ಪರಸ್ಪರ ಸಹಯೋಗದಿಂದ ಕೆಲಸ ಮಾಡಿ: ‘ಬೆಂಗಳೂರು ಸಿಟಿ ರೌಂಡ್ಸ್’ ಬಳಿಕ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

Date:

Advertisements

“ಬೆಂಗಳೂರಿನಲ್ಲಿ ಮಳೆಗಾಲ ನಿರ್ವಹಣೆಗೆ ಎಲ್ಲ ರೀತಿಯಲ್ಲಿಯೂ ಅಧಿಕಾರಿಗಳು ಸಜ್ಜಾಗಬೇಕು ಎಂದು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಮಳೆ ಬಂದಾಗ ನೀರು ನುಗ್ಗಿದರೆ ಇಂಜಿನಿಯರ್‌ಗಳನ್ನೇ ಹೊಣೆಗಾರರನ್ನಾಗಿಸಲಾಗುವುದು. ಬಿಬಿಎಂಪಿ, ಬಿಡಬ್ಲ್ಯೂಎಸ್‌ಎಸ್‌ಬಿ, ಬಿಡಿಎ ಹಾಗೂ ಬೆಸ್ಕಾಂನ ಅಧಿಕಾರಿಗಳು ಪರಸ್ಪರ ಸಹಯೋಗದಿಂದ ಕೆಲಸ ಮಾಡಬೇಕು” ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

‘ಬೆಂಗಳೂರು ಸಿಟಿ ರೌಂಡ್ಸ್’ ಬಳಿಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ನಗರದಾದ್ಯಂತ ಇರುವ ಒಣ ಮರಗಳು, ರೆಂಬೆ-ಕೊಂಬೆಗಳನ್ನು ಗುರುತಿಸಿ ಅನಾಹುತಕ್ಕೆ ಮೊದಲು ತೆರವುಗೊಳಿಸಲು ಸೂಚಿಸಿದ್ದೇವೆ. ಮೆಟ್ರೋ ಕಾಮಗಾರಿ, ಫ್ಲೈ ಓವರ್ ಸೇರಿ ಕಾಮಗಾರಿಗಳ ತ್ಯಾಜ್ಯವಸ್ತು(ಡೆಬ್ರಿ)ಗಳನ್ನು ತೆರವುಗೊಳಿಸಲು ಸ್ಪಷ್ಟ ನಿರ್ದೇಶನ ನೀಡಿದ್ದೇವೆ” ಎಂದು ತಿಳಿಸಿದರು.

“ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ರಾಮಲಿಂಗಾರೆಡ್ಡಿ ಬಿಡಿಎ ಅಧ್ಯಕ್ಷರು, ಆಯುಕ್ತರು ಸೇರಿ ಅಧಿಕಾರಿಗಳ ತಂಡದ ಜೊತೆ ಅನೇಕ ಪ್ರದೇಶಗಳಿಗೆ ಭೇಟಿ ನೀಡಿದೆವು. ಜೂನ್ ತಿಂಗಳಿನಿಂದ ಮುಂಗಾರು ಪ್ರಾರಂಭವಾಗಲಿದೆ. ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿ ಪ್ರವಾಹ ಉಂಟಾಗಿದೆ ಎಂದು ವರದಿಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ” ಎಂದರು.

Advertisements

“ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಕೂಡ ಯಲಹಂಕಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ ಎಂದು ವರದಿಯಾಗಿತ್ತು. ಯಲಹಂಕ ಕೆರೆಗೆ ನೀರು ಹೋಗುವಂತೆ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗಾಳಿ ಆಂಜನೇಯ ದೇವಾಲಯದ ಬಳಿ ಮಳೆ ಜಾಸ್ತಿಯಾದಾಗ ನೀರು ಹರಿಯಲು ಎತ್ತರ ಸಾಲಲ್ಲ, ಹೂಳು ತುಂಬಿತ್ತು. ಪರ್ಯಾಯವಾಗಿ ಇನ್ನೊಂದು ಮೋರಿ ನಿರ್ಮಿಸಲು ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ 860 ಕಿಮೀ ರಾಜಕಾಲುವೆ ಇದೆ. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 491 ಕಿಮೀ ರಾಜಕಾಲುವೆಯನ್ನು ತೆರವು ಮಾಡಲಾಗಿತ್ತು” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

“ಹಿಂದಿನ ಬಿಜೆಪಿ ಸರ್ಕಾರ ಜನವರಿ 2023ರಲ್ಲಿ 193 ಕಿಮೀ ತೆರವು ಮಾಡಲು ಕ್ರಮ ತೆಗೆದುಕೊಂಡರು. ಮೊದಲೇ ಈ ಕೆಲಸ ಮಾಡಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. 1800 ಕೋಟಿ ರೂ ಕೇವಲ ಇದಕ್ಕೆ ವೆಚ್ಚವಾಗುತ್ತಿದೆ. 174 ಕಿಮೀ ಉಳಿದಿದೆ. ವಿಶ್ವ ಬ್ಯಾಂಕ್ ಸುಮಾರು 2000 ಕೋಟಿ ರೂಪಾಯಿ ನೀಡಲಿದೆ. 12 ಪ್ರಕರಣ ಸಿವಿಲ್ ನ್ಯಾಯಾಲಯದಲ್ಲಿವೆ. ವಕೀಲರು ಇದಕ್ಕೆ ಹಾಜರಾಗುತ್ತಿದ್ದು, ಅಗತ್ಯ ಬಿದ್ದರೆ ವಿಶೇಷ ವಕೀಲರನ್ನು ನೇಮಿಸಿ ಪ್ರಕರಣ ಇತ್ಯರ್ಥ ಗೊಳಿಸಲಾಗುವುದು. 12.15 ಕಿಮೀ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣವಿದೆ” ಎಂದು ಸಿಎಂ ಮಾಹಿತಿ ನೀಡಿದರು.

“ವಿಳಂಬವಾಗಿರುವ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು, ಹೂಳೆತ್ತಬೇಕು, ಒಣಗಿರುವ ಕೊಂಬೆಗಳನ್ನು ಕತ್ತರಿಸಲು ಸೂಚನೆ ನೀಡಲಾಗಿದೆ. ಪಾದಚಾರಿ ಮಾರ್ಗಗಳನ್ನು ಸರಿಪಡಿಸಬೇಕು. ರಾಜಕಾಲುವೆಗೆ ಕಸ ಹಾಕುವುದನ್ನು ತಡೆಗಟ್ಟಲು ಸೂಚನೆ ನೀಡಲಾಗಿದೆ. ಮುಂಗಾರು ಪ್ರಾರಂಭವಾಗುವ ಮುಂಚಿತವಾಗಿ ರಾಜಕಾಲುವೆಗಳ ಹೂಳು ತೆಗೆಯಬೇಕು” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

Download Eedina App Android / iOS

X