ಇಂದು ಬೊಮ್ಮಾಯಿ, ಅಂದು ಯಡಿಯೂರಪ್ಪ; ಆತಂಕ ಮೂಡಿಸಿದ ಹೆಲಿಕಾಪ್ಟರ್ ಹಾರಾಟ…!

Date:

Advertisements
  • ಹಾರಿದ ಕೆಲಕ್ಷಣಗಳಲ್ಲೇ ಲ್ಯಾಂಡ್ ಆದ ಬೊಮ್ಮಾಯಿ ಹೆಲಿಕಾಪ್ಟರ್
  • ಚಿಕ್ಕಬಳ್ಳಾಪುರದಿಂದ ರಾಮನಗರಕ್ಕೆ ಹೊರಟಿದ್ದ ಮುಖ್ಯಮಂತ್ರಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಹೆಲಿಕಾಪ್ಟರ್ ಪ್ರಯಾಣ ಕೆಲಕಾಲ ಗೊಂದಲಕ್ಕೀಡು ಮಾಡಿದ ಸನ್ನಿವೇಶ ಚಿಕ್ಕಬಳ್ಳಾಪುರದಲ್ಲಿ ಇಂದು ನಡೆದಿದೆ.

ಚಿಕ್ಕಬಳ್ಳಾಪುರದ ಎಸ್ಜೆಸಿಐಟಿ ಹೆಲಿಪ್ಯಾಡ್‌ನಿಂದ ಬೊಮ್ಮಾಯಿಯವರು ರಾಮನಗರಕ್ಕೆ ಹೊರಟಿದ್ದರು. ಅವರು ಪ್ರಯಾಣಿಸುತ್ತಿದ್ದ cಚಾಪರ್ ಟೇಕ್ ಆಫ್ ಆಗಿ ಮತ್ತೆ ಲ್ಯಾಂಡ್ ಆಗಿ ಕೆಲಕಾಲ ಆತಂಕಕ್ಕೆ ಎಡೆಮಾಡಿತ್ತು.

ಹೆಲಿಕಾಪ್ಟರ್ ಲ್ಯಾಂಡಿಂಗ್ ನೋಡಿ ಆತಂಕಗೊಂಡ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಅಷ್ಟರಲ್ಲಾಗಲೇ ಚಾಪರ್‌ ಮರಳಿ ಟೇಕ್ ಆಫ್ ಆಗಿ ರಾಮನಗರದತ್ತ ಪ್ರಯಾಣ ಬೆಳೆಸಿದರು.

Advertisements

ಟೇಕ್ ಆಫ್ ಆಗುವ ವೇಳೆಗೆ, ಚಾಪರ್ ಫ್ಯಾನ್ ರಭಸಕ್ಕೆ ದೂಳು ಎದ್ದಿತ್ತು. ಹೀಗಾಗಿ ಪೈಲೆಟ್‌ಗೆ ಆಕಾಶ ಕಾಣದಂತಾಗಿ ಹೆಲಿಕಾಪ್ಟರ್ ಅನ್ನು ಆತ ಲ್ಯಾಂಡ್ ಮಾಡಿದ. ಬಳಿಕ ದೂಳು ಸರಿದ ನಂತರ ಮತ್ತೆ ಟೇಕಾಫ್ ಮಾಡಿ, ರಾಮನಗರಕ್ಕೆ ಪ್ರಯಾಣ ಬೆಳಸಿದರು ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದರು. ಮುಖ್ಯಮಂತ್ರಿಗಳೊಂದಿಗೆ ಆರೋಗ್ಯ ಸಚಿವ ಸುಧಾಕರ್ ಹೆಲಿಕಾಪ್ಟರ್‌ನಲ್ಲಿದ್ದರು.

ಈ ಸುದ್ದಿ ಓದಿದ್ದೀರಾ? :ಮೀಸಲಾತಿ ಘೋಷಣೆ ಎಂಬುದು ಈ ಸರ್ಕಾರಕ್ಕೆ ಮಕ್ಕಳ ಆಟಿಕೆಯಂತಾಗಿದೆ:…

ಬಿಎಸ್‌ವೈ ಕಾಡಿದ್ದ ಹೆಲಿಕಾಪ್ಟರ್
ಮಾರ್ಚ್ 6 ರಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಚಾಪರ್‌ ಲ್ಯಾಂಡಿಂಗ್‌ ವೇಳೆ ಭದ್ರತಾ ಲೋಪವಾಗಿತ್ತು. ಜೇವರ್ಗಿಯಲ್ಲಿ ನಡೆಯುತ್ತಿದ್ದ ವಿಜಯ ಸಂಕಲ್ಪ ರಥಯಾತ್ರೆಗೆ ಭಾಗವಹಿಸಲು ಅಂದು ಯಡಿಯೂರಪ್ಪ ನಗರಕ್ಕೆ ಬರುತ್ತಿದ್ದರು. ಅವರ ಆಗಮನಕ್ಕಾಗಿ ನಗರದ ಹೊರ ಆವರಣದಲ್ಲಿ ತಾತ್ಕಾಲಿಕವಾಗಿ ಹೆಲಿಪ್ಯಾಡ್ ನಿರ್ಮಿಸಲಾಗಿತ್ತು.

ಹೀಗೆ ಹೆಲಿಪ್ಯಾಡ್‌ನಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಆಗುವ ವೇಳೆ ಪ್ಲಾಸ್ಟಿಕ್ ಚೀಲಗಳು ಹಾರಿಬಂದಿದ್ದವು. ಆಗ ತಕ್ಷಣ ಎಚ್ಚೆತ್ತ ಪೈಲೆಟ್ ಹೆಲಿಕಾಪ್ಟರ್ ಅನ್ನು ಲ್ಯಾಂಡ್ ಮಾಡದೆ ಬೇರೆಡೆ ತೆಗೆದುಕೊಂಡು ಹೋಗಿ ಸಂಭಾವ್ಯ ಅಪಾಯ ತಡೆಗಟ್ಟಿದರು.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X