ಬೀದರ್‌ | ಬಿಜೆಪಿ ಪಕ್ಷದಿಂದ ಮಾತ್ರ ದಲಿತರ ಉದ್ದಾರ ಸಾಧ್ಯ : ಛಲವಾದಿ ನಾರಾಯಣಸ್ವಾಮಿ

Date:

Advertisements

ಡಾ.ಬಿ.ಆರ್.‌ಅಂಬೇಡ್ಕರ್‌ ಅವರು ಬದುಕ್ಕಿದ್ದಾಗ ಅವರನ್ನು ಅಪಮಾನಿಸಿ, ಚುನಾವಣೆಯಲ್ಲಿ ಸೋಲಿಸಿದ ಕಾಂಗ್ರೆಸ್‌ ಪಕ್ಷ ಇಂದು ಅಂಬೇಡ್ಕರವಾದಿಗಳಂತೆ ಮಾತನಾಡುತ್ತಿದೆ. ಆದರೆ ಬಿಜೆಪಿ ಪಕ್ಷ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ದಲಿತರ ಉದ್ದಾರವಾಗಲು ಸಾಧ್ಯ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಬೀದರ್‌ನಲ್ಲಿ ಶುಕ್ರವಾರ ಬಿಜೆಪಿ ವತಿಯಿಂದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಜನಾಕ್ರೋಶ ಮಾತನಾಡಿದ ಅವರು, ʼಈ ಕಾಂಗ್ರೆಸ್‌‌ ಎಷ್ಟು ಪಕ್ಷ ಡೆಂಜರ್‌ ಇದೆಯೋ, ಕಾಂಗ್ರೆಸಿನಲ್ಲಿರುವ ದಲಿತ ಮಂತ್ರಿ, ಶಾಸಕರು ಇನ್ನೂ ಡೆಂಜರ್ ಇದ್ದಾರೆ, ಅವರಿಂದ ದಲಿತರು ಯಾವತ್ತೂ ಉದ್ದಾರ ಆಗಲ್ಲ ಎಂಬುದು ಅರ್ಥೈಸಿಕೊಳ್ಳಬೇಕುʼ ಎಂದರು.

ʼಬೀದರ್‌ ಜಿಲ್ಲೆ ಬುದ್ಧ, ಬಸವ, ಅಂಬೇಡ್ಕರ್‌ ಅವರನ್ನು ಗೌರವಿಸುವ ನಾಡು, ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಲಿತರು ಇದ್ದಾರೆ. ಈ ದೇಶದಲ್ಲಿ ದಲಿತರು ಉದ್ದಾರ ಆಗಲಿಲ್ಲ, ಬಹಳ ಬಡವರಾಗಿದ್ದಾರೆ, ಅಸ್ಪ್ರಶ್ಯತೆ ಹೋಗಲಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆಯಲ್ಲಿ ಭಾಷಣ ಮಾಡುತ್ತಾರೆ. ಆದರೆ ಈ ಹಿಂದೆ 60-70 ವರ್ಷಗಳ ಕಾಲ ದೇಶ ಆಳ್ವಿಕೆ ನಡೆಸಿದ ಕಾಂಗ್ರೆಸ್‌ ಹಾಗೂ 55 ವರ್ಷಗಳಿಂದ ಅಧಿಕಾರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರು ದಲಿತ ಸಮುದಾಯಕ್ಕೆ ಏನಾದರೂ ಕೊಡುಗೆ ನೀಡಿದ್ದಾರೆಯೇ, ಅವರಿಂದ ಅಸ್ಪ್ರಶ್ಯತೆ, ದಲಿತರ ಬಡತನ ಹೋಗಲಾಡಿಸಲು ಆಗಲಿಲ್ಲʼ ಎಂದರು.

Advertisements

ʼಮಲ್ಲಿಕಾರ್ಜುನ ಖರ್ಗೆ ಅವರೇ ದಲಿತರು ಉದ್ದಾರ ಆಗಬೇಕಾದರೆ ನೀವು ಮತ್ತು ನಿಮ್ಮ ಕುಟುಂಬ ಅನುಭವಿಸುತ್ತಿರುವ ಅಧಿಕಾರಕ್ಕೆ ಮೊದಲು ರಾಜೀನಾಮೆ ಕೊಡಿ, ದಲಿತರು ಉದ್ಧಾರ ಆಗಲಿಲ್ಲ ಅಂತ ಮೊಸಳೆ ಕಣ್ಣೀರು ಹಾಕ್ತೀರಾ. ದಲಿತರ ಉದ್ದಾರ ಆಗದಿರುವುದಕ್ಕೆ ದಲಿತರೇ ಕಾರಣʼ ಎಂದರು.

ʼಮೀಸಲಾತಿ ಪಡೆದು ಅಧಿಕಾರಕ್ಕೆ ಬಂದ ಬಳಿಕ ತಮ್ಮ ಸುತ್ತಲಿನ ಬಡ ಜನರಿಗೆ ಸೌಲಭ್ಯಗಳನ್ನು ಹಂಚುವಂತೆ ಬಾಬಾ ಸಾಹೇಬ್ ಅಂಬೇಡ್ಕರ್‌‌ ಅವರು ಹೇಳಿದ್ದರು. ಆದರೆ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲ ಅಧಿಕಾರ ನನ್ನ ಕುಟುಂಬಕ್ಕೆ ಕೊಡಿ ಎಂದು ಕೇಳುತ್ತಾರೆ, ಹೀಗಾದರೆ ದಲಿತರು ಉದ್ದಾರ ಆಗೋದು ಯಾವಾಗʼ ಎಂದು ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಾಲದ ಕಂತು ಕಟ್ಟಿಲ್ಲವೆಂದು ರೈತನ ಮೇಲೆ ಹಲ್ಲೆ; ಬ್ಯಾಂಕ್‌ ಸಿಬ್ಬಂದಿ ವಿರುದ್ಧ ದೂರು ದಾಖಲು

ʼಈ ದೇಶದಲ್ಲಿ ಪ್ರಧಾನಿ ಮೋದಿಯವರು ಬಾಬಾ ಸಾಹೇಬ್ ಅಂಬೇಡ್ಕರ್‌ ಅವರನ್ನು ಗೌರವಿಸಿದ್ದಾರೆ. ಡಾ.ಅಂಬೇಡ್ಕರ್‌ ಅವರ ಪಂಚಕ್ಷೇತ್ರಗಳನ್ನು ಅಂತರಾಷ್ಟ್ರೀಯ ಸ್ಮಾರಕಗಳನ್ನಾಗಿ ಮಾಡಲಾಗಿದೆ. ರಾಜ್ಯ 10 ಸ್ಥಳಗಳಲ್ಲಿ ಅಂಬೇಡ್ಕರ್ ಅವರ ಸ್ಮಾರಕಗಳು ಆಗುತ್ತಿವೆ. 14 ಸಾವಿರ ಪೌರಕಾರ್ಮಿಕರನ್ನು ಕಾಯಂಗೊಳಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಹೆಚ್ಚಳ ಮಾಡಿದ್ದು ಬಿಜೆಪಿ ಕೊಡುಗೆ. ದಲಿತರನ್ನು ಗುರುತಿಸುವ ಕೆಲಸ ಬಿಜೆಪಿ ಮಾಡುತ್ತಿದೆʼ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X