ಬಿಜೆಪಿ ಸರ್ಕಾರ ಬಿಟ್ ಕಾಯಿನ್ ಬಿಟ್ಟಿದೆ, ನಾವು ಮರು ತನಿಖೆ ಮಾಡುತ್ತೇವೆ: ಸಚಿವ ಪರಮೇಶ್ವರ್‌

Date:

Advertisements
  • ರಾಜ್ಯದಲ್ಲಿ ಸದ್ಯ ಸಿಐಡಿ ಹೆಚ್ಚು ಶಕ್ತಿಯುತವಾಗಿದೆ
  • ಇಲಾಖೆಯಲ್ಲಿನ ಭ್ರಷ್ಟಾಚಾರದ ಬಗ್ಗೆಯೂ ತನಿಖೆ

ಬಿಟ್ ಕಾಯಿನ್ ಬಗ್ಗೆ ಹಿಂದಿನ ಸರ್ಕಾರ ತನಿಖೆ ಮುಕ್ತಾಯಗೊಳಿಸಿದೆ. ಈಗ ನಾವು ಈ ಬಗ್ಗೆ ಮರುತನಿಖೆ ಮಾಡಿ ಸತ್ಯ ಹೊರಹಾಕುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ತಿಳಿಸಿದರು.

ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, “ಬಿಟ್ ಕಾಯಿನ್ ತನಿಖೆಯನ್ನು ಸಿಐಡಿಗೆ ಕೊಡಬೇಕಾ ಅಥವಾ ಬೇರೆ ತನಿಖಾ ಸಂಸ್ಥೆಗೆ ಕೊಡಬೇಕಾ ಎಂಬುದನ್ನು ನಿರ್ಧರಿಸುತ್ತೇವೆ” ಎಂದರು.

“ರಾಜ್ಯದಲ್ಲಿ ಸದ್ಯ ಸಿಐಡಿ ಹೆಚ್ಚು ಶಕ್ತಿಯುತವಾಗಿದೆ. ಬೇರೆ ಬೇರೆ ಏಜೆನ್ಸಿಗಳ ಸಹಕಾರವನ್ನು ಸಿಐಡಿಗೆ ನೀಡಿ, ತನಿಖೆಯನ್ನು ಸಿಐಡಿಗೆ ಕೊಡುವ ಬಗ್ಗೆ ತೀರ್ಮಾನ ಮಾಡಲಾಗುತ್ತಿದೆ” ಎಂದು ಹೇಳಿದರು.

Advertisements

“ಎರಡು ಬಾರಿ ಬಿಟ್ ಕಾಯಿನ್ ಹಗರಣ ಕುರಿತು ಸಭೆ ನಡೆಸಲಾಗಿದೆ. ತಾಂತ್ರಿಕವಾಗಿ ಯಾರಿಗೆಲ್ಲ ಹಣ ಹೋಗಿದೆ? ಕಾನೂನುಬಾಹಿರವಾಗಿ ಸಾವಿರಾರು ಕೋಟಿ ಹಣ ವರ್ಗಾವಣೆಯಾಗಿದೆ. ಕೆಲವೊಂದು ವಿಚಾರಗಳನ್ನು ಹೇಳಲು ಆಗಲ್ಲ. ಯಾವ ಯಾವ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ತನಿಖೆ ಮಾಡಿಸುತ್ತೇವೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಹಿಂದಿನ ಸರ್ಕಾರದ ಪ್ರಮುಖ ಹಗರಣಗಳ ತನಿಖೆ ನಡೆಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪಿಎಸ್ಐ ಪ್ರಕರಣ

“ಪಿಎಸ್ಐ ಪ್ರಕರಣವನ್ನು ನ್ಯಾಯಾಲಯ ತೀರ್ಪಿನ ಆಧಾರದಲ್ಲಿ ನಿರ್ಧಾರ ಮಾಡುತ್ತೇವೆ. ಯಾವ ಯಾವ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಆ ಬಗ್ಗೆ ತನಿಖೆ ಮಾಡಿಸುತ್ತೇವೆ. ಇದೇ ಮಾತನ್ನು ಸಿಎಂ ಕೂಡ ಹೇಳಿದ್ದಾರೆ” ಎಂದರು.

ಫೇಕ್ ನ್ಯೂಸ್ ಹರಡುವವರಿಗೆ ಶಿಕ್ಷೆ

“ಫೇಕ್ ನ್ಯೂಸ್ ಹರಡುವುದರಲ್ಲಿ ಕೆಲವರು ನಿರತರಾಗಿದ್ದಾರೆ. ಅದು ರಾಜಕೀಯ ಇರಬಹುದು ಅಥವಾ ಸಮಾಜದ ಶಾಂತಿ ಕದಡುವ ವಿಚಾರ ಇರಬಹುದು. ಸುಳ್ಳು ಸುದ್ದಿಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುವುದನ್ನು ಗಮನಿಸಿದ್ದೇವೆ. ಫೇಕ್ ನ್ಯೂಸ್ ಹರಡುವವರಿಗೆ ಶಿಕ್ಷೆ ನೀಡುವ ನಿಟ್ಟಿನಲ್ಲಿ ಸೂಕ್ತ ಕಾನೂನು ಜಾರಿಗೆ ತರಲಾಗುವುದು” ಎಂದು ಇದೇ ವೇಳೆ ಪರಮೇಶ್ವರ್‌ ತಿಳಿಸಿದರು.

“ಸಂಬಂಧವೇ ಇಲ್ಲದ ಫೋಟೋಗಳನ್ನು ಹಾಕಿ ಸಂಬಂಧ ಕಲ್ಪಿಸುವುದು ನಡೆಯುತ್ತಿದೆ. ಸರ್ಕಾರ ರಚನೆ ಆದಮೇಲೆ ಫೇಕ್ ನ್ಯೂಸ್ ಗಮನಿಸಿದ್ದೇವೆ. ಇದನ್ನು ಇಲ್ಲಿಗೆ ನಿಲ್ಲಿಸದಿದ್ದರೆ ಬಹಳಷ್ಟು ಸಮಸ್ಯೆ ಎದುರಿಸಲಿದ್ದಾರೆ” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X