EXIT POLLನಿಂದ ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ಕೋಟಿ ನಷ್ಟ: ‘ದೇಶದ ಬೃಹತ್ ಹಗರಣ’ ಎಂದ ರಾಹುಲ್ ಗಾಂಧಿ

Date:

Advertisements

“ಜೂನ್ 1ರಂದು ಕೆಲವು ಖಾಸಗಿ ಸಂಸ್ಥೆಗಳು ನಡೆಸಿದ್ದ EXIT POLLನಿಂದ ಲೋಕಸಭಾ ಚುನಾವಣೆಯ ಫಲಿತಾಂಶದ ದಿನ ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ಕೋಟಿ ನಷ್ಟವಾಗಿದೆ. ದೇಶದ ಷೇರು ಮಾರುಕಟ್ಟೆಯ ಇತಿಹಾಸದಲ್ಲೇ ಇದು ಬೃಹತ್ ಹಗರಣ. ಇದರ ಬಗ್ಗೆ ಜಂಟಿ ಸಂಸದೀಯ ಸಮಿತಿಯ ಮೂಲಕ ತನಿಖೆ ನಡೆಯಬೇಕು” ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ದೆಹಲಿಯಲ್ಲಿರುವ ಎಐಸಿಸಿಯ ಮುಖ್ಯ ಕಚೇರಿಯಲ್ಲಿ ಕರೆದಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಜೂನ್ 4 ರಂದು ಷೇರು ಮಾರುಕಟ್ಟೆ ಏರಿಕೆಯಾಗಲಿದೆ ಮತ್ತು ನೀವೆಲ್ಲರೂ ಹೂಡಿಕೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದರು. ಜೊತೆಗೆ ಹಣಕಾಸು ಸಚಿವರೂ ಇದೇ ರೀತಿ ಹೇಳಿದ್ದರು. ಜೂನ್ 4ರ ಮೊದಲು ಷೇರುಗಳನ್ನು ಖರೀದಿಸಿ ಎಂದು ಖುದ್ದು ಪ್ರಧಾನಿ ಮೋದಿ ಕೂಡ ಹೇಳಿದ್ದರು. ಅಲ್ಲದೇ, ಜೂನ್ 4ರಂದು ಮಾರುಕಟ್ಟೆಯ ಹಿಂದಿನ ದಾಖಲೆಗಳನ್ನು ಮುರಿಯಲಿದೆ ಎಂದಿದ್ದರು. ಬಿಜೆಪಿಗೆ ಬಹುಮತ ಬರುವುದಿಲ್ಲ ಎಂದು ಪಕ್ಷದ ಆಂತರಿಕ ಸರ್ವೇಯಿಂದ ಖಚಿತ ಮಾಹಿತಿ ಇದ್ದರೂ ಕೂಡ ಈ ರೀತಿಯ ಹೇಳಿಕೆಗಳನ್ನು ನೀಡಿ, ದೇಶದ ಜನರು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವಂತೆ ಮಾಡಿದ್ದಾರೆ. EXIT POLLನಿಂದ ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ಕೋಟಿ ನಷ್ಟವಾಗಿದೆ. ಷೇರು ಮಾರುಕಟ್ಟೆಯ ಇತಿಹಾಸದಲ್ಲೇ ಇದು ದೇಶದ ಬೃಹತ್ ಹಗರಣ” ಎಂದು ಹೇಳಿದ್ದಾರೆ.

“ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ 5 ಕೋಟಿ ಕುಟುಂಬಗಳಿಗೆ ಪ್ರಧಾನಿ ಮತ್ತು ಗೃಹ ಸಚಿವ ಅಮಿತ್ ಶಾ ನಿರ್ದಿಷ್ಟ ಸಲಹೆಯನ್ನು ಏಕೆ ನೀಡಿದರು? ಜನರಿಗೆ ಹೂಡಿಕೆ ಸಲಹೆ ನೀಡುವುದು ಅವರ ಕೆಲಸವೇ? ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರ ಇದೆ” ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

Advertisements

“ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಎಂದು ಸಲಹೆ ನೀಡುವುದಕ್ಕೆ ಎರಡೂ ಸಂದರ್ಶನಗಳನ್ನು ಒಂದೇ ಮಾಧ್ಯಮಕ್ಕೆ ನೀಡಲಾಗಿದೆ. ಈ ಮಾಧ್ಯಮ ಸಂಸ್ಥೆಯ ಮಾತೃಸಂಸ್ಥೆಯು ಷೇರು ಮಾರುಕಟ್ಟೆಯನ್ನು ತಿರುಚಿದ ಆರೋಪಕ್ಕಾಗಿ ಸೆಬಿಯಿಂದ ತನಿಖೆ ಎದುರಿಸುತ್ತಿದೆ. ಇದೇ ಸಂಸ್ಥೆಗೆ ಯಾಕೆ ಸಂದರ್ಶನ ನೀಡಿದ್ದಾರೆ? ಬಿಜೆಪಿ ಮತ್ತು ನಕಲಿ ಎಕ್ಸಿಟ್ ಪೋಲ್‌ಗಳನ್ನು ಪ್ರಕಟಿಸಿದ ಸಂಸ್ಥೆಗಳಿಗೂ ಹಾಗೂ ಎಕ್ಸಿಟ್‌ ಪೋಲ್‌ಗೂ ಮುಂಚೆ ಷೇರು ಖರೀದಿಸಿದ ಸಂಶಯಾಸ್ಪದ ವಿದೇಶಿ ಹೂಡಿಕೆದಾರರಿಗೂ ನಡುವಿನ ಸಂಬಂಧವೇನು? ಇದಕ್ಕೆಲ್ಲ ಉತ್ತರ ಸಿಗಬೇಕಿದೆ. ಇದು ಅತಿದೊಡ್ಡ ಷೇರು ಮಾರುಕಟ್ಟೆಯ ಹಗರಣ. ಈ ಕುರಿತು ನಾವು ಜಂಟಿ ಸಂಸದೀಯ ಸಮಿತಿಯ ಮೂಲಕ ತನಿಖೆ ನಡೆಯಬೇಕು ಎಂದು ಒತ್ತಾಯಿಸುತ್ತೇವೆ. 30 ಲಕ್ಷ ಕೋಟಿ ನಷ್ಟವಾಗಿರುವುದರಿಂದ 5 ಕೋಟಿ ಕುಟುಂಬಗಳಿಗೆ ಆರ್ಥಿಕ ನಷ್ಟ ಅನುಭವಿಸಿದ್ದಾರೆ. ದೇಶದ ಜನರಿಗಾದ ನಷ್ಟಕ್ಕೆ ಯಾರು ಹೊಣೆ ಎಂಬುದಕ್ಕೆ ಉತ್ತರ ಸಿಗಬೇಕಿದೆ” ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

 

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X