ಡಿಕೆಶಿ, ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು ದಾಖಲಿಸಿಕೊಂಡ ಚುನಾವಣಾ ಆಯೋಗ

Date:

Advertisements
  • ಬಿಜೆಪಿಯ ಎರಡು ಪ್ರತ್ಯೇಕ ದೂರು ದಾಖಲಿಸಿಕೊಂಡ ಚುನಾವಣಾ ಆಯೋಗ
  • ಮತದಾರರ ಮೇಲೆ ಪ್ರಭಾವ ಬೀರಿದ ಆರೋಪ ಹೊತ್ತ ಡಿಕೆಶಿ, ಜಾಕಿರ್‌ ಹುಸೇನ್

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಎಸ್‌ಡಿಪಿಐ ಮುಖಂಡನ ವಿರುದ್ದ ರಾಜ್ಯ ಬಿಜೆಪಿ ನೀಡಿದ್ದ ದೂರನ್ನು ಚುನಾವಣಾ ಆಯೋಗ ದಾಖಲಿಸಿಕೊಂಡಿದೆ.

ಮಂಗಳವಾರ ಮಂಡ್ಯ ಜಿಲ್ಲೆಯ ಬೇವಿನಹಳ್ಳಿಯಲ್ಲಿ ಕಾಂಗ್ರೆಸ್‌ನ ʼಪ್ರಜಾಧ್ವನಿʼ ಯಾತ್ರೆ ನಡೆದ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಕಲಾವಿದರತ್ತ ಹಣ ಎಸೆದಿದ್ದರು. ‌ಆ ಮೂಲಕ ಅವರು ಚುನಾವಣಾ ನೀತಿ ಸಂಹಿತಿ ಉಲ್ಲಂಘಿಸಿದ್ದಾರೆಂದು ಬಿಜೆಪಿ ಆರೋಪಿಸಿದೆ.

ಡಿಕೆಶಿ ಜೊತೆಗೆ ಶ್ರೀರಂಗಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ರಮೇಶ ಬಂಡಿಸಿದ್ದೇಗೌಡರ ವಿರುದ್ಧವೂ ಕ್ರಮ ಕೈಗೊಳ್ಳಲು ಬಿಜೆಪಿ ರಾಜ್ಯ ಸಮಿತಿ ಆಗ್ರಹಿಸಿದೆ. ಈ ವಿಚಾರವಾಗಿ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಭಾರತೀಯ ಜನತಾ ಪಕ್ಷ ಮನವಿ ಸಲ್ಲಿಸಿದೆ.

Advertisements

ಪಕ್ಷದ ಪ್ರಚಾರ ಕಾರ್ಯದಲ್ಲಿದ್ದ ಶಿವಕುಮಾರ್, ಕಲಾವಿದರು ಹಾಗೂ ಜನರತ್ತ 500ರ ನೋಟುಗಳನ್ನು ಎಸೆದು ಮತದಾರರ ಮೇಲೆ ಪ್ರಭಾವ ಬೀರಲು ಅವರು ಮುಂದಾಗಿದ್ದಾರೆ ಎಂದು ದೂರಿನಲ್ಲಿ ಗಮನ ಸೆಳೆಯಲಾಗಿದೆ.

ಎರಡನೇ ದೂರು:
ಚಿತ್ರದುರ್ಗ ಜಿಲ್ಲಾ ಎಸ್‌ಡಿಪಿಐ ಅಧ್ಯಕ್ಷ ಜಾಕೀರ್ ಹುಸೇನ್ ವಿರುದ್ಧವೂ ಬಿಜೆಪಿ ಆಯೋಗಕ್ಕೆ ದೂರು ದಾಖಲಿಸಿದೆ.

ಶಾಂತಿ ಕದಡುವ, ದ್ವೇಷ ಹರಡುವ ಮತ್ತು ಮಾನಹಾನಿ ಮಾಡುವ ಉದ್ದೇಶದ ಹೇಳಿಕೆಯನ್ನು ಜಾಕಿರ್ ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಮುಸ್ಲಿಮರ ಮೀಸಲಾತಿ ರದ್ದು ಮಾಡಿದ ಸಂಬಂಧ ನಡೆದ ಪ್ರತಿಭಟನೆಯಲ್ಲಿ ಜಾಕೀರ್ ಹುಸೇನ್,“ನಮ್ಮ ಹಕ್ಕನ್ನು ಹೀನಾಯವಾಗಿ ಕಸಿದುಕೊಳ್ಳಲಾಗಿದೆ. ನಮ್ಮ ಹಕ್ಕನ್ನು ವಾಪಸ್ ಕೊಡದಿದ್ದರೆ ಸಿಎಂ ಬೊಮ್ಮಾಯಿಯವರ ಬಟ್ಟೆ ಬಿಚ್ಚಿಸುತ್ತೇವೆ” ಎಂದು ಪ್ರಚೋದನಕಾರಿ ಮಾತುಗಳನ್ನಾಡಿದ್ದಾರೆ.

ʼಹಿಜಾಬ್, ಆಜಾನ್‌ಗೆ ತಲೆ ಕೊಟ್ಟೆವು. ಮೀಸಲಾತಿ ವಿಚಾರದಲ್ಲಿ ತಲೆ ಹೋದರೂ ಚಿಂತೆಯಿಲ್ಲ. ಜೈಲಿಗೆ ಹೋದರೂ ಚಿಂತೆಯಿಲ್ಲ. ನಾವೆಲ್ಲ ಉಗ್ರವಾಗಿ ಹೋರಾಡುತ್ತೇವೆʼಎಂದು ಎಸ್‌ಡಿಪಿಐ ನಾಯಕ ಹೇಳಿದ್ದಾರೆ ಎಂದು ಬಿಜೆಪಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಾಮಾಜಿಕ ಶಾಂತಿಗೆ ಹಾನಿ ಉಂಟು ಮಾಡುವ ಮತ್ತು ದ್ವೇಷ ಹರಡುವ ಉದ್ದೇಶದ ಈ ಮಾತುಗಳನ್ನು ಗಮನಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಕೋರಲಾಗಿದೆ.

ಈ ಸುದ್ದಿ ಓದಿದೀರಾ? :ಗೊಂದಲ ಗಲಭೆ ಇಲ್ಲದ ಚುನಾವಣೆ ನಡೆಯಲಿ: ಶೋಭಾ ಕರಂದ್ಲಾಜೆ

ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ಈ ದೂರು ದಾಖಲಾಗಿದೆ. ಅಂತಿಮವಾಗಿ ಈ ಇಬ್ಬರೂ ನಾಯಕರ ವಿರುದ್ದ ಕ್ರಮಕ್ಕೆ ಬಿಜೆಪಿ ಆಯೋಗವನ್ನು ಒತ್ತಾಯಿಸಿದೆ.

ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಲು ತೆರಳಿದ್ದ ಬಿಜೆಪಿ ನಿಯೋಗದಲ್ಲಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ಯೋಗೇಂದ್ರ ಹೂಡಘಟ್ಟ, ಜಿಲ್ಲಾ ವಕ್ತಾರ ರಾಘವೇಂದ್ರ ರಾವ್ ಅವರಿದ್ದರು.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X