ಆರ್‌ಎಸ್‌ಎಸ್ ಹೆಸರು ದುರ್ಬಳಕೆ: ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

Date:

Advertisements

ಲೋಕಸಭೆ ಚುನಾವಣೆಗೂ ಮುನ್ನ ಆಡಳಿತ ಪಕ್ಷದ ವಿರುದ್ಧ ಅಪಪ್ರಚಾರ ಮಾಡಲು ಕಾಂಗ್ರೆಸ್ ನಾಯಕರ ಜೊತೆಗಿನ ಸಂಘಟನೆಯೊಂದು ಆರ್‌ಎಸ್‌ಎಸ್‌ ಹೆಸರನ್ನು ದುರುಪಯೋಗ ಮಾಡುತ್ತಿದೆ ಎಂದು ಬಿಜೆಪಿ ಸೋಮವಾರ ಆರೋಪಿಸಿದೆ. ಹಾಗೆಯೇ ಕಾಂಗ್ರೆಸ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಬಿಜೆಪಿಯ ರಾಷ್ಟ್ರೀಯ ಸಂಘಟನೆಯ ಕಾರ್ಯದರ್ಶಿ ಅರುಣ್ ಸಿಂಗ್, ಸಂಜಯ್ ಮಯೂಖ್ ಮತ್ತು ಓಂ ಪಾಠಕ್ ಸೇರಿದಂತೆ ಬಿಜೆಪಿ ನಾಯಕರ ನಿಯೋಗ ಚುನಾವಣಾ ಸಮಿತಿಯನ್ನು ಸಂಪರ್ಕಿಸಿ ಈ ಸಂಬಂಧ ದೂರು ಸಲ್ಲಿಸಿದ್ದಾರೆ. ‘ನಕಲಿ’ ಸಂಘಟನೆಯ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾಂಗ್ರೆಸ್‌ಗೆ ನೋಟಿಸ್ ಜಾರಿ ಮಾಡುವಂತೆ ಒತ್ತಾಯಿಸಿದೆ.

ಇದನ್ನು ಓದಿದ್ದೀರಾ?   ಆರ್‌ಎಸ್‌ಎಸ್‌-ಬಿಜೆಪಿ ವಿಷದಂತೆ, ವಿಪಕ್ಷಗಳು ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕು: ಮಲ್ಲಿಕಾರ್ಜುನ ಖರ್ಗೆ

Advertisements

ಈ ಆರೋಪದ ಬಗ್ಗೆ ಕಾಂಗ್ರೆಸ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆರ್‌ಎಸ್‌ಎಸ್‌ನ ಹೆಸರನ್ನು ನೋಂದಾಯಿಸದೇ ಇರುವ ಅಸಿಸ್ಟೆಂಟ್ ರಿಜಿಸ್ಟ್ರಾರ್ ಆಫ್ ಸೊಸೈಟಿಗಳ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ತನ್ನ ಅರ್ಜಿಯನ್ನು ವಜಾಗೊಳಿಸಿದ್ದರೂ, ಗೊಂದಲ ಸೃಷ್ಟಿಸಲು ಸಂಘಟನೆಯು ಕಾನೂನುಬಾಹಿರವಾಗಿ ಜನರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದೆ ಎಂದು ಅರುಣ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು. ಈಗಾಗಲೇ 1925 ರಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಾವಣೆಯಾಗಿದೆ ಎಂದಿದ್ದಾರೆ.

“ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯವರ ಆಜ್ಞೆಯ ಮೇರೆಗೆ ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ಹೆಸರಿನಲ್ಲಿ ನಕಲಿ ಸಂಘಟನೆಯನ್ನು ಸೃಷ್ಟಿಸಲಾಗಿದೆ. ಗೊಂದಲವನ್ನು ಸೃಷ್ಟಿಸಲು ಮತ್ತು ದೇಶದ ಜನರನ್ನು ದಾರಿತಪ್ಪಿಸಲು ಪ್ರಯತ್ನಿಸಲಾಗುತ್ತಿದೆ” ಎಂದು ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿದ ನಂತರ ಸಿಂಗ್ ಆರೋಪಿಸಿದ್ದಾರೆ.

ಕಾಂಗ್ರೆಸ್‌ನ ಸೇವಾದಳದ ಮುಖ್ಯಸ್ಥರು ಈ “ನಕಲಿ” ಸಂಘಟನೆಯ ಮುಖ್ಯಸ್ಥರಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಬಿಜೆಪಿಯನ್ನು ಸೋಲಿಸಬೇಕು ಎಂದು ಹೇಳಿಕೊಂಡು ಈ ಸಂಘಟನೆಯು ಜನರನ್ನು ತಲುಪುತ್ತಿದೆ ಎಂದು ಸಿಂಗ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X