್ಮಯ್ಯ ಮುಖ್ಯಮಂತ್ರಿ ಮಾಡಲು ಬೆಂಬಲ ಘೋಷಣೆ
  • ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಿ, ಅಧಿಕಾರಕ್ಕೆ ತರುವ ಪ್ರಯತ್ನ

ಗುರಮಿಠಕಲ್ ವಿಧಾನಸಭಾ ಕ್ಷೇತ್ರದ ಕುರುಬ ಸಮುದಾಯದ ಕಾಂಗ್ರೆಸ್‌ ಅಭ್ಯರ್ಥಿ ಬಾಬು ರಾವ್‌ ಚಿಂಚನಸೂರ್‌ ಅವರನ್ನು ಸಂಪೂರ್ಣವಾಗಿ ಬೆಂಬಲಿಸುವುದಾಗಿ ಘೋಷಣೆ ಮಾಡಿದೆ.

ಯಾದಗಿರಿ ಜಿಲ್ಲೆ ಗುರಮಿಠಕಲ್ ವಿಧಾನಸಭಾ ಕ್ಷೇತ್ರದ ಗೋಂದಡಿಗಿ ಗ್ರಾಮದಲ್ಲಿ ಕುರುಬ ಸಮುದಾಯದ ಮುಖಂಡರು ಜನ ಜಾಗೃತ ಸಭೆ ಏರ್ಪಡಿಸಿದ್ದರು.

“ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಬೇಕೆಂದರೆ ಮೊದಲು ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಬೇಕು. ಇತರೆ ಪಕ್ಷಗಳಿಗೆ ಮತ್ತು ಕ್ಷೇತ್ರದ ಜನರಿಗೆ ಕುರುಬ ಸಮಾಜ ಕೂಡ ಕಾಂಗ್ರೆಸ್ ಜೊತೆಗೆ ಇದೆ ಅನ್ನೋದನ್ನ ತಿಳಿಸಬೇಕು. ಹೀಗಾಗಿ ಸಕ್ರಿಯ ರಾಜಕಾರಣದಲ್ಲಿ ಕಾಂಗ್ರೆಸ್ ನಲ್ಲಿ ನಮ್ಮ ಕುರುಬ ಸಮಾಜದ ನಾಯಕರು ಇರಬೇಕು” ಎಂದು ಮುಖಂಡರು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? : ಬ್ಯಾಟರಾಯನಪುರ ಕ್ಷೇತ್ರ | ಕಾಂಗ್ರೆಸ್‌ನ ಭರವಸೆ ನಾಯಕ ಕೃಷ್ಣ ಬೈರೇಗೌಡ ಗೆಲುವಿಗೆ ನೀರೆರೆದ ಬಿಜೆಪಿ ಬಂಡಾಯ

“ಇದನ್ನು ಬಿಟ್ಟು ಸಿದ್ದರಾಮಯ್ಯ ಮುಖ್ಯಮಂತ್ರಿ ಮಾಡಬೇಕು ಅಂದರೆ, ನಾವುಗಳು ಮನೆಯಲ್ಲಿ ಕೂಡದೆ ನಮ್ಮ ಸಮಾಜ ಜನರನ್ನು ಒಗ್ಗೂಡಿಸಬೇಕು. ನಾವು ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಗೆಲ್ಲಿಸಿದರೆ, ರಾಜ್ಯದಲ್ಲಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಿದಂತೆ. ಈ ಸಲ ಎಲ್ಲರೂ ಸೇರಿ ಕಾಂಗ್ರೆಸ್ ಪಕ್ಷ ಬಲಪಡಿಸಬೇಕು, ಬಾಬುರಾವ ಚಿಂಚನಸೂರ್ ಅವರನ್ನು ಗೆಲ್ಲಿಸಬೇಕು” ಎಂದು ಘೋಷಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಜಾಬ್‌| ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಲೋಕಸಭೆ ಚುನಾವಣೆಗೆ ಸ್ಪರ್ಧೆ

ಪ್ರಸ್ತುತ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅಸ್ಸಾಂನ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್,...

ಕರಗ ಮಹೋತ್ಸವ: ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ; ಓರ್ವ ಸಾವು

ಕಳೆದ ಒಂದು ವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ...

Fact Check | ಸುಳ್ಳು ಹೇಳಿದ ಪ್ರಧಾನಿ ಮೋದಿ; ಆಂಧ್ರದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಟ್ಟಿಲ್ಲ

''ಆಂಧ್ರಪ್ರದೇಶದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಸರ್ಕಾರ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿಮೆ...

ರಾಯಚೂರು | ಕಾಂಗ್ರೆಸ್ ಸರ್ಕಾರ ಮಹಿಳೆಯರ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ: ಶರಣಮ್ಮ ಕಾಮರೆಡ್ಡಿಬಸ

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಮಹಿಳೆಯರ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ...