ಬಿಬಿಎಂಪಿ ಬೆಂಕಿ ಅವಘಡ | ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರ

Date:

Advertisements
  • ವಿಕ್ಟೋರಿಯಾ ಆಸ್ಪತ್ರೆಯ ನಿರ್ದೇಶಕ ರಮೇಶ್ ಕೃಷ್ಣ ಮಾಹಿತಿ
  • ಮುಖ್ಯ ಇಂಜಿನಿಯರ್​​​ ನೇತೃತ್ವದಲ್ಲಿ ತನಿಖೆ : ತುಷಾರ್ ಗಿರಿನಾಥ್

ಬಿಬಿಎಂಪಿಯ ಗುಣ ನಿಯಂತ್ರಣ ಕಟ್ಟಡದಲ್ಲಿ ಇತ್ತೀಚೆಗೆ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಗಾಯಗೊಂಡಿರುವ ಒಂಭತ್ತು ಸಿಬ್ಬಂದಿಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆಯ ನಿರ್ದೇಶಕ ರಮೇಶ್ ಕೃಷ್ಣ ಹೇಳಿದ್ದಾರೆ.

ಸದ್ಯ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್​​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಂಭತ್ತು ಜನರಲ್ಲಿ ಮೂವರು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ. ಚೀಫ್ ಇಂಜಿನಿಯರ್ ಶಿವಕುಮಾರ್, ಆಪರೇಟರ್ ಜ್ಯೋತಿ, ಇಇ ಕಿರಣ್ ಸ್ಥಿತಿ ಗಂಭೀರವಾಗಿದೆ ಎಂದು ರಮೇಶ್ ಕೃಷ್ಣ ಮಾಹಿತಿ ನೀಡಿದ್ದಾರೆ.

ಚೀಫ್ ಇಂಜಿನಿಯರ್ ಶಿವಕುಮಾರ್ ಅವರಿಗೆ ಶೇ 25 ರಷ್ಟು ಸುಟ್ಟಗಾಯವಾಗಿದೆ. ಇವರಿಗೆ ಗಂಟಲಿನ‌ ಸಮಸ್ಯೆಯಾಗಿದ್ದು, ಮಾತನಾಡಲು ಕಷ್ಟವಾಗುತ್ತಿದೆ. ಇಇ ಕಿರಣ್ ಸ್ಥಿತಿ ಕೂಡ ಗಂಭೀರವಾಗಿದ್ದು, ಡಯಾಲಿಸೀಸ್ ಮಾಡಲಾಗಿದೆ. ಆಪರೇಟರ್ ಜ್ಯೋತಿ ಅವರ ಮುಖಕ್ಕೆ ಹಾನಿಯಾಗಿದ್ದು, ಉಸಿರಾಟದ ಸಮಸ್ಯೆಯಾಗಿದೆ. ಈ ಮೂವರು ಇನ್ನೂ 4ರಿಂದ5 ದಿನ ಐಸಿಯುನಲ್ಲಿಯೇ ಇರಿಸಲಾಗುತ್ತದೆ. ಉಳಿದ ಆರು ಜನರು ಸಣ್ಣಪುಟ್ಟ ಗಾಯಗಳಾಗಿದ್ದರಿಂದ ಹೆಚ್ಚಿನ ಅನಾಹುತದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

Advertisements

ಮುಖ್ಯ ಇಂಜಿನಿಯರ್​​​ ನೇತೃತ್ವದಲ್ಲಿ ತನಿಖೆ : ತುಷಾರ್ ಗಿರಿನಾಥ್
ಬೆಂಕಿ ಅವಘಡ ಘಟನೆಯನ್ನು ಬಿಬಿಎಂಪಿಯ ಮುಖ್ಯ ಇಂಜಿನಿಯರ್​​​ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣ ಸಂಬಂಧ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಪ್ರಕರಣ ಸಂಬಂಧ ಬಿಬಿಎಂಪಿಯಿಂದ ಆಂತರಿಕ ತನಿಖೆ ನಡೆಯುತ್ತಿದೆ. ಬಿಬಿಎಂಪಿ ಮುಖ್ಯ ಇಂಜಿನಿಯರ್​​​ ಪ್ರಹ್ಲಾದ್ ನೇತೃತ್ವದಲ್ಲಿ ತನಿಖೆ ನಡೆಯಲಾಗುತ್ತಿದೆ. ತನಿಖಾ ವರದಿಯನ್ನು ಸಿಎಂ, ಡಿಸಿಎಂಗೆ ಸಲ್ಲಿಸಲಾಗುತ್ತದೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

ತನಿಖೆಗೆ ನಮ್ಮ ಅಧಿಕಾರಿಗಳು ಸೂಕ್ತ ಸಹಕಾರ ನೀಡುತ್ತಿದ್ದಾರೆ. ಲ್ಯಾಬ್​​ನಲ್ಲಿ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇನ್ನಷ್ಟು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದ ಬಗ್ಗೆ ವಿಚಾರಣೆ ಮಾಡಲಾಗುವುದು ಎಂದು ತುಷಾರ್ ಗಿರಿನಾಥ್ ಹೇಳಿದರು.

ಡಿ ಗ್ರೂಪ್ ನೌಕರ ಲ್ಯಾಬ್ ನಲ್ಲಿ ಸಹಾಯ ಮಾಡಬಹುದು. ಆದರೆ ಎಲ್ಲ ಕೆಲಸ ಅವರೇ ಮಾಡುವಂತಿಲ್ಲ. ಅಗ್ನಿ ಅವಘಡದಲ್ಲಿ ಒಂಬತ್ತು ಜನರಲ್ಲಿ 6 ಜನರಿಗೆ ಯಾವುದೇ ಅಪಾಯವಾಗಿಲ್ಲ. ಇನ್ನುಳಿದ ಮೂವರಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಬಿಬಿಎಂಪಿ ವತಿಯಿಂದಲೇ ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ. ಮುಖ ಸುಟ್ಟವರಿಗೆ ಸರ್ಜರಿ ಮಾಡಿಸಲಾಗುವುದು ಎಂದರು.

ಮೂವರು ಆರೋಪಿಗಳಿಗೆ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ
ಇನ್ನು ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ. ಆನಂದ್, ಸ್ವಾಮಿ, ಸುರೇಶ್​ ಸ್ಟೇಷನ್​ ಬೇಲ್ ಮೂಲಕ ಬಿಡುಗಡೆಯಾಗಿದ್ದು, ವಿಚಾರಣೆಗೆ ಕರೆದಾಗ ಮತ್ತೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಚಪಾತಿ ರೊಟ್ಟಿ ಕಾಯಿಸಿದಂತೆ ಎಫ್‌ಐಆರ್ ಮಾಡ್ತಿದ್ದಾರೆ: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X