ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಮತದಾರರಿಂದ ತಕ್ಕ ಉತ್ತರ: ಮಾಜಿ ಸಂಸದ ಡಿ ಕೆ ಸುರೇಶ್

Date:

Advertisements

ರಾಜ್ಯದ ಮೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಸಂಪೂರ್ಣ ಬೆಂಬಲ ದೊರೆತಿದೆ. ಗ್ಯಾರಂಟಿಗಳ ವಿರುದ್ಧ, ಮುಖ್ಯಮಂತ್ರಿಗಳ ವಿರುದ್ಧದ ವಿರೋಧ ಪಕ್ಷಗಳ ಸುಳ್ಳು ಆರೋಪಕ್ಕೆ ರಾಜ್ಯದ ಮೂರು ಭಾಗಗಳಲ್ಲಿ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಮಾಜಿ ಸಂಸದ ಡಿ ಕೆ ಸುರೇಶ್ ತಿಳಿಸಿದರು.

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಬಗ್ಗೆ ಸುರೇಶ್ ಅವರು ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿ, “ಚನ್ನಪಟ್ಟಣದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಅವರ ಪುತ್ರರನ್ನು ಜನ ಸೋಲಿಸಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ, ವಿರೋಧ ಪಕ್ಷಗಳು ಸರ್ಕಾರಕ್ಕೆ ಅನಗತ್ಯವಾಗಿ ಅಡ್ಡಿಮಾಡಿ ಅಭಿವೃದ್ಧಿಗೆ ತೊಂದರೆ ನೀಡದಂತೆ ಸಂದೇಶ ರವಾನಿಸಿದ್ದಾರೆ” ಎಂದರು.

ಸರ್ಕಾರದ ವಿರುದ್ಧದ ಇದು ಆರೋಪಗಳಿಗೆ ಉತ್ತರವೇ ಎಂದು ಕೇಳಿದಾಗ, “ಮಾಜಿ ಪ್ರಧಾನಿಗಳು, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರು, ವಿರೋಧ ಪಕ್ಷಗಳ ನಾಯಕರ ಆರೋಪಗಳಿಗೆ ಜನ ಸ್ಪಷ್ಟ ತೀರ್ಪು ನೀಡಿದ್ದಾರೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಹಳೆ ಮೇಸೂರು ಭಾಗದ ಜನ ಈ ಸಂದೇಶ ನೀಡಿದ್ದಾರೆ. ಇನ್ನಾದರೂ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಮೇಲೆ ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡಲಿ” ಎಂದು ಹೇಳಿದರು.

ಚನ್ನಪಟ್ಟಣದಲ್ಲಿ ಜಮೀರ್ ಅವರ ಹೇಳಿಕೆ ಅಡ್ಡಿಯಾಗಬಹುದು ಎಂಬ ಊಹಾಪೋಹ ಇತ್ತು ಎಂದು ಕೇಳಿದಾಗ, “ಆ ಭಾವನೆ ಸ್ಥಳೀಯ ಮಟ್ಟದಲ್ಲಿ ಇರಲಿಲ್ಲ ಎಂದು ನಾನು ಸ್ಪಷ್ಟನೆ ನೀಡಿದ್ದೆ. ಒಬ್ಬ ಅಭ್ಯರ್ಥಿಯ ಪರವಾಗಿ ಮಾಧ್ಯಮಗಳ ಸೃಷ್ಟಿ ಎಂದು ಹೇಳಿದ್ದೆ. ಇದರಿಂದ ಮಾಧ್ಯಮಗಳಿಗೆ ಬೇಸರವಾಗಿರಬಹುದು. ಜಮೀರ್ ಅವರ ಹೇಳಿಕೆ ಮೊದಲ ಬಾರಿಗೆ ಹೇಳಿದ್ದಲ್ಲ. ಜಮೀರ್ ಅವರು ಯಾರಿಗೆ ಈ ಪದ ಬಳಸಿದ್ದರು ಅವರು ಇದಕ್ಕೆ ಈ ಹಿಂದೆ ಆಕ್ಷೇಪ ಮಾಡಿರಲಿಲ್ಲ” ಎಂದರು.

ಮಹಾರಾಷ್ಟ್ರ ಚುನಾವಣೆ ಫಲಿತಾಂಶದ ಬಗ್ಗೆ ಕೇಳಿದಾಗ, “ನೀವು ನನ್ನ ಮೇಲೆ ಒತ್ತಡ ಹಾಕಿದ್ದ ಕಾರಣ ನಾನು ಕೇವಲ ಕರ್ನಾಟಕ ಚುನಾವಣೆ ಬಗ್ಗೆ ಮಾತ್ರ ಗಮನ ಹರಿಸಿದ್ದೆ. ಬೇರೆ ರಾಜ್ಯಗಳ ಚುನಾವಣೆ ಬಗ್ಗೆ ಗಮನಹರಿಸಿರಲಿಲ್ಲ. ಸಿಎಂ, ಡಿಸಿಎಂ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರಚಾರಕ್ಕೆ ತೆರಳಿದ್ದರು. ಅವರು ಕೂಡ ವಿಶ್ವಾಸ ವ್ಯಕ್ತಪಡಿಸದ್ದರು. ಈ ಫಲಿತಾಂಶದ ಬಗ್ಗೆ ನಮ್ಮ ಹೈಕಮಾಂಡ್ ನಾಯಕರು ಪರಿಶೀಲನೆ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಿಸಿದ ಎಲ್ಲಾ ಮತದಾರರಿಗೆ ವಿಶೇಷವಾಗಿ ಧನ್ಯವಾದಗಳು. ಪಕ್ಷದ ಪರವಾಗಿ ಶ್ರಮಿಸಿದ ಕಾರ್ಯಕರ್ತರು, ಮಂತ್ರಿಗಳು, ಶಾಸಕರು ಚುನಾವಣೆ ಮಾಡಿದ್ದು, ಈ ಗೆಲುವಿನಲ್ಲಿ ಅವರ ಕಾಣಿಕೆಯೂ ಇದೆ. ಅವರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ರಾಜ್ಯ ಸರ್ಕಾರ ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 7 ಕೋಟಿ 12ಲಕ್ಷ ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ನಕ್ಸಲರು ಶರಣಾದಾಗ ನಕ್ಸಲ್ ಮುಕ್ತ ರಾಜ್ಯ ಎಂದು ಬಿರುದು...

ಸಮಸಮಾಜವನ್ನು ಬಯಸದವರು ಸಮೀಕ್ಷೆ ವಿರೋಧಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ...

ವೀರಶೈವ-ಲಿಂಗಾಯತರು ಕೆಟ್ಟರೆ ರಾಜ್ಯವೇ ಕೆಡುತ್ತದೆ: ಸಚಿವ ಈಶ್ವರ ಖಂಡ್ರೆ

ವೀರಶೈವ -ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ...

ಕಾಫ್‌ ಸಿರಪ್ ದುರಂತ | ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ: ದಿನೇಶ್‌ ಗುಂಡೂರಾವ್‌

ದೇಶದ ಬೇರೆ ರಾಜ್ಯಗಳಲ್ಲಿ ಕಾಫ್‌ ಸಿರಪ್ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ...

Download Eedina App Android / iOS

X