ಬೆಂಗಳೂರು | ಮಾಜಿ ಸಿಎಂ ಎಚ್‌ಡಿಕೆ ಆಸ್ಪತ್ರೆಗೆ ದಾಖಲು

Date:

Advertisements

ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು (ಬುಧವಾರ) ಅವರು ಕೋಲಾರ ಜಿಲ್ಲೆಯಲ್ಲಿ ಶ್ರೀನಿವಾಸಪಪುರಕ್ಕೆ ಭೇಟಿ ನೀಡುವುದಾಗಿ ಹೇಳಿದ್ದರು. ಆದರೆ, ಮಂಗಳವಾರ ರಾತ್ರಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶ್ರೀನಿವಾರಪುರ ತಾಲೂಕಿನಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ವೇಳೆ ಅಧಿಕಾರಿಗಳು ರೈತರ ಬೆಳೆ ನಾಶಪಡಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಹೀಗಾಗಿ, ಸ್ಥಳಕ್ಕೆ ಭೇಟಿ ನೀಡಿ, ರೈತರು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲು ಕುಮಾರಸ್ವಾಮಿ ಯೋಜಿಸಿದ್ದರು ಎಂದು ಹೇಳಲಾಗಿದೆ.

Advertisements

ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ, ಚಿಂತಗುಂಡ, ಕೇತಗಾನಹಳ್ಳಿಗಳಲ್ಲಿ ಭೂ ಒತ್ತುವರಿಯನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ನ್ಯಾಯಾಲಯ ಅನುಮತಿ ನೀಡಿತ್ತು. ಹೀಗಾಗಿ, ಕಾರ್ಯಾಚರಣೆ ಆರಂಭಿಸಿದ್ದ ಅಧಿಕಾರಿಗಳು ಸುಮಾರು 560 ಎಕರೆ ಒತ್ತವರಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಕಾರ್ಯಾಚರಣೆ ವೇಳೆ ರೈತರು ಬೆಳೆಸಿದ್ದ ಮಾವಿನ ಮರಗಳು, ತರಕಾರಿ ಬೆಳೆ ಹಾಗೂ ಕೋಳಿ ಫಾರಂಗಳನ್ನು ನಾಶ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X