ಬೆಳಗಾವಿ | ಸ್ಮಶಾನದಿಂದ ಚುನಾವಣಾ ಪ್ರಚಾರ ಆರಂಭಿಸುತ್ತೇವೆ: ಸತೀಶ್ ಜಾರಕಿಹೊಳಿ

Date:

Advertisements

ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಚುನಾವಣಾ ಪ್ರಚಾರವನ್ನು ಸ್ಮಶಾನದಿಂದ ಆರಂಭಿಸುವುದಾಗಿ ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

2018ರಲ್ಲಿ, ಜ್ಯೋತಿಷ್ಯದಲ್ಲಿ ಅಶುಭವೆಂದು ಹೇಳಲಾಗಿರುವ ರಾಹುಕಾಲದ ಸಮಯದಲ್ಲಿ ಜಾರಕಿಹೊಳಿ ತಮ್ಮ ನಾಮಪತ್ರ ಸಲ್ಲಿಸಿದ್ದರು. ಆ ಚುನಾವಣೆಯಲ್ಲಿ ಅವರು ಗೆದ್ದಿದ್ದರು. ಕಡಿಮೆ ಅಂತದದಲ್ಲಿ ಗೆದ್ದಿದ್ದಕ್ಕೂ ಇದೇ ಕಾರಣವೆಂದು ಕೆಲವರು ಹೇಳಿದ್ದರು. ಆದರೆ, ‘ಜ್ಯೋತಿಷ್ಯಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಕ್ಷೇತ್ರದಲ್ಲಿ ಹೆಚ್ಚು ಪ್ರಚಾರ ಮಾಡದಿರುವುದೇ ಕಡಿಮೆ ಅಂತರದ ಗೆಲುವುಗೆ ಕಾರಣ’ ಎಂದು ಮೌಢ್ಯದ ಮಾತುಗಳನ್ನು ಜಾರಕಿಹೊಳಿ ತಳ್ಳಿಹಾಕಿದ್ದರು.

“ಚುನಾವಣೆ ಘೋಷಣೆಯಾದ ನಂತರ ನಾನು ಕ್ಷೇತ್ರಕ್ಕೆ ನಾನು ಭೇಟಿ ನೀಡಿರಲಿಲ್ಲ. ಎಲ್ಲವನ್ನೂ ನನ್ನ ಬೆಂಬಲಿಗರಿಗೆ ಬಿಟ್ಟಿದ್ದೆ. ಪ್ರಚಾರ ಮಾಡದೇ ಗೆಲ್ಲಬಹುದೇ ಎಂಬ ಪ್ರಯೋಗ ಇದಾಗಿತ್ತು” ಎಂದು ಜಾರಕಿಹೊಳಿ ಹೇಳಿದ್ದರು.

Advertisements

ಆದರೆ, ಈ ಬಾರಿ ಅವರು ಅಂತಹ ಪ್ರಯೋಗಕ್ಕೆ ಮುಂದಾಗಿಲ್ಲ. ಹೀಗಾಗಿ, ಅವರೇ ಖದ್ದು ಪ್ರಚಾರಕ್ಕೆ ಇಳಿಯಲಿದ್ದು, ಸ್ಮಶಾನದಲ್ಲಿ ಚುನಾವಣಾ ವಾಹನಕ್ಕೆ ಪೂಜೆ ಸಲ್ಲಿಸುವ ಮೂಲಕ ಪ್ರಚಾರ ಆರಂಭಿಸಲಿದ್ದಾರೆ.

“ಇದು ಸಂಪ್ರದಾಯಕ್ಕೆ ವಿರುದ್ಧವಲ್ಲ. ಕಳೆದ 30 ವರ್ಷಗಳಿಂದ ನಾವು ನಡೆಸುತ್ತಿರುವ ಮೂಢನಂಬಿಕೆ ವಿರೋಧಿ ಅಭಿಯಾನಗಳು ಮುಂದುವರಿಯಲಿವೆ. ಬುದ್ಧ, ಬಸವ, ಅಂಬೇಡ್ಕರ್ ತೋರಿದ ಹಾದಿಯಲ್ಲಿ ಸಾಗುತ್ತಿದ್ದೇವೆ” ಎಂದು ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

“ತಾವು ಪ್ರಚಾರದಲ್ಲಿ ಭಾಗಿಯಾಗದಿದ್ದರೆ ಅಥವಾ ಪ್ರಚಾರ ಮಾಡದಿದ್ದರೆ, ಪ್ರತಿಸ್ಪರ್ಧಿಗಳು ತಮ್ಮ ಅನುಪಸ್ಥಿತಿಯನ್ನು ‘ಸುಳ್ಳು ಪ್ರಚಾರ’ ಮಾಡಲು ಬಳಸಿಕೊಳ್ಳಬಹುದು. ನನ್ನ ಎದುರಾಳಿಗಳಿಗೆ ಅವಕಾಶ ನೀಡಲು ನಾನು ಬಯಸುವುದಿಲ್ಲ. ನಮ್ಮ ಘೋಷವಾಕ್ಯವು ‘ಹೆಚ್ಚು ಮತಗಳ ಅಂತರದಿಂದ ನಮ್ಮನ್ನು ಗೆಲ್ಲಿಸಿ’ ಎಂದಾಗಿರುತ್ತದೆ” ಎಂದು ಅವರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X