ಬಿಹಾರ | ನಿತೀಶ್‌ ಕುಮಾರ್ ಪದೇಪದೆ ಬಣ ಬದಲಿಸುವುದೇಕೆ: ತೇಜಸ್ವಿ ಪ್ರಶ್ನೆ

Date:

Advertisements

ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಏಕೆ ಪದೇಪದೆ ಬಣ ಬದಲಿಸುತ್ತಾರೆ ಎನ್ನುವುದನ್ನು ಬಿಹಾರದ ಜನತೆ ತಿಳಿದುಕೊಳ್ಳಲು ಬಯಸಿದೆ ಎಂದು ಬಿಹಾರ ವಿಧಾನಸಭೆಯಲ್ಲಿ ತೇಜಸ್ವಿ ಯಾದವ್ ಪ್ರಶ್ನಿಸಿದ್ದಾರೆ.

ಎನ್‌ಡಿಎ-ಜೆಡಿ(ಯು) ಮೈತ್ರಿಕೂಟದ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಮಾತನಾಡಿದ ಅವರು, “ನಿತೀಶ್ ಕುಮಾರ್ ಮತ್ತೊಮ್ಮೆ ಬಣ ಬದಲಿಸುವುದಿಲ್ಲ ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿ ಖಾತರಿಪಡಿಸುವರೆ?” ಎಂದು ಪ್ರಶ್ನಿಸಿದ್ದಾರೆ.

ವಿಶ್ವಾಸಮತ ಯಾಚನೆಗೆ ಮೊದಲು ಆಡಳಿತ ಪಕ್ಷ ಮುಂದಿಟ್ಟ ಸ್ಪೀಕರ್ ಬದಲಾವಣೆಗೆ ಸದನ ಅಂಗೀಕರಿಸಿದೆ. ಆಡಳಿತ ಪಕ್ಷದ ಪರ 125 ಮತ್ತು ವಿಪಕ್ಷಗಳ ಪರವಾಗಿ 112 ಮತಗಳು ದಾಖಲಾಗಿವೆ.

Advertisements

ಮೊದಲಿಗೆ 9ನೇ ಬಾರಿಗೆ ಮುಖ್ಯಮಂತ್ರಿಯಾದ ನಿತೀಶ್ ಕುಮಾರ್‌ ಅವರಿಗೆ ಅಭಿನಂದನೆ ಸಲ್ಲಿಸಿದ ತೇಜಸ್ವಿ, “ಒಂದೇ ಅವಧಿಯಲ್ಲಿ ಮೂರು ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಅದ್ಭುತ ಕ್ಷಣ ಹಿಂದೆಂದೂ ನೋಡಿಲ್ಲ” ಎಂದು ತೇಜಸ್ವಿ ಹೇಳಿದ್ದಾರೆ.

“ಹಳೇ ಪಿಂಚಣಿ ವ್ಯವಸ್ಥೆಯನ್ನು ಮರಳಿ ತನ್ನಿ” ಎಂದು ಜೆಡಿಯು-ಎನ್‌ಡಿಎ ಸರ್ಕಾರವನ್ನು ಅವರು ಒತ್ತಾಯಿಸಿದರು. “ಸಮಾಜವಾದಿ ಪಕ್ಷಗಳ ಕೂಟದ ಸದಸ್ಯರಾದ ನೀವು ಪ್ರಧಾನಿ ಮೋದಿ ವಿರುದ್ಧ ಬಾವುಟ ಹಾರಿಸಿದವರಲ್ಲಿ ಮೊದಲಿಗರು. ಈಗ ನಾನು ಬಾವುಟ ಹಿಡಿದು ಮೋದಿಯನ್ನು ಬಿಹಾರದಲ್ಲಿ ತಡೆಯುವ ಕೆಲಸ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X