ಬೆಳಗಾವಿ ಅಧಿವೇಶನ | ರೈತರ ಧರಣಿ; ಸಚಿವರಿಂದ ಕೃಷಿ ಕಾಯ್ದೆ ಹಿಂಪಡೆಯುವ ಭರವಸೆ

Date:

Advertisements
  • ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಧರಣಿ
  • ರೈತರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ

ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಸುವರ್ಣಸೌಧದ ಎದುರು ಸೋಮವಾರ ಧರಣಿ ನಡೆಯಿತು.

ಧರಣಿ ಸ್ಥಳಕ್ಕೆ ಭೇಟಿ ನೀಡಿದ ಸಮಾಜ ಕಲ್ಯಾಣ ಸಚಿವ ಎಚ್‌ ಸಿ ಮಹಾದೇವಪ್ಪ, “ಈ ಹಿಂದಿನ ರಾಜ್ಯ ಸರ್ಕಾರ ಜಾರಿಗೊಳಿಸಿದ ಕೃಷಿ ಕಾಯ್ದೆಯನ್ನು ಹಿಂಪಡೆಯಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗುವುದು” ಎಂದು ಭರವಸೆ ನೀಡಿದರು.

“ಹಾಲಿನ ದರ ಹೆಚ್ಚಳ, ಕೃಷಿ ಕಾಯ್ದೆ ವಾಪಸ್, ಕನಿಷ್ಠ ಬೆಂಬಲ ಬೆಲೆಯ ಶಾಸನಬದ್ಧ ಅನುಷ್ಠಾನ, ಬರಗಾಲದ ತುರ್ತು ಕಾರ್ಯಕ್ರಮಗಳು ಜಾರಿ, ಸೆಪ್ಟೆಂಬರ್ 22ರ ವಿದ್ಯುತ್ ಕಾಯ್ದೆ ವಾಪಸ್‌, ಕಬ್ಬಿಗೆ ಎಫ್‌ಆರ್‌ಪಿ ಜೊತೆ ಎಸ್ಎಪಿ ನೀಡುವುದು ಮುಂತಾದ ಬೇಡಿಕೆಗಳನ್ನು ರೈತರು ಸಲ್ಲಿಸಿದ್ದಾರೆ. ಇವುಗಳ ಬಗ್ಗೆ ಬೆಂಗಳೂರಿಗೆ ಹೋಗಿ ವಿಧಾನಸೌಧದಲ್ಲಿ ಚರ್ಚೆ ಮಾಡುತ್ತೇವೆ” ಎಂದು ಭರವಸೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸಿನ ಚಳಿ ಬಿಡಿಸಲಿದೆಯೇ ಬಿಜೆಪಿ?

“ರೈತರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ. ಕೇಂದ್ರದ ಪರಿಸರ ಇಲಾಖೆಯಿಂದ ಅನುಮತಿ ಸಿಕ್ಕ ಬಳಿಕ ಮಹದಾಯಿ ಮತ್ತು ಮೇಕೆದಾಟು ಯೋಜನೆ ಕಾಮಗಾರಿ ಆರಂಭಿಸಲು ಯಾವುದೇ ತಕರಾರು ಇಲ್ಲ” ಎಂದರು.

ಧರಣಿಗೂ ಮುನ್ನ ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ರೈತರು ಪ್ರತಿಭಟನೆ ನಡೆಸಿ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು. ಇದಕ್ಕೆ ಅವಕಾಶ ನೀಡದ ಪೊಲೀಸರು ರೈತರನ್ನು ಸರ್ಕಾರಿ ಬಸ್ಸಿನಲ್ಲಿ ಹತ್ತಿಸಿ ಖೊಂಡಸಕೊಪ್ಪದಲ್ಲಿ ಹಾಕಿದ ಶಾಮಿಯಾನದ ಬಳಿ ಬಿಟ್ಟರು.

ಕೋಡಿಹಳ್ಳಿ ಚಂದ್ರಶೇಖರ ಮಾತನಾಡಿ, “ರೈತರಿಗೆ ಮಾರಕವಾದ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ, ಅದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ರೈತರ ಮನವಿಗೆ ಬೆಲೆ ಕೊಡದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ ಖಚಿತ” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X