ನಾವು ಬಿಡುಗಡೆ ಮಾಡಿರುವ 650 ಕೋಟಿ ಇಟ್ಟುಕೊಂಡು ಡಿಕೆ ವಿಷಯ ಡೈವರ್ಟ್ ಮಾಡ್ತಿದಾರೆ: ಬೊಮ್ಮಾಯಿ ಆರೋಪ

Date:

Advertisements
  • ಸರ್ಕಾರದ ಭ್ರಷ್ಟಾಚಾರಗಳ ವಿರುದ್ದ ಕಾನೂನಾತ್ಮಕ ಹೋರಾಟ
  • ಮಾರ್ಚ್‌ನಲ್ಲಿ ನಾವು ಹಣ ಬಿಡುಗಡೆ ಮಾಡಿದ್ದೇವೆ, ಸುಳ್ಳು ಹೇಳಿಲ್ಲ

ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಷಯ ಡೈವರ್ಟ್ ಮಾಡುತ್ತಿದ್ದಾರೆ. ನಮ್ಮ ಕಾಲದಲ್ಲಿ ಬಿಡುಗಡೆಯಾಗಿರುವ 650 ಕೋಟಿ ರೂ. ಯಾಕೆ ಇಟ್ಟುಕೊಂಡಿದ್ದಾರೆ. ತನಿಖೆ ಮಾಡುತ್ತೇವೆ ಅಂತ ಹೇಳುತ್ತಿದ್ದಾರೆ. ಇದು ಅನುಮಾನಕ್ಕೆ ಕಾರಣವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಮ್ಮ ಕಾಲದಲ್ಲಿ ಬಿಡುಗಡೆಯಾಗುರುವ 650 ಕೋಟಿ ರೂ.ಗಳನ್ನು ಡಿಸಿಎಂ ಡಿಕೆ ಶಿವಕುಮಾರ್ ಯಾಕೆ ಇಟ್ಟುಕೊಂಡಿದ್ದಾರೆ. ತನಿಖೆ ಮಾಡುತ್ತೇವೆ ಅಂತ ಹೇಳಿ ‍ಹೆದರಿಸುತ್ತಿದ್ದಾರೆ. ಇದು ಅನುಮಾನಕ್ಕೆ ಕಾರಣವಾಗಿದೆ ಎಂದರು.

ಕಾಂಟ್ರಾಕ್ಟರ್ ಕಡೆಯವರೇ ಆಣೆ ಪ್ರಮಾಣ ಮಾಡುವಂತೆ ಹೇಳಿದ್ದಾರೆ‌. ಅದನ್ನು ವಿಷಯಾಂತರ ಮಾಡುವ ಬದಲು, ಸರ್ಕಾರ ಗುತ್ತಿಗೆದಾರರ ಹಣ ಬಿಡುಗಡೆ ಮಾಡಲಿ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಸಚಿವರಿಗೆ ಕ್ಲೀನ್ ಚಿಟ್ ನೀಡಿದ್ದಾರೆ. ನಿನ್ನೆ ಶಾಂಗ್ರಿಲಾದಲ್ಲಿ ಕಮಿಷನ್ ಮಾತುಕತೆ ನಡೆಯುತ್ತಿದೆ ಅಂತ ಹೇಳಿದ್ದರು. ಅವರ ಮೇಲೆ ಏನು ಒತ್ತಡ ಇದೆಯೋ ಗೊತ್ತಿಲ್ಲ. ಈಗ ಯಾರೂ ಕಮಿಷನ್ ಕೇಳಿಲ್ಲ ಅಂತ ಹೇಳುತ್ತಿದ್ದಾರೆ ಎಂದು ತಿಳಿಸಿದರು.

Advertisements

ನಾವು ಮಾರ್ಚ್‌ನಲ್ಲಿ ಹಣ ಬಿಡುಗಡೆ ಮಾಡಿದ್ದೇವೆ. ನಾವೇನು ಸುಳ್ಳು ಹೇಳಬೇಕಿಲ್ಲ. ಅವರು ಹಣ ಬಿಡುಗಡೆ ಮಾಡದ ಕಾರಣ ಈಗ ಗುತ್ತಿಗೆದಾರರು ಸಿಎಂ, ಡಿಸಿಎಂ, ರಾಜ್ಯಪಾಲರ ಬಳಿ ಓಡಾಡುತ್ತಿದ್ದಾರೆ. ಈಗ ಬಿಬಿಎಂಪಿಯಲ್ಲಿ ತೆರಿಗೆ ಸಂಗ್ರಹ ಮಾಡಿದ್ದಾರೆ. ಅದರಲ್ಲಿ ಗುತ್ತಿಗೆದಾರರ ಹಣ ಕೊಡಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರ ಸುಡದಿರಲಿ ಬಿಲ್ ಬಾಕಿ ಬೆಂಕಿ ಕಿಡಿ

ರಾಹುಲ್‌ ಗಾಂಧಿಗೆ ಮನಸಿಲ್ಲ

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಲ್ಲಿ ಮಧ್ಯ ಪ್ರವೇಶಿಸಲು ಮನಸಿಲ್ಲ‌. ಎಟಿಎಂ ಅಂತ ಏನು ಹೆಸರಿದೆಯೋ ಅದು ಸತ್ಯವಾಗಿರುವುದರಿಂದ ಅವರು ರಾಜ್ಯ ಸರ್ಕಾರದ ಮುಲಾಜಿನಲ್ಲಿದ್ದಾರೆ. ಹೀಗಾಗಿ ಅವರು ಇಲ್ಲಿ ಮಧ್ಯಪ್ರವೇಶ ಮಾಡಲು ಬರುತ್ತಿಲ್ಲ” ಎಂದು ಕಿಡಿಕಾರಿದರು.

“ರಾಜ್ಯ ಸರ್ಕಾರ ಜನರಿಗೆ ಬೇಕಾಗಿರುವ ಕಾಮಗಾರಿ ಮಾಡದಿದ್ದರೆ ಬ್ರ್ಯಾಂಡ್ ಬೆಂಗಳೂರು ಯೋಜನೆ ಯಶಸ್ವಿಯಾಗುವುದಿಲ್ಲ. ನಮ್ಮ ಅವಧಿಗೂ ಹಿಂದಿನಿಂದಲೂ ಬಾಕಿ ಉಳಿದಿದೆ‌. ನಾವು ಹಿರಿತನದ ಆಧಾರದಲ್ಲಿ ಬಿಲ್ ಪಾವತಿ ಮಾಡಲು ನಿಯಮ ಮಾಡಿದ್ದರಿಂದ ವ್ಯವಸ್ಥಿತವಾಗಿ ಹಣ ಬಿಡುಗಡೆಯಾಗುತ್ತಿತ್ತು. ಈ ಸರ್ಕಾರ ಇಲ್ಲದ ಸಬೂಬು ಹೇಳದೇ ಗುತ್ತಿಗೆದಾರರ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ, ರಾಜ್ಯ ಸರ್ಕಾರದ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X