ಬಾಗಲಕೋಟೆ | ಟಿಪ್ಪು ಕುರಿತು ಪ್ರಚೋದನಾಕಾರಿ ಭಾಷಣ; ಯತ್ನಾಳ್ ವಿರುದ್ಧ ಎಫ್‌ಐಆರ್

Date:

Advertisements

ಮೈಸೂರು ಹುಲಿ ಎಂದೇ ಹೆಸರಾಗಿರುವ ಟಿಪ್ಪು ಸುಲ್ತಾನ್ ವಿರುದ್ಧ ಅಶ್ಲೀಲ ಪದಗಳಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುರುವಾರ, ಮುಧೋಳದಲ್ಲಿ ನಡೆದ ಗಣೇಶ ವಿಸರ್ಜನಾ ಕಾರ್ಯಕ್ರಮದಲ್ಲಿ ಯತ್ನಾಳ್ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಯತ್ನಾಳ್, “ನೀವು ಇದನ್ನು ನಿಮ್ಮ ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಬಹುದು. ಟಿಪ್ಪು ಸುಲ್ತಾನ್ ಹರಂಖೋರ್ ಮತ್ತು ಬಿಟಾರ್ಡ್, ಔರಂಗಜೇಬ್ ಹರಂಖೋರ್ ಮತ್ತು ಬಿತಾರ್ಡ್. ಟಿಪ್ಪು ಸುಲ್ತಾನ್ ಲಕ್ಷಾಂತರ ಹಿಂದುಗಳನ್ನು ಕೊಂದ. ನನ್ನ ವಿರುದ್ಧ ನಿಮಗೆ ಬೇಕಾದಷ್ಟು ಎಫ್‌ಐಆರ್‌ಗಳನ್ನು ದಾಖಲಿಸಿ. ಈಗಾಗಲೇ ನನ್ನ ವಿರುದ್ಧ 36-37 ಎಫ್‌ಐಆರ್‌ಗಳು ದಾಖಲಾಗಿವೆ. ಮುಧೋಳದಲ್ಲಿ ಇನ್ನೂ ನಾಲ್ಕೈದು ಎಫ್‌ಐಆರ್‌ಗಳನ್ನು ದಾಖಲಿಸಹುದು” ಎಂದು ಪ್ರಚೋದನಾರಿ ಮತ್ತು ಕೋಮುದ್ವೇಷದ ಹೇಳಿಕೆ ನೀಡಿದ್ದಾರೆ.

ಯತ್ನಾಳ್ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದು, ಐಪಿಸಿ ಸೆಕ್ಷನ್ 264/24, 16(1)a, 353(2)BNS ಅಡಿ ಎಫ್​ಐಆರ್ ದಾಖಲಿಸಿದ್ದಾರೆ.

Advertisements

“ಗಣೇಶ ವಿಸರ್ಜನೆ ವೇಳೆ ಯತ್ನಾಳ್ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. ಅವರ ವಿರುದ್ಧ ಸು ಮೊಟೊ ಪ್ರಕರಣ ದಾಖಲಿಸಿದ್ದೇವೆ. ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂಧು ಬಾಗಲಕೋಟೆ ಎಸ್‌ಪಿ ಅಮರನಾಥರೆಡ್ಡಿ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X